ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಮುಸ್ಲಿಂ ಲೀಗ್ ರ‍್ಯಾಲಿಯಲ್ಲಿ ಹಿಂದು ವಿರೋಧಿ ಘೋಷಣೆ: ಬಿಜೆಪಿ ಕಿಡಿ

Published 26 ಜುಲೈ 2023, 10:39 IST
Last Updated 26 ಜುಲೈ 2023, 10:39 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿರುದ್ಧ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (ಐಯುಎಂಎಲ್‌)ನ ಯುವ ಘಟಕ, ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಹಿಂದು ವಿರೋಧಿ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಬಿಜೆಪಿಯ ಐಟಿ ಸೆಲ್ ಮುಖಸ್ಥ ಅಮಿತ್ ಮಾಳವೀಯ ವಿಡಿಯೊ ಹಂಚಿದ್ದು, ಕೇರಳದಲ್ಲಿ ಹಿಂದು ಹಾಗೂ ಕ್ರಿಶ್ಚಿಯನ್ನರು ಸುರಕ್ಷಿತರಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮುಸ್ಲಿಂ ಯೂತ್ ಲೀಗ್ ಮೆರವಣಿಯಲ್ಲಿ ಹಿಂದು ವಿರೋಧಿ ಘೋಷಣೆ ಕೂಗಲಾಗಿದ್ದು, ದೇವಾಲಯಗಳ ಮುಂದೆ ನೇಣು ಹಾಕಿ, ಜೀವಂತವಾಗಿ ಸುಟ್ಟು ಹಾಕುವುದಾಗಿ ಬೆದರಿಕೆ ಒಡ್ಡಿರುವುದಾಗಿ ಮಾಳವೀಯ ಆರೋಪಿಸಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲವಿಲ್ಲದೆ ಇಂಥವರಿಗೆ ಘೋಷಣೆ ಕೂಗಲು ಧೈರ್ಯ ಬರುತ್ತಿರಲಿಲ್ಲ ಎಂದು ಸಹ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT