<p><strong>ಚೆನ್ನೈ:</strong> ತಮಿಳುನಾಡು ನೂತನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.</p>.<p>ಈ ಬಳಿಕ ಸ್ಟಾಲಿನ್ ಅವರು ರಾಜ್ಯ ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ಸಂಪುಟ ಸದಸ್ಯರನ್ನು ಅವರಿಗೆ ಪರಿಚಯಿಸಿದರು.</p>.<p><strong>ಓದಿ:</strong><a href="https://www.prajavani.net/india-news/maharashtra-politics-maha-vikas-aghadi-government-bjp-shiv-sena-867669.html" itemprop="url">ಮಹಾರಾಷ್ಟ್ರ ರಾಜಕೀಯ: ಬಿಜೆಪಿ–ಸೇನಾ ಮೈತ್ರಿ ಬಗ್ಗೆ ಚಿಗುರೊಡೆದ ‘ಹೇಳಿಕೆಗಳು’</a></p>.<p>ಈ ಹಿಂದಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಪಂಜಾಬ್ಗೆ ವರ್ಗಾಯಿಸಲಾಗಿದೆ.</p>.<p>ಕಳೆದ ವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರ್.ಎನ್ ರವಿ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಿಸಿದರು. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ರವಿ ಅವರು ಈ ಹಿಂದೆ ಕೇಂದ್ರ ಸರ್ಕಾರದ ನಾಗಾ ಶಾಂತಿ ಮಾತುಕತೆಯ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡು ನೂತನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.</p>.<p>ಈ ಬಳಿಕ ಸ್ಟಾಲಿನ್ ಅವರು ರಾಜ್ಯ ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ಸಂಪುಟ ಸದಸ್ಯರನ್ನು ಅವರಿಗೆ ಪರಿಚಯಿಸಿದರು.</p>.<p><strong>ಓದಿ:</strong><a href="https://www.prajavani.net/india-news/maharashtra-politics-maha-vikas-aghadi-government-bjp-shiv-sena-867669.html" itemprop="url">ಮಹಾರಾಷ್ಟ್ರ ರಾಜಕೀಯ: ಬಿಜೆಪಿ–ಸೇನಾ ಮೈತ್ರಿ ಬಗ್ಗೆ ಚಿಗುರೊಡೆದ ‘ಹೇಳಿಕೆಗಳು’</a></p>.<p>ಈ ಹಿಂದಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಪಂಜಾಬ್ಗೆ ವರ್ಗಾಯಿಸಲಾಗಿದೆ.</p>.<p>ಕಳೆದ ವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರ್.ಎನ್ ರವಿ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಿಸಿದರು. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ರವಿ ಅವರು ಈ ಹಿಂದೆ ಕೇಂದ್ರ ಸರ್ಕಾರದ ನಾಗಾ ಶಾಂತಿ ಮಾತುಕತೆಯ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>