<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ₹1.50 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆಗೆ, ಕೇಂದ್ರ ಸರ್ಕಾರವು ಮಂಗಳವಾರ ಅಧಿಸೂಚನೆ ಹೊರಡಿಸಿದೆ.</p> <p>ಕಳೆದ ವರ್ಷದ ಮಾರ್ಚ್ 14ರಂದು ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ನಂತರ ಆರು ರಾಜ್ಯಗಳಿಗೆ ವಿಸ್ತರಿಸಲಾಗಿತ್ತು. ಈಗ ದೇಶದಾದ್ಯಂತ ವಿಸ್ತರಣೆಗೊಂಡಿದೆ.</p> <p>ಮೇ 5ರಿಂದಲೇ ರಸ್ತೆ ಅಪಘಾತದಲ್ಲಿ ಸಂತ್ರಸ್ತರಾದವರಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಅಧಿಕೃತವಾಗಿ ಜಾರಿಗೆ ಬಂದಿದೆ. ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಗಳಲ್ಲಿ ಅಪಘಾತ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಸಂತ್ರಸ್ತರಿಗೆ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿಳಿಸಿದೆ.</p> <p>ಯೋಜನೆ ಜಾರಿಯ ವಿಳಂಬದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.</p> <p>ಅಪಘಾತದ ವೇಳೆ ಸಕಾಲದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ದೊರೆಯದಿದ್ದರೆ ಮೃತಪಡುವವರ ಸಂಖ್ಯೆ ಹೆಚ್ಚುತ್ತದೆ. ಇದನ್ನು ತಗ್ಗಿಸುವ ದೃಷ್ಟಿಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.</p> <p>ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಈ ಯೋಜನೆ ಅನುಷ್ಠಾನದ ಏಜೆನ್ಸಿಯಾಗಿದೆ. ಪೊಲೀಸರು, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಏಜೆನ್ಸಿಗಳ ಸಹಯೋಗದಡಿ ಯೋಜನೆಯ ಸಮರ್ಪಕ ಅನುಷ್ಠಾನದ ಹೊಣೆ ಹೊತ್ತಿದೆ. </p> <p>ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಯೋಜನೆಯ ಅನುಷ್ಠಾನದ ನೋಡಲ್ ಏಜೆನ್ಸಿಯಾಗಿ ರಾಜ್ಯ ರಸ್ತೆ ಸುರಕ್ಷಾ ಪರಿಷತ್ ಕಾರ್ಯ ನಿರ್ವಹಿಸಲಿದೆ. ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ, ಆಸ್ಪತ್ರೆಗಳಿಗೆ ಶುಲ್ಕ ಪಾವತಿ ಇತ್ಯಾದಿ ಬಗ್ಗೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಜೊತೆಗೆ ಈ ಪರಿಷತ್ ಕಾರ್ಯ ನಿರ್ವಹಿಸಲಿದೆ. </p> <p>ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲು ಕೇಂದ್ರವು 11 ಸದಸ್ಯರ ಸಮಿತಿ ರಚಿಸಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ, ಕೇಂದ್ರ ರಸ್ತೆ ಸಾರಿಗೆ ಮತ್ತು ಸಚಿವಾಲಯದ ಕಾರ್ಯದರ್ಶಿ ಈ ಸಮಿತಿಯ ಸದಸ್ಯರಾಗಿದ್ದಾರೆ.</p> <p>ಸಚಿವಾಲಯದ ಮಾಹಿತಿ ಪ್ರಕಾರ, 2023ರಲ್ಲಿ ದೇಶದಾದ್ಯಂತ 4.80 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.72 ಲಕ್ಷ ಜನರು ಮೃತಪಟ್ಟಿದ್ದಾರೆ.</p>.<p>ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮೊದಲು 2024ರ ಮಾರ್ಚ್ನಲ್ಲಿ ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. ನಂತರ ಅದನ್ನು ಆರು ರಾಜ್ಯಗಳಿಗೆ ವಿಸ್ತರಿಸಲಾಗಿತ್ತು. ಈಗ ಈ ಯೋಜನೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸಲಾಗಿದೆ.</p>.