<p><strong>ನೂಹ್ (ಹರಿಯಾಣ) (ಪಿಟಿಐ):</strong> ರೋಲ್ಸ್ ರಾಯ್ಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಕುಬೇರ್ ಗ್ರೂಪ್ ನಿರ್ದೇಶಕ ವಿಕಾಸ್ ಮಾಲು ಅವರಿಗೆ ಅಪಘಾತದ ತನಿಖೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.</p>.<p>ಹರಿಯಾಣದ ಉಮ್ರಿ ಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್ಪ್ರೆಸ್ ವೇನಲ್ಲಿ ಈಚೆಗೆ ಸಂಭವಿಸಿದ ಅಪಘಾತದಲ್ಲಿ ತೈಲ ಟ್ಯಾಂಕರ್ ಚಾಲಕ ಮತ್ತು ಅವರ ಸಹಾಯಕ ಮೃತಪಟ್ಟರೆ, ಮಾಲು ಸೇರಿದಂತೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದರು.</p>.<p>ಪ್ರಾಥಮಿಕ ವರದಿ ಪ್ರಕಾರ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ತೈಲ ಟ್ಯಾಂಕರ್ ಉಮ್ರಿ ಗ್ರಾಮದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ.</p>.<p>ಎಫ್ಐಆರ್ ಪ್ರಕಾರ, ಹಿಂದಿನಿಂದ ಬಂದ ಕಾರು ತೈಲ ಟ್ಯಾಂಕರ್ನ ಮುಂಭಾಗದ ಟೈರ್ಗೆ ಡಿಕ್ಕಿ ಹೊಡೆದಿದೆ. ಈ ಕಾರಣದಿಂದಾಗಿ, ಟ್ಯಾಂಕರ್ ಪಲ್ಟಿಯಾಗಿದೆ ಎಂದು ಉಲ್ಲೇಖಿಸಲಾಗಿದೆ. </p>.<p>ಮಾಲು ಅವರು ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಡುಗಡೆಯಾದ ನಂತರ ಅವರ ಹೇಳಿಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೂಹ್ (ಹರಿಯಾಣ) (ಪಿಟಿಐ):</strong> ರೋಲ್ಸ್ ರಾಯ್ಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಕುಬೇರ್ ಗ್ರೂಪ್ ನಿರ್ದೇಶಕ ವಿಕಾಸ್ ಮಾಲು ಅವರಿಗೆ ಅಪಘಾತದ ತನಿಖೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.</p>.<p>ಹರಿಯಾಣದ ಉಮ್ರಿ ಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್ಪ್ರೆಸ್ ವೇನಲ್ಲಿ ಈಚೆಗೆ ಸಂಭವಿಸಿದ ಅಪಘಾತದಲ್ಲಿ ತೈಲ ಟ್ಯಾಂಕರ್ ಚಾಲಕ ಮತ್ತು ಅವರ ಸಹಾಯಕ ಮೃತಪಟ್ಟರೆ, ಮಾಲು ಸೇರಿದಂತೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದರು.</p>.<p>ಪ್ರಾಥಮಿಕ ವರದಿ ಪ್ರಕಾರ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ತೈಲ ಟ್ಯಾಂಕರ್ ಉಮ್ರಿ ಗ್ರಾಮದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ.</p>.<p>ಎಫ್ಐಆರ್ ಪ್ರಕಾರ, ಹಿಂದಿನಿಂದ ಬಂದ ಕಾರು ತೈಲ ಟ್ಯಾಂಕರ್ನ ಮುಂಭಾಗದ ಟೈರ್ಗೆ ಡಿಕ್ಕಿ ಹೊಡೆದಿದೆ. ಈ ಕಾರಣದಿಂದಾಗಿ, ಟ್ಯಾಂಕರ್ ಪಲ್ಟಿಯಾಗಿದೆ ಎಂದು ಉಲ್ಲೇಖಿಸಲಾಗಿದೆ. </p>.<p>ಮಾಲು ಅವರು ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಡುಗಡೆಯಾದ ನಂತರ ಅವರ ಹೇಳಿಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>