<p><strong>ನವದೆಹಲಿ:</strong> ರೋಹಿಂಗ್ಯಾ ಪ್ರಕರಣಗಳಲ್ಲಿ ಅವರು ನಿರಾಶ್ರಿತರೇ ಅಥವಾ ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರೇ ಎಂದು ಮೊದಲು ನಿರ್ಧರಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಎನ್.ಕೋಟೀಶ್ವರ ಸಿಂಗ್ ಅವರ ನೇತೃತ್ವದ ನ್ಯಾಯಪೀಠವು, ಈ ವಿಚಾರವು ನಿರ್ಧಾರವಾದರೆ, ಉಳಿದ ವಿಚಾರಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿತು.</p>.<p>ದೇಶದಲ್ಲಿನ ರೋಹಿಂಗ್ಯಾಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಸಲ್ಲಿಕೆಯಾದ ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.</p>.<p>‘ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸುವ ಹಕ್ಕು ಇದೆಯೇ? ಇರುವುದೇ ಆದಲ್ಲಿ ಅವರಿಗೆ ಲಭ್ಯವಿರುವ ಸೌಲಭ್ಯಗಳು, ಹಕ್ಕುಗಳು ಯಾವುದು’ ಎಂದು ನ್ಯಾಯಪೀಠ ಪ್ರಶ್ನಿಸಿತು.</p>.<p>ರೋಹಿಂಗ್ಯಾಗಳು ಅಕ್ರಮವಾಗಿ ಪ್ರವೇಶಿಸಿದ್ದವರಾಗಿದ್ದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರ ಗಡೀಪಾರಿಗೆ ಕ್ರಮ ಕೈಗೊಳ್ಳುವುದು ಸಮರ್ಥನೀಯವೇ ಎಂದು ನ್ಯಾಯಾಲಯ ಕೇಳಿತು.</p>.<p>ರೋಹಿಂಗ್ಯಾಗಳು ಅಕ್ರಮ ನುಸುಳುಕೋರರಾಗಿದ್ದರೆ ಅವರನ್ನು ಅನಿರ್ದಿಷ್ಟಾವಧಿವರೆಗೆ ಬಂಧಿಸಬಹುದೇ ಅಥವಾ ಜಾಮೀನು ಮೂಲಕ ಬಿಡುಗಡೆ ಮಾಡಬಹುದೇ ಎಂದೂ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೋಹಿಂಗ್ಯಾ ಪ್ರಕರಣಗಳಲ್ಲಿ ಅವರು ನಿರಾಶ್ರಿತರೇ ಅಥವಾ ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರೇ ಎಂದು ಮೊದಲು ನಿರ್ಧರಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಎನ್.ಕೋಟೀಶ್ವರ ಸಿಂಗ್ ಅವರ ನೇತೃತ್ವದ ನ್ಯಾಯಪೀಠವು, ಈ ವಿಚಾರವು ನಿರ್ಧಾರವಾದರೆ, ಉಳಿದ ವಿಚಾರಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿತು.</p>.<p>ದೇಶದಲ್ಲಿನ ರೋಹಿಂಗ್ಯಾಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಸಲ್ಲಿಕೆಯಾದ ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.</p>.<p>‘ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸುವ ಹಕ್ಕು ಇದೆಯೇ? ಇರುವುದೇ ಆದಲ್ಲಿ ಅವರಿಗೆ ಲಭ್ಯವಿರುವ ಸೌಲಭ್ಯಗಳು, ಹಕ್ಕುಗಳು ಯಾವುದು’ ಎಂದು ನ್ಯಾಯಪೀಠ ಪ್ರಶ್ನಿಸಿತು.</p>.<p>ರೋಹಿಂಗ್ಯಾಗಳು ಅಕ್ರಮವಾಗಿ ಪ್ರವೇಶಿಸಿದ್ದವರಾಗಿದ್ದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರ ಗಡೀಪಾರಿಗೆ ಕ್ರಮ ಕೈಗೊಳ್ಳುವುದು ಸಮರ್ಥನೀಯವೇ ಎಂದು ನ್ಯಾಯಾಲಯ ಕೇಳಿತು.</p>.<p>ರೋಹಿಂಗ್ಯಾಗಳು ಅಕ್ರಮ ನುಸುಳುಕೋರರಾಗಿದ್ದರೆ ಅವರನ್ನು ಅನಿರ್ದಿಷ್ಟಾವಧಿವರೆಗೆ ಬಂಧಿಸಬಹುದೇ ಅಥವಾ ಜಾಮೀನು ಮೂಲಕ ಬಿಡುಗಡೆ ಮಾಡಬಹುದೇ ಎಂದೂ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>