<p>ಮುಂಬೈ: ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ನಿವಾಸದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಐವರು ಆರೋಪಿಗಳನ್ನು ಫೆಬ್ರುವರಿ 11ರವರೆಗೆ ಪೊಲೀಸ್ ವಶಕ್ಕೆ ನೀಡಿ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.</p>.<p>ಆರೋಪಿಗಳಾದ ಆದಿತ್ಯ ಗಯಕಿ (19), ಸಿದ್ದಾರ್ಥ್ ಎನ್ಪುರೆ (20), ಸಮರ್ಥ್ ಪೊಮಾಜಿ (18) ಮತ್ತು ಸ್ವಪ್ನಿಲ್ ಸಕತ್ನನ್ನು (23) ಭಾನುವಾರ ಬಂಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಆಸಾರಾಮ ಫಸಲೆಯನ್ನು ಗುರುವಾರ ಬಂಧಿಸಲಾಗಿದೆ. </p>.<p>ಆರೋಪಿಗಳಲ್ಲಿ ಒಬ್ಬನಿಂದ ಪಿಸ್ತೂಲ್, ಏರ್ ಗನ್ ಮತ್ತು ಮೂರು ಮ್ಯಾಗಜೀನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡು ಹಾರಿಸಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಆತನಿಗೆ ಆಯುಧವನ್ನು ಗುರುವಾರ ಬಂಧನಕ್ಕೊಳಗಾದ ಫಸಲೆ ಒದಗಿಸಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯ ಶುಭಂ ಲೋಂಕರ್ ಸೂಚನೆ ಮೇರೆಗೆ ಆರೋಪಿಗಳು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಶುಭಂ ಈ ಪ್ರಕರಣ ಸೇರಿದಂತೆ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲೂ ಬೇಕಾಗಿದ್ದಾನೆ.</p>.<p>ಭಾನುವಾರ ರಾತ್ರಿ 12.45ರ ವೇಳೆ ಮುಂಬೈನ ಜುಹು ಪ್ರದೇಶದಲ್ಲಿರುವ ರೋಹಿತ್ ಶೆಟ್ಟಿ ಅವರ ಒಂಬತ್ತು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಕನಿಷ್ಠ ಐದು ಸುತ್ತು ಗುಂಡು ಹಾರಿಸಲಾಗಿತ್ತು. ಒಂದು ಗುಂಡು ಕಟ್ಟಡದಲ್ಲಿರುವ ಜಿಮ್ನ ಗಾಜಿಗೆ ತಗುಲಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ: ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ನಿವಾಸದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಐವರು ಆರೋಪಿಗಳನ್ನು ಫೆಬ್ರುವರಿ 11ರವರೆಗೆ ಪೊಲೀಸ್ ವಶಕ್ಕೆ ನೀಡಿ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.</p>.<p>ಆರೋಪಿಗಳಾದ ಆದಿತ್ಯ ಗಯಕಿ (19), ಸಿದ್ದಾರ್ಥ್ ಎನ್ಪುರೆ (20), ಸಮರ್ಥ್ ಪೊಮಾಜಿ (18) ಮತ್ತು ಸ್ವಪ್ನಿಲ್ ಸಕತ್ನನ್ನು (23) ಭಾನುವಾರ ಬಂಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಆಸಾರಾಮ ಫಸಲೆಯನ್ನು ಗುರುವಾರ ಬಂಧಿಸಲಾಗಿದೆ. </p>.<p>ಆರೋಪಿಗಳಲ್ಲಿ ಒಬ್ಬನಿಂದ ಪಿಸ್ತೂಲ್, ಏರ್ ಗನ್ ಮತ್ತು ಮೂರು ಮ್ಯಾಗಜೀನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡು ಹಾರಿಸಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಆತನಿಗೆ ಆಯುಧವನ್ನು ಗುರುವಾರ ಬಂಧನಕ್ಕೊಳಗಾದ ಫಸಲೆ ಒದಗಿಸಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯ ಶುಭಂ ಲೋಂಕರ್ ಸೂಚನೆ ಮೇರೆಗೆ ಆರೋಪಿಗಳು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಶುಭಂ ಈ ಪ್ರಕರಣ ಸೇರಿದಂತೆ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲೂ ಬೇಕಾಗಿದ್ದಾನೆ.</p>.<p>ಭಾನುವಾರ ರಾತ್ರಿ 12.45ರ ವೇಳೆ ಮುಂಬೈನ ಜುಹು ಪ್ರದೇಶದಲ್ಲಿರುವ ರೋಹಿತ್ ಶೆಟ್ಟಿ ಅವರ ಒಂಬತ್ತು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಕನಿಷ್ಠ ಐದು ಸುತ್ತು ಗುಂಡು ಹಾರಿಸಲಾಗಿತ್ತು. ಒಂದು ಗುಂಡು ಕಟ್ಟಡದಲ್ಲಿರುವ ಜಿಮ್ನ ಗಾಜಿಗೆ ತಗುಲಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>