ರಸ್ತೆ ಅಪಘಾತದ ಗಾಯಾಳುಗಳಿಗೆ ‘ನಗದು ರಹಿತ ಚಿಕಿತ್ಸೆ’ ಯೋಜನೆ ಘೋಷಿಸಿದ ಗಡ್ಕರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ₹1.50 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆಗೆ, ಕೇಂದ್ರ ಸರ್ಕಾರವು ಮಂಗಳವಾರ ಅಧಿಸೂಚನೆ ಹೊರಡಿಸಿದೆ.</p> <p>ಕಳೆದ ವರ್ಷದ ಮಾರ್ಚ್ 14ರಂದು ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ನಂತರ ಆರು ರಾಜ್ಯಗಳಿಗೆ ವಿಸ್ತರಿಸಲಾಗಿತ್ತು. ಈಗ ದೇಶದಾದ್ಯಂತ ವಿಸ್ತರಣೆಗೊಂಡಿದೆ.</p> <p>ಮೇ 5ರಿಂದಲೇ ರಸ್ತೆ ಅಪಘಾತದಲ್ಲಿ ಸಂತ್ರಸ್ತರಾದವರಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಅಧಿಕೃತವಾಗಿ ಜಾರಿಗೆ ಬಂದಿದೆ. ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಗಳಲ್ಲಿ ಅಪಘಾತ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಸಂತ್ರಸ್ತರಿಗೆ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿಳಿಸಿದೆ.</p> <p>ಯೋಜನೆ ಜಾರಿಯ ವಿಳಂಬದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.</p> <p>ಅಪಘಾತದ ವೇಳೆ ಸಕಾಲದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ದೊರೆಯದಿದ್ದರೆ ಮೃತಪಡುವವರ ಸಂಖ್ಯೆ ಹೆಚ್ಚುತ್ತದೆ. ಇದನ್ನು ತಗ್ಗಿಸುವ ದೃಷ್ಟಿಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.</p> <p>ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಈ ಯೋಜನೆ ಅನುಷ್ಠಾನದ ಏಜೆನ್ಸಿಯಾಗಿದೆ. ಪೊಲೀಸರು, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಏಜೆನ್ಸಿಗಳ ಸಹಯೋಗದಡಿ ಯೋಜನೆಯ ಸಮರ್ಪಕ ಅನುಷ್ಠಾನದ ಹೊಣೆ ಹೊತ್ತಿದೆ. </p> <p>ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಯೋಜನೆಯ ಅನುಷ್ಠಾನದ ನೋಡಲ್ ಏಜೆನ್ಸಿಯಾಗಿ ರಾಜ್ಯ ರಸ್ತೆ ಸುರಕ್ಷಾ ಪರಿಷತ್ ಕಾರ್ಯ ನಿರ್ವಹಿಸಲಿದೆ. ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ, ಆಸ್ಪತ್ರೆಗಳಿಗೆ ಶುಲ್ಕ ಪಾವತಿ ಇತ್ಯಾದಿ ಬಗ್ಗೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಜೊತೆಗೆ ಈ ಪರಿಷತ್ ಕಾರ್ಯ ನಿರ್ವಹಿಸಲಿದೆ. </p> <p>ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲು ಕೇಂದ್ರವು 11 ಸದಸ್ಯರ ಸಮಿತಿ ರಚಿಸಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ, ಕೇಂದ್ರ ರಸ್ತೆ ಸಾರಿಗೆ ಮತ್ತು ಸಚಿವಾಲಯದ ಕಾರ್ಯದರ್ಶಿ ಈ ಸಮಿತಿಯ ಸದಸ್ಯರಾಗಿದ್ದಾರೆ.</p> <p>ಸಚಿವಾಲಯದ ಮಾಹಿತಿ ಪ್ರಕಾರ, 2023ರಲ್ಲಿ ದೇಶದಾದ್ಯಂತ 4.80 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.72 ಲಕ್ಷ ಜನರು ಮೃತಪಟ್ಟಿದ್ದಾರೆ.</p>.<p>ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮೊದಲು 2024ರ ಮಾರ್ಚ್ನಲ್ಲಿ ಚಂಡೀಗಢದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. ನಂತರ ಅದನ್ನು ಆರು ರಾಜ್ಯಗಳಿಗೆ ವಿಸ್ತರಿಸಲಾಗಿತ್ತು. ಈಗ ಈ ಯೋಜನೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸಲಾಗಿದೆ.</p>.ರಸ್ತೆ ಅಪಘಾತದ ಗಾಯಾಳುಗಳಿಗೆ ‘ನಗದು ರಹಿತ ಚಿಕಿತ್ಸೆ’ ಯೋಜನೆ ಘೋಷಿಸಿದ ಗಡ್ಕರಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>