<p><strong>ಪಾಲಕ್ಕಾಡ್:</strong> ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿಯ ಪಾಲಕ್ಕಾಡ್ ಘಟಕದ ಅಧ್ಯಕ್ಷ ಪ್ರಶಾಂತ್ ಶಿವ ಅವರ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. </p>.<p>ಬಿಜೆಪಿ ಆಡಳಿತವಿರುವ ಪಾಲಕ್ಕಾಡ್ ಪುರಸಭೆಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ವಿಶೇಷಚೇತನರ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕೆ.ಬಿ ಹೆಡಗೇವಾರ್ ಅವರ ಹೆಸರನ್ನು ಇಡಲಾಗಿದೆ. ಇದನ್ನು ಕಾಂಗ್ರೆಸ್ ವಿರೋಧಿಸಿತ್ತು.</p>.<p>ಕೌಶಲ್ಯಾಭಿವೃದ್ಧಿ ಕೇಂದ್ರದ ಉದ್ಘಾಟನೆಗೆ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಫೆಡರೇಷನ್ ಆಫ್ ಇಂಡಿಯಾ (ಡಿಐಎಫ್ಐ) ಕಾರ್ಯಕರ್ತರು ಶುಕ್ರವಾರ ಅಡ್ಡಿಪಡಿಸಿದರು. </p>.<p>ಈ ವೇಳೆ ಪ್ರಶಾಂತ್ ಅವರು ‘ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ’ ಎಂದು ಹೇಳಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ದೂರು ನೀಡಿದೆ. </p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ರಾಹುಲ್, ‘ನಾನು ಸಾರ್ವಜನಿಕರಿಂದ ಆಯ್ಕೆಯಾದ ಪ್ರತಿನಿಧಿ. ನಾನು ಆರ್ಎಸ್ಎಸ್ ವಿರುದ್ಧ ಮಾತನಾಡುತ್ತೇನೆ. ನನ್ನ ನಾಲಗೆಯನ್ನು ಕತ್ತರಿಸಿದರೂ ನಾನು ಅದರ ವಿರುದ್ಧ ಕೆಲಸ ಮಾಡುತ್ತಲೇ ಇರುತ್ತೇನೆ. ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲಕ್ಕಾಡ್:</strong> ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿಯ ಪಾಲಕ್ಕಾಡ್ ಘಟಕದ ಅಧ್ಯಕ್ಷ ಪ್ರಶಾಂತ್ ಶಿವ ಅವರ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. </p>.<p>ಬಿಜೆಪಿ ಆಡಳಿತವಿರುವ ಪಾಲಕ್ಕಾಡ್ ಪುರಸಭೆಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ವಿಶೇಷಚೇತನರ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕೆ.ಬಿ ಹೆಡಗೇವಾರ್ ಅವರ ಹೆಸರನ್ನು ಇಡಲಾಗಿದೆ. ಇದನ್ನು ಕಾಂಗ್ರೆಸ್ ವಿರೋಧಿಸಿತ್ತು.</p>.<p>ಕೌಶಲ್ಯಾಭಿವೃದ್ಧಿ ಕೇಂದ್ರದ ಉದ್ಘಾಟನೆಗೆ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಫೆಡರೇಷನ್ ಆಫ್ ಇಂಡಿಯಾ (ಡಿಐಎಫ್ಐ) ಕಾರ್ಯಕರ್ತರು ಶುಕ್ರವಾರ ಅಡ್ಡಿಪಡಿಸಿದರು. </p>.<p>ಈ ವೇಳೆ ಪ್ರಶಾಂತ್ ಅವರು ‘ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ’ ಎಂದು ಹೇಳಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ದೂರು ನೀಡಿದೆ. </p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ರಾಹುಲ್, ‘ನಾನು ಸಾರ್ವಜನಿಕರಿಂದ ಆಯ್ಕೆಯಾದ ಪ್ರತಿನಿಧಿ. ನಾನು ಆರ್ಎಸ್ಎಸ್ ವಿರುದ್ಧ ಮಾತನಾಡುತ್ತೇನೆ. ನನ್ನ ನಾಲಗೆಯನ್ನು ಕತ್ತರಿಸಿದರೂ ನಾನು ಅದರ ವಿರುದ್ಧ ಕೆಲಸ ಮಾಡುತ್ತಲೇ ಇರುತ್ತೇನೆ. ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>