<p><strong>ಜೈಪುರ</strong>: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಪೊಲೀಸ್ ವಾಹನವು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.</p><p>ಸುಜನ್ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಚುರು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ತಿಳಿಸಿದ್ದಾರೆ.</p><p>ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ತಾರಾನಗರಕ್ಕೆ ತೆರಳುತ್ತಿದ್ದರು.</p><p>ಮೃತ ಪೊಲೀಸರನ್ನು ಖಿಂವ್ಸರ್ ಪೊಲೀಸ್ ಠಾಣೆಯ ಎಎಸ್ಐ ರಾಮಚಂದ್ರ, ಕಾನ್ಸ್ಟೆಬಲ್ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.</p><p>ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಂತಾಪ ಸೂಚಿಸಿದ್ದಾರೆ.</p><p>;ಇಂದು ಮುಂಜಾನೆ, ಚುರುವಿನ ಸುಜನ್ಗಢ್ ಸದರ್ ಪ್ರದೇಶದಲ್ಲಿ ವಾಹನ ಅಪಘಾತದಲ್ಲಿ ಪೊಲೀಸರು ಮೃತಪಟ್ಟಿರುವ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಸಾವಿಗೀಡಾದ ಎಲ್ಲಾ ಪೊಲೀಸರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಾದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಪೊಲೀಸ್ ವಾಹನವು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.</p><p>ಸುಜನ್ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಚುರು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ತಿಳಿಸಿದ್ದಾರೆ.</p><p>ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ತಾರಾನಗರಕ್ಕೆ ತೆರಳುತ್ತಿದ್ದರು.</p><p>ಮೃತ ಪೊಲೀಸರನ್ನು ಖಿಂವ್ಸರ್ ಪೊಲೀಸ್ ಠಾಣೆಯ ಎಎಸ್ಐ ರಾಮಚಂದ್ರ, ಕಾನ್ಸ್ಟೆಬಲ್ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.</p><p>ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಂತಾಪ ಸೂಚಿಸಿದ್ದಾರೆ.</p><p>;ಇಂದು ಮುಂಜಾನೆ, ಚುರುವಿನ ಸುಜನ್ಗಢ್ ಸದರ್ ಪ್ರದೇಶದಲ್ಲಿ ವಾಹನ ಅಪಘಾತದಲ್ಲಿ ಪೊಲೀಸರು ಮೃತಪಟ್ಟಿರುವ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಸಾವಿಗೀಡಾದ ಎಲ್ಲಾ ಪೊಲೀಸರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಾದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>