ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಬರ್ಟ್‌ ವಾದ್ರಾ ಪ್ರಕರಣ: ಕಸ್ಟಡಿ ವಿಚಾರಣೆ ತಡೆ ಅರ್ಜಿ ತಿರಸ್ಕಾರ

Last Updated 22 ಡಿಸೆಂಬರ್ 2022, 11:10 IST
ಅಕ್ಷರ ಗಾತ್ರ

ಜೋಧ್‌ಪುರ: ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಕಸ್ಟಡಿ ವಿಚಾರಣೆಗೆ ತಡೆ ನೀಡುವಂತೆ ಕೋರಿ ಉದ್ಯಮಿ ರಾಬರ್ಟ್‌ ವಾದ್ರಾ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಇನ್ನೂ ಎರಡು ವಾರದವರೆಗೆ ಬಂಧಿಸುವಂತಿಲ್ಲ ಎಂದು ಹೇಳಿದೆ.

ವಾದ್ರಾ ಬಂಧನದ ಮೇಲಿನ ತಡೆಯಾಜ್ಞೆ 15 ದಿನ ಜಾರಿಯಲ್ಲಿರಲಿದ್ದು, ಅವರು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುತ್ತದೆ ಎಂದು ನ್ಯಾಯಮೂರ್ತಿ ಪಿ.ಎಸ್‌.ಭಾಟಿ ಹೇಳಿದ್ದಾರೆ.

ತಮ್ಮ ಸಂಪರ್ಕ ಹೊಂದಿರುವ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿಯು ಬಿಕಾನೇರ್‌ನಲ್ಲಿ ಭೂಮಿಯನ್ನು ಖರೀದಿಸಿದ ಕುರಿತು ವಾಧ್ರಾ ವಿಚಾರಣೆ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT