<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನೆಲಸಿರುವ ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಮಾಡಲು ಉತ್ತರ ಪ್ರದೇಶ ಸರ್ಕಾರ ಬಂಧನ ಕೇಂದ್ರಗಳನ್ನು ತೆರೆಯುವ ಯೋಜನೆಯನ್ನು ರೂಪಿಸಿದೆ. </p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದ 17 ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ನೆಲಸಿರುವ ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ಪ್ರಜೆಗಳ ಪಟ್ಟಿ ತಯಾರಿಸುವಂತೆ ಬುಧವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಇವರೆಲ್ಲರೂ ಉತ್ತರ ಪ್ರದೇಶದಲ್ಲಿ ನೈರ್ಮಲ್ಯ ಕೆಲಸಗಳಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಂಡಿದ್ದಾರೆ. ಇವರ ವಿವರವುಳ್ಳ ಪಟ್ಟಿಯನ್ನು ಆಯುಕ್ತರು ಮತ್ತು ಪೊಲೀಸ್ ಮಹಾ ನಿರೀಕ್ಷಕರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.</p>.<p>ದೆಹಲಿಗೆ ಹೊಂದಿಕೊಂಡ ಪ್ರತಿ ವಲಯದಲ್ಲೂ ಮೊದಲ ಹಂತದಲ್ಲಿ ಬಂಧನ ಕೇಂದ್ರಗಳನ್ನು ತೆರೆಯಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಅಕ್ರಮ ವಲಸಿಗರನ್ನು ಇರಿಸಲು ಖಾಲಿ ಇರುವ ಸರ್ಕಾರಿ ಕಟ್ಟಡಗಳು, ಸಮುದಾಯ ಕೇಂದ್ರಗಳು ಮತ್ತು ಪೊಲೀಸ್ ಬಿಗಿ ಕಣ್ಗಾವಲಿನ ವಸತಿಗಳನ್ನು ಆಯ್ಕೆ ಮಾಡಲಾಗುತ್ತಿದೆ.</p>.<p>ಅಕ್ರಮ ವಲಸಿಗರಲ್ಲಿ ಬಹುತೇಕರು ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ವಾಸಸ್ಥಳ ದಾಖಲೆಗಳನ್ನೂ ಪಡೆದಿದ್ದಾರೆ. ಇಂತಹ ದಾಖಲೆಗಳ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಹಲವು ಜಿಲ್ಲೆಗಳಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯ ನಡೆಯುತ್ತಿದೆ. ದಾಖಲೆಗಳ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಬಂಧನ ಕೇಂದ್ರಗಳಲ್ಲಿಟ್ಟು, ಆನಂತರ ಅವರ ದೇಶಗಳಿಗೆ ಗಡಿಪಾರು ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನೆಲಸಿರುವ ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಮಾಡಲು ಉತ್ತರ ಪ್ರದೇಶ ಸರ್ಕಾರ ಬಂಧನ ಕೇಂದ್ರಗಳನ್ನು ತೆರೆಯುವ ಯೋಜನೆಯನ್ನು ರೂಪಿಸಿದೆ. </p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದ 17 ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ನೆಲಸಿರುವ ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ಪ್ರಜೆಗಳ ಪಟ್ಟಿ ತಯಾರಿಸುವಂತೆ ಬುಧವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಇವರೆಲ್ಲರೂ ಉತ್ತರ ಪ್ರದೇಶದಲ್ಲಿ ನೈರ್ಮಲ್ಯ ಕೆಲಸಗಳಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಂಡಿದ್ದಾರೆ. ಇವರ ವಿವರವುಳ್ಳ ಪಟ್ಟಿಯನ್ನು ಆಯುಕ್ತರು ಮತ್ತು ಪೊಲೀಸ್ ಮಹಾ ನಿರೀಕ್ಷಕರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.</p>.<p>ದೆಹಲಿಗೆ ಹೊಂದಿಕೊಂಡ ಪ್ರತಿ ವಲಯದಲ್ಲೂ ಮೊದಲ ಹಂತದಲ್ಲಿ ಬಂಧನ ಕೇಂದ್ರಗಳನ್ನು ತೆರೆಯಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಅಕ್ರಮ ವಲಸಿಗರನ್ನು ಇರಿಸಲು ಖಾಲಿ ಇರುವ ಸರ್ಕಾರಿ ಕಟ್ಟಡಗಳು, ಸಮುದಾಯ ಕೇಂದ್ರಗಳು ಮತ್ತು ಪೊಲೀಸ್ ಬಿಗಿ ಕಣ್ಗಾವಲಿನ ವಸತಿಗಳನ್ನು ಆಯ್ಕೆ ಮಾಡಲಾಗುತ್ತಿದೆ.</p>.<p>ಅಕ್ರಮ ವಲಸಿಗರಲ್ಲಿ ಬಹುತೇಕರು ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ವಾಸಸ್ಥಳ ದಾಖಲೆಗಳನ್ನೂ ಪಡೆದಿದ್ದಾರೆ. ಇಂತಹ ದಾಖಲೆಗಳ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಹಲವು ಜಿಲ್ಲೆಗಳಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯ ನಡೆಯುತ್ತಿದೆ. ದಾಖಲೆಗಳ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಬಂಧನ ಕೇಂದ್ರಗಳಲ್ಲಿಟ್ಟು, ಆನಂತರ ಅವರ ದೇಶಗಳಿಗೆ ಗಡಿಪಾರು ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>