<p><strong>ನವದೆಹಲಿ</strong>: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರೋಹಿತ್ ವೇಮುಲರಂತೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜಾತಿ ಮತ್ತು ಜನಾಂಗೀಯ ದೌರ್ಜನ್ಯಗಳ ನಿಯಂತ್ರಣಕ್ಕೆ ‘ರೋಹಿತ್ ವೇಮುಲ’ ಕಾಯ್ದೆಯನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ತಿಳಿಸಿದೆ. </p>.<p>‘ರೋಹಿತ್ ವೇಮುಲ ಪ್ರಕರಣದ ಕುರಿತು ಈ ಹಿಂದೆ ನಡೆದ ತನಿಖೆಯಲ್ಲಿ ಬಹಳ ವ್ಯತ್ಯಾಸಗಳಾಗಿವೆ. ವೇಮುಲ ಕುಟುಂಬಕ್ಕೆ ನ್ಯಾಯ ಒದಗಿಸಲು ತೆಲಂಗಾಣದ ರೇವಂತ್ ರೆಡ್ಡಿ ಸರ್ಕಾರ ಬದ್ಧವಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ತಿಳಿಸಿದರು.</p>.<p>‘ಅಂತಿಮ ವರದಿಯು 2023ರ ಜೂನ್ನಲ್ಲಿಯೇ ಸಿದ್ಧವಾಗಿತ್ತು ಎಂದು ತೆಲಂಗಾಣ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ದೌರ್ಜನ್ಯದಿಂದಾಗಿ ರೋಹಿತ್ ವೇಮುಲ ಸಾವಾಗಿದ್ದು, ಇದು ಬಿಜೆಪಿಯ ದಲಿತ ವಿರೋಧಿ ಮನಃಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷವು ವೇಮುಲ ಕುಟುಂಬದ ಜೊತೆ ನಿಲ್ಲಲಿದೆ’ ಎಂದರು. </p>.<p>ಇತ್ತೀಚೆಗೆ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದ ತೆಲಂಗಾಣ ಪೊಲೀಸರು, ‘ರೋಹಿತ್ ದಲಿತನಾಗಿರಲಿಲ್ಲ ಮತ್ತು ತನ್ನ ನಿಜ ಗುರುತು ಬಯಲಾಗುವುದೆಂದು ಆತ ಆತ್ಮಹತ್ಯೆಗೆ ನಿರ್ಧರಿಸಿದ್ದ’ ಎಂದು ತಿಳಿಸಿದ್ದರು.</p>.<p>ವೇಮುಲ ತಾಯಿ ರಾಧಿಕಾ ವೇಮುಲ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಶನಿವಾರ ಭೇಟಿಯಾಗಿ ತನ್ನ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ಬಗ್ಗೆ ಮರುತನಿಖೆ ನಡೆಸುವುದಾಗಿ ರೇವಂತ್ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರೋಹಿತ್ ವೇಮುಲರಂತೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜಾತಿ ಮತ್ತು ಜನಾಂಗೀಯ ದೌರ್ಜನ್ಯಗಳ ನಿಯಂತ್ರಣಕ್ಕೆ ‘ರೋಹಿತ್ ವೇಮುಲ’ ಕಾಯ್ದೆಯನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ತಿಳಿಸಿದೆ. </p>.<p>‘ರೋಹಿತ್ ವೇಮುಲ ಪ್ರಕರಣದ ಕುರಿತು ಈ ಹಿಂದೆ ನಡೆದ ತನಿಖೆಯಲ್ಲಿ ಬಹಳ ವ್ಯತ್ಯಾಸಗಳಾಗಿವೆ. ವೇಮುಲ ಕುಟುಂಬಕ್ಕೆ ನ್ಯಾಯ ಒದಗಿಸಲು ತೆಲಂಗಾಣದ ರೇವಂತ್ ರೆಡ್ಡಿ ಸರ್ಕಾರ ಬದ್ಧವಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ತಿಳಿಸಿದರು.</p>.<p>‘ಅಂತಿಮ ವರದಿಯು 2023ರ ಜೂನ್ನಲ್ಲಿಯೇ ಸಿದ್ಧವಾಗಿತ್ತು ಎಂದು ತೆಲಂಗಾಣ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ದೌರ್ಜನ್ಯದಿಂದಾಗಿ ರೋಹಿತ್ ವೇಮುಲ ಸಾವಾಗಿದ್ದು, ಇದು ಬಿಜೆಪಿಯ ದಲಿತ ವಿರೋಧಿ ಮನಃಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷವು ವೇಮುಲ ಕುಟುಂಬದ ಜೊತೆ ನಿಲ್ಲಲಿದೆ’ ಎಂದರು. </p>.<p>ಇತ್ತೀಚೆಗೆ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದ ತೆಲಂಗಾಣ ಪೊಲೀಸರು, ‘ರೋಹಿತ್ ದಲಿತನಾಗಿರಲಿಲ್ಲ ಮತ್ತು ತನ್ನ ನಿಜ ಗುರುತು ಬಯಲಾಗುವುದೆಂದು ಆತ ಆತ್ಮಹತ್ಯೆಗೆ ನಿರ್ಧರಿಸಿದ್ದ’ ಎಂದು ತಿಳಿಸಿದ್ದರು.</p>.<p>ವೇಮುಲ ತಾಯಿ ರಾಧಿಕಾ ವೇಮುಲ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಶನಿವಾರ ಭೇಟಿಯಾಗಿ ತನ್ನ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ಬಗ್ಗೆ ಮರುತನಿಖೆ ನಡೆಸುವುದಾಗಿ ರೇವಂತ್ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>