<p><strong>ನವದೆಹಲಿ</strong>: ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p><p>ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ಪರ ವಕೀಲರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ರಜಾಕಾಲದ ಪೀಠಕ್ಕೆ ಈ ಮಾಹಿತಿ ನೀಡಿದರು. ಜೂನ್ 23ರಂದು ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದರು.</p><p>ಒಂದು ವೇಳೆ ಈ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಬಯಸದಿದ್ದರೆ, ಈ ಹಿಂದೆ ನಡೆದ ಪರೀಕ್ಷೆಯಲ್ಲಿ (ಕೃಪಾಂಕ ಬಿಟ್ಟು) ಪಡೆದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.</p><p>ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು. ಎಂಬಿಬಿಎಸ್, ಬಿಡಿಎಸ್, ಇತರ ಕೋರ್ಸ್ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಈ ವೇಳೆ ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p><p>ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ಪರ ವಕೀಲರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ರಜಾಕಾಲದ ಪೀಠಕ್ಕೆ ಈ ಮಾಹಿತಿ ನೀಡಿದರು. ಜೂನ್ 23ರಂದು ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದರು.</p><p>ಒಂದು ವೇಳೆ ಈ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಬಯಸದಿದ್ದರೆ, ಈ ಹಿಂದೆ ನಡೆದ ಪರೀಕ್ಷೆಯಲ್ಲಿ (ಕೃಪಾಂಕ ಬಿಟ್ಟು) ಪಡೆದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.</p><p>ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು. ಎಂಬಿಬಿಎಸ್, ಬಿಡಿಎಸ್, ಇತರ ಕೋರ್ಸ್ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಈ ವೇಳೆ ಕೇಂದ್ರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>