<p><strong>ಡೆಹ್ರಾಡೂನ್</strong>: ತಾಂತ್ರಿಕ ದೋಷದಿಂದಾಗಿ ಉತ್ತರಾಖಂಡದ ಬಿಜೆಪಿ ಶಾಸಕ ಕಿಶೋರ್ ಉಪಾಧ್ಯಾಯ ಸೇರಿದಂತೆ 40ಕ್ಕೂ ಹೆಚ್ಚು ಭಕ್ತರು ಇಲ್ಲಿನ ರೋಪ್ವೇನಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಸಿಲುಕಿದ್ದ ಘಟನೆ ಭಾನುವಾರ ನಡೆದಿದೆ.</p>.<p>ಮಸ್ಸೂರಿ ಸಮೀಪದ ಸುರ್ಕಂದ ದೇವಿ ದೇವಸ್ಥಾನವನ್ನು ಸಂಪರ್ಕಿಸುವ ರೋಪ್ ವೇ ಮಾರ್ಗದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶಾಸಕ ಸೇರಿದಂತೆ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಉತ್ತರಾಖಂಡ ರಚನೆಯಾದ ನಂತರ ರಾಜ್ಯ ಪ್ರವಾಸೋದ್ಯಮ ಇಲಾಖೆ ಆರಂಭಿಸಿದ ಮೊದಲ ರೋಪ್ವೇ ಯೋಜನೆ ಇದಾಗಿದೆ. ಸುಮಾರು 502 ಮೀಟರ್ ಉದ್ದದ ರೋಪ್ವೇಯನ್ನು ₹ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.</p>.<p><strong>ರೋಪ್ ವೇ ನ್ಯೂನತೆ ಪತ್ತೆ ಹಚ್ಚಲು: ಎನ್ಡಿಆರ್ಎಫ್ ಸಮೀಕ್ಷೆ</strong><br />ಕೇಬಲ್ ಕಾರುಗಳು ಮತ್ತು ರೋಪ್ ವೇ ವ್ಯವಸ್ಥೆಯಲ್ಲಿ ಸಂಭವನೀಯ ಭದ್ರತಾ ನ್ಯೂನತೆಗಳನ್ನು ಪತ್ತೆ ಹಚ್ಚಲು ಮತ್ತು ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ರಕ್ಷಣಾ ಕಾರ್ಯಾಚರಣೆಗೆ ಕುರಿತು ನೀಲನಕ್ಷೆ ತಯಾರಿಸುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ರಾಷ್ಟ್ರವ್ಯಾಪಿ ಸಮೀಕ್ಷೆ ಆರಂಭಿಸಿದೆ.</p>.<p>ಉತ್ತರಾಖಂಡದಲ್ಲಿ ಭಾನುವಾರ ನಡೆದ ಘಟನೆ ಸೇರಿದಂತೆ ಈ ವರ್ಷ ಇಲ್ಲಿಯವರೆಗೆ ದೇಶದಲ್ಲಿ ಇದುವರೆಗೆ ರೋಪ್ವೇ ಸಂಬಂಧಿತನಾಲ್ಕು ಘಟನೆಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ತಾಂತ್ರಿಕ ದೋಷದಿಂದಾಗಿ ಉತ್ತರಾಖಂಡದ ಬಿಜೆಪಿ ಶಾಸಕ ಕಿಶೋರ್ ಉಪಾಧ್ಯಾಯ ಸೇರಿದಂತೆ 40ಕ್ಕೂ ಹೆಚ್ಚು ಭಕ್ತರು ಇಲ್ಲಿನ ರೋಪ್ವೇನಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಸಿಲುಕಿದ್ದ ಘಟನೆ ಭಾನುವಾರ ನಡೆದಿದೆ.</p>.<p>ಮಸ್ಸೂರಿ ಸಮೀಪದ ಸುರ್ಕಂದ ದೇವಿ ದೇವಸ್ಥಾನವನ್ನು ಸಂಪರ್ಕಿಸುವ ರೋಪ್ ವೇ ಮಾರ್ಗದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶಾಸಕ ಸೇರಿದಂತೆ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಉತ್ತರಾಖಂಡ ರಚನೆಯಾದ ನಂತರ ರಾಜ್ಯ ಪ್ರವಾಸೋದ್ಯಮ ಇಲಾಖೆ ಆರಂಭಿಸಿದ ಮೊದಲ ರೋಪ್ವೇ ಯೋಜನೆ ಇದಾಗಿದೆ. ಸುಮಾರು 502 ಮೀಟರ್ ಉದ್ದದ ರೋಪ್ವೇಯನ್ನು ₹ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.</p>.<p><strong>ರೋಪ್ ವೇ ನ್ಯೂನತೆ ಪತ್ತೆ ಹಚ್ಚಲು: ಎನ್ಡಿಆರ್ಎಫ್ ಸಮೀಕ್ಷೆ</strong><br />ಕೇಬಲ್ ಕಾರುಗಳು ಮತ್ತು ರೋಪ್ ವೇ ವ್ಯವಸ್ಥೆಯಲ್ಲಿ ಸಂಭವನೀಯ ಭದ್ರತಾ ನ್ಯೂನತೆಗಳನ್ನು ಪತ್ತೆ ಹಚ್ಚಲು ಮತ್ತು ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ರಕ್ಷಣಾ ಕಾರ್ಯಾಚರಣೆಗೆ ಕುರಿತು ನೀಲನಕ್ಷೆ ತಯಾರಿಸುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ರಾಷ್ಟ್ರವ್ಯಾಪಿ ಸಮೀಕ್ಷೆ ಆರಂಭಿಸಿದೆ.</p>.<p>ಉತ್ತರಾಖಂಡದಲ್ಲಿ ಭಾನುವಾರ ನಡೆದ ಘಟನೆ ಸೇರಿದಂತೆ ಈ ವರ್ಷ ಇಲ್ಲಿಯವರೆಗೆ ದೇಶದಲ್ಲಿ ಇದುವರೆಗೆ ರೋಪ್ವೇ ಸಂಬಂಧಿತನಾಲ್ಕು ಘಟನೆಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>