<p><strong>ಮುಂಬೈ:</strong> ಟ್ರಕ್ ಸಹಾಯಕನನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.</p><p>ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ನೇತೃತ್ವದ ಪೀಠವು ಆರು ವಾರಗಳೊಳಗೆ ಟ್ರಕ್ ಸಹಾಯಕ ಪ್ರಹ್ಲಾದ್ ಕುಮಾರ್ಗೆ ₹4 ಲಕ್ಷ ಹಾಗೂ ಪೊಲೀಸ್ ಕಲ್ಯಾಣ ನಿಧಿಗೆ 1 ಲಕ್ಷ ಪರಿಹಾರ ನೀಡುವಂತೆ ದಿಲೀಪ್ ಖೇಡ್ಕರ್ ಅವರಿಗೆ ನಿರ್ದೇಶಿಸಿದೆ.</p><p>ನವಿ ಮುಂಬೈ ಸೆಷನ್ಸ್ ನ್ಯಾಯಾಲಯವು ದಿಲೀಪ್ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಖೇಡ್ಕರ್ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.</p><p>ಮುಂಬೈನ ಸ್ಯಾಟಲೈಟ್ ಟೌನ್ಶಿಪ್ನ ಮುಳುಂದ್– ಐರೋಲಿ ರಸ್ತೆಯಲ್ಲಿ ಸೆಪ್ಟೆಂಬರ್ 13ರಂದು ಟ್ರಕ್ವೊಂದು ಎಸ್ಯುವಿ ಕಾರಿಗೆ ಸಣ್ಣ ಪ್ರಮಾಣದಲ್ಲಿ ಡಿಕ್ಕಿಯಾಗಿತ್ತು. ಟ್ರಕ್ನಲ್ಲಿ ಚಾಲಕ ಚಾಂದ್ಕುಮಾರ್ ಚವಾಣ್ ಅವರೊಂದಿಗೆ 22 ವರ್ಷದ ಪ್ರಹ್ಲಾದ್ ಕುಮಾರ್ ಇದ್ದರು.</p><p>ನಷ್ಟ ಪರಿಹಾರ ನೀಡುವಂತೆ ದಿಲೀಪ್ ಹಾಗೂ ಇನ್ನಿಬ್ಬರು ಚಾಂದ್ಕುಮಾರ್ ಹಾಗೂ ಪ್ರಹ್ಲಾದ್ಗೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಗಲಾಟೆ ನಡೆಯಿತು. ಬಳಿಕ ಪೊಲೀಸ್ ಠಾಣೆಗೆ ಹೋಗುವ ನೆಪದಲ್ಲಿ ಪ್ರಹ್ಲಾದ್ ಕುಮಾರ್ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ಪ್ರಹ್ಲಾದ್ ಅವರನ್ನು ಪೂಜಾ ಖೇಡ್ಕರ್ ಅವರ ಪುಣೆಯ ನಿವಾಸದಲ್ಲಿ ಪೊಲೀಸರು ರಕ್ಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಟ್ರಕ್ ಸಹಾಯಕನನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.</p><p>ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ನೇತೃತ್ವದ ಪೀಠವು ಆರು ವಾರಗಳೊಳಗೆ ಟ್ರಕ್ ಸಹಾಯಕ ಪ್ರಹ್ಲಾದ್ ಕುಮಾರ್ಗೆ ₹4 ಲಕ್ಷ ಹಾಗೂ ಪೊಲೀಸ್ ಕಲ್ಯಾಣ ನಿಧಿಗೆ 1 ಲಕ್ಷ ಪರಿಹಾರ ನೀಡುವಂತೆ ದಿಲೀಪ್ ಖೇಡ್ಕರ್ ಅವರಿಗೆ ನಿರ್ದೇಶಿಸಿದೆ.</p><p>ನವಿ ಮುಂಬೈ ಸೆಷನ್ಸ್ ನ್ಯಾಯಾಲಯವು ದಿಲೀಪ್ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಖೇಡ್ಕರ್ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.</p><p>ಮುಂಬೈನ ಸ್ಯಾಟಲೈಟ್ ಟೌನ್ಶಿಪ್ನ ಮುಳುಂದ್– ಐರೋಲಿ ರಸ್ತೆಯಲ್ಲಿ ಸೆಪ್ಟೆಂಬರ್ 13ರಂದು ಟ್ರಕ್ವೊಂದು ಎಸ್ಯುವಿ ಕಾರಿಗೆ ಸಣ್ಣ ಪ್ರಮಾಣದಲ್ಲಿ ಡಿಕ್ಕಿಯಾಗಿತ್ತು. ಟ್ರಕ್ನಲ್ಲಿ ಚಾಲಕ ಚಾಂದ್ಕುಮಾರ್ ಚವಾಣ್ ಅವರೊಂದಿಗೆ 22 ವರ್ಷದ ಪ್ರಹ್ಲಾದ್ ಕುಮಾರ್ ಇದ್ದರು.</p><p>ನಷ್ಟ ಪರಿಹಾರ ನೀಡುವಂತೆ ದಿಲೀಪ್ ಹಾಗೂ ಇನ್ನಿಬ್ಬರು ಚಾಂದ್ಕುಮಾರ್ ಹಾಗೂ ಪ್ರಹ್ಲಾದ್ಗೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಗಲಾಟೆ ನಡೆಯಿತು. ಬಳಿಕ ಪೊಲೀಸ್ ಠಾಣೆಗೆ ಹೋಗುವ ನೆಪದಲ್ಲಿ ಪ್ರಹ್ಲಾದ್ ಕುಮಾರ್ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ಪ್ರಹ್ಲಾದ್ ಅವರನ್ನು ಪೂಜಾ ಖೇಡ್ಕರ್ ಅವರ ಪುಣೆಯ ನಿವಾಸದಲ್ಲಿ ಪೊಲೀಸರು ರಕ್ಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>