<p><strong>ಹೈದರಾಬಾದ್</strong>,: ಹಿಂದಿನ ಅವಿಭಜಿತ ಆಂಧ್ರಪ್ರದೇಶದ ಮಾಜಿ ಸಿಎಂ ಕೆ..ರೋಸಯ್ಯ ಅವರ 92ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಇಲ್ಲಿ ಅವರ(ರೋಸಯ್ಯ) ಪ್ರತಿಮೆಯನ್ನು ಅನಾವರಣಗೊಳಿಸಿದರು.</p><p>2009ರ ಸೆಪ್ಟೆಂಬರ್ ತಿಂಗಳಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ನಿಧನರಾದ ನಂತರ ರೋಸಯ್ಯ ಒಂದು ವರ್ಷಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.</p><p>ಅವಿಭಜಿತ ಆಂಧ್ರಪ್ರದೇಶದ ಕಾಂಗ್ರೆಸ್ ಆಳ್ವಿಕೆಯ ಸಮಯದಲ್ಲಿ ರೋಸಯ್ಯ ಹಣಕಾಸು ಸಚಿವರಾಗಿ 16 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದರು.</p>. <p>ಕಾಂಗ್ರೆಸ್ ನಾಯಕನ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರ ಜುಲೈ 4ರಂದು ಅಧಿಕೃತವಾಗಿ ರೋಸಯ್ಯ ಅವರ ಜನ್ಮ ದಿನಾಚರಣೆಯನ್ನು ಆಯೋಜಿಸಲು ಆದೇಶ ಹೊರಡಿಸಿತ್ತು. 2021ರ ಡಿಸೆಂಬರ್ನಲ್ಲಿ ಅವರು ನಿಧನರಾಗಿದ್ದರು.</p><p>ರೋಸಯ್ಯ ತಮ್ಮ 50 ವರ್ಷಗಳ ಸಕ್ರಿಯ ರಾಜಕೀಯ ಜೀವನದಲ್ಲಿ ಯಾವುದೇ ವಿವಾದವಿಲ್ಲದ ರಾಜಕಾರಣಿ ಎನಿಸಿಕೊಂಡಿದ್ದರು. ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ತಮಿಳುನಾಡಿನ ರಾಜ್ಯಪಾಲರಾಗಿಯೂ ರೋಸಯ್ಯ ಸೇವೆ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>,: ಹಿಂದಿನ ಅವಿಭಜಿತ ಆಂಧ್ರಪ್ರದೇಶದ ಮಾಜಿ ಸಿಎಂ ಕೆ..ರೋಸಯ್ಯ ಅವರ 92ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಇಲ್ಲಿ ಅವರ(ರೋಸಯ್ಯ) ಪ್ರತಿಮೆಯನ್ನು ಅನಾವರಣಗೊಳಿಸಿದರು.</p><p>2009ರ ಸೆಪ್ಟೆಂಬರ್ ತಿಂಗಳಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ನಿಧನರಾದ ನಂತರ ರೋಸಯ್ಯ ಒಂದು ವರ್ಷಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.</p><p>ಅವಿಭಜಿತ ಆಂಧ್ರಪ್ರದೇಶದ ಕಾಂಗ್ರೆಸ್ ಆಳ್ವಿಕೆಯ ಸಮಯದಲ್ಲಿ ರೋಸಯ್ಯ ಹಣಕಾಸು ಸಚಿವರಾಗಿ 16 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದರು.</p>. <p>ಕಾಂಗ್ರೆಸ್ ನಾಯಕನ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರ ಜುಲೈ 4ರಂದು ಅಧಿಕೃತವಾಗಿ ರೋಸಯ್ಯ ಅವರ ಜನ್ಮ ದಿನಾಚರಣೆಯನ್ನು ಆಯೋಜಿಸಲು ಆದೇಶ ಹೊರಡಿಸಿತ್ತು. 2021ರ ಡಿಸೆಂಬರ್ನಲ್ಲಿ ಅವರು ನಿಧನರಾಗಿದ್ದರು.</p><p>ರೋಸಯ್ಯ ತಮ್ಮ 50 ವರ್ಷಗಳ ಸಕ್ರಿಯ ರಾಜಕೀಯ ಜೀವನದಲ್ಲಿ ಯಾವುದೇ ವಿವಾದವಿಲ್ಲದ ರಾಜಕಾರಣಿ ಎನಿಸಿಕೊಂಡಿದ್ದರು. ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ತಮಿಳುನಾಡಿನ ರಾಜ್ಯಪಾಲರಾಗಿಯೂ ರೋಸಯ್ಯ ಸೇವೆ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>