<p><strong>ನವದೆಹಲಿ</strong>: ‘ಪುತ್ರ ರೋಹಿತ್ ಶೇಖರ್ ಹಾಗೂ ಪತ್ನಿ ನಡುವೆ ಸೌಹಾರ್ದ ಸಂಬಂಧ ಇರಲಿಲ್ಲ. ರಾಜಕೀಯದಲ್ಲೂ ನಿರೀಕ್ಷಿತ ಯಶಸ್ಸು ಸಿಗದ ಕಾರಣ ಆತ ತುಂಬಾ ನೊಂದುಕೊಂಡಿದ್ದ’ ಎಂದು ಉತ್ತರಾಖಂಡದ ಮಾಜಿ ಸಿ.ಎಂ ಎನ್.ಡಿ. ತಿವಾರಿ ಪತ್ನಿ ಉಜ್ವಲಾ ಹೇಳಿದ್ದಾರೆ.</p>.<p>‘ರೋಹಿತ್- ಅಪೂರ್ವಅವರದು ಪ್ರೇಮ ವಿವಾಹ. ಆದರೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ’ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಸೊಸೆಯನ್ನು ನಂಬಿದ್ದೆ. ಹೀಗಾಗಿಯೇ ರೋಹಿತ್ ಮಂಗಳವಾರ ಸಂಜೆ 4 ಗಂಟೆವರೆಗೆ ಮಲಗಿದ್ದರೂ ಯಾಕೆ ಎಬ್ಬಿಸಲಿಲ್ಲ ಎಂದು ಪ್ರಶ್ನಿಸಲಿಲ್ಲ. ನನ್ನ ಪುತ್ರನನ್ನು ಕೊಲೆ ಮಾಡಲಾಗಿದೆ ಎಂಬುದನ್ನು ಕೇಳಿ ನನಗೆ ಆಘಾತವಾಗಿದೆ’ ಎಂದರು.</p>.<p><strong>ಕೊಲೆ ಪ್ರಕರಣ ದಾಖಲು:</strong> ರೋಹಿತ್ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸುವ ಮುನ್ನವೇ ಮೃತಪಟ್ಟಿದ್ದರು. ಇದರಿಂದಾಗಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿತ್ತು. ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ನಂತರ ಬಳಿಕ ಕೊಲೆ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪುತ್ರ ರೋಹಿತ್ ಶೇಖರ್ ಹಾಗೂ ಪತ್ನಿ ನಡುವೆ ಸೌಹಾರ್ದ ಸಂಬಂಧ ಇರಲಿಲ್ಲ. ರಾಜಕೀಯದಲ್ಲೂ ನಿರೀಕ್ಷಿತ ಯಶಸ್ಸು ಸಿಗದ ಕಾರಣ ಆತ ತುಂಬಾ ನೊಂದುಕೊಂಡಿದ್ದ’ ಎಂದು ಉತ್ತರಾಖಂಡದ ಮಾಜಿ ಸಿ.ಎಂ ಎನ್.ಡಿ. ತಿವಾರಿ ಪತ್ನಿ ಉಜ್ವಲಾ ಹೇಳಿದ್ದಾರೆ.</p>.<p>‘ರೋಹಿತ್- ಅಪೂರ್ವಅವರದು ಪ್ರೇಮ ವಿವಾಹ. ಆದರೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ’ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಸೊಸೆಯನ್ನು ನಂಬಿದ್ದೆ. ಹೀಗಾಗಿಯೇ ರೋಹಿತ್ ಮಂಗಳವಾರ ಸಂಜೆ 4 ಗಂಟೆವರೆಗೆ ಮಲಗಿದ್ದರೂ ಯಾಕೆ ಎಬ್ಬಿಸಲಿಲ್ಲ ಎಂದು ಪ್ರಶ್ನಿಸಲಿಲ್ಲ. ನನ್ನ ಪುತ್ರನನ್ನು ಕೊಲೆ ಮಾಡಲಾಗಿದೆ ಎಂಬುದನ್ನು ಕೇಳಿ ನನಗೆ ಆಘಾತವಾಗಿದೆ’ ಎಂದರು.</p>.<p><strong>ಕೊಲೆ ಪ್ರಕರಣ ದಾಖಲು:</strong> ರೋಹಿತ್ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸುವ ಮುನ್ನವೇ ಮೃತಪಟ್ಟಿದ್ದರು. ಇದರಿಂದಾಗಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿತ್ತು. ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ನಂತರ ಬಳಿಕ ಕೊಲೆ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>