<p><strong>ತಿರುವನಂತಪುರ:</strong> ಕೇರಳದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ, ಅರಣ್ಯ ಮಾರ್ಗದಲ್ಲಿ ಟ್ರ್ಯಾಕ್ಟರ್ನಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿರುವುದು ವಿವಾದಕ್ಕೀಡಾಗಿದೆ. </p>.<p>ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ಎಡಿಜಿಪಿ) ಎಂ.ಆರ್. ಅಜಿತ್ ಕುಮಾರ್ ಸೇರಿ ಮೂವರು ಟ್ರ್ಯಾಕ್ಟರ್ನಲ್ಲಿ ಕಳೆದ ವಾರ ಶಬರಿಮಲೆಗೆ ಪ್ರಯಾಣಿಸಿದ್ದರು. ಟ್ರ್ಯಾಕ್ಟರ್ ಚಾಲನೆ ಮಾಡಿದ್ದ ಇನ್ನೊಬ್ಬ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. </p>.<p>ಶಬರಿಮಲೆಯ ವಿಶೇಷ ಕಮಿಷನರ್ ಅವರ ವರದಿ ಆಧಾರದ ಮೇಲೆ ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. </p>.<p>ಸರಕು ಸಾಗಣೆಗೆ ಮಾತ್ರವೇ ಟ್ರ್ಯಾಕ್ಟರ್ ಬಳಸಬೇಕು ಎಂದು ಹೈಕೋರ್ಟ್ ನೀಡಿರುವ ಆದೇಶ ಜಾರಿಯಲ್ಲಿದೆ. ಇದನ್ನು ಉಲ್ಲಂಘಿಸಿರುವ ಅಧಿಕಾರಿಯ ನಡೆಯನ್ನು ಹೈಕೋರ್ಟ್ನ ದೇವಸ್ವಂ ಪೀಠವು ತೀವ್ರವಾಗಿ ಖಂಡಿಸಿದೆ. </p>.<p>ನ್ಯಾಯಮೂರ್ತಿಗಳಾದ ಅನೀಲ್ ಕೆ. ನರೇಂದ್ರನ್ ಹಾಗೂ ಮುರಳೀ ಕೃಷ್ಣ ಎಸ್. ಅವರಿದ್ದ ಪೀಠವು, ‘ಘಟನೆಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಂಡಿದ್ದೀರಿ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು. </p>.<p>ಘಟನೆ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ. ಎಡಿಜಿಪಿ ಅಜಿತ್ ಅವರಿಂದ ವಿವರಣೆ ಕೇಳಲಾಗಿದೆ ಎಂದು ಸರ್ಕಾರವು ಪೀಠಕ್ಕೆ ಮಾಹಿತಿ ನೀಡಿತು. </p>.<p>‘ಅಧಿಕಾರಿಯು ಅನಾರೋಗ್ಯದಿಂದ ಬಳಲುತ್ತಿದ್ದರೆ ಆಂಬುಲೆನ್ಸ್ ಬಳಸಬೇಕಿತ್ತು’ ಎಂದಿರುವ ಪೀಠವು ನಿಯಮ ಉಲ್ಲಂಘನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ, ಅರಣ್ಯ ಮಾರ್ಗದಲ್ಲಿ ಟ್ರ್ಯಾಕ್ಟರ್ನಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿರುವುದು ವಿವಾದಕ್ಕೀಡಾಗಿದೆ. </p>.<p>ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ಎಡಿಜಿಪಿ) ಎಂ.ಆರ್. ಅಜಿತ್ ಕುಮಾರ್ ಸೇರಿ ಮೂವರು ಟ್ರ್ಯಾಕ್ಟರ್ನಲ್ಲಿ ಕಳೆದ ವಾರ ಶಬರಿಮಲೆಗೆ ಪ್ರಯಾಣಿಸಿದ್ದರು. ಟ್ರ್ಯಾಕ್ಟರ್ ಚಾಲನೆ ಮಾಡಿದ್ದ ಇನ್ನೊಬ್ಬ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. </p>.<p>ಶಬರಿಮಲೆಯ ವಿಶೇಷ ಕಮಿಷನರ್ ಅವರ ವರದಿ ಆಧಾರದ ಮೇಲೆ ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. </p>.<p>ಸರಕು ಸಾಗಣೆಗೆ ಮಾತ್ರವೇ ಟ್ರ್ಯಾಕ್ಟರ್ ಬಳಸಬೇಕು ಎಂದು ಹೈಕೋರ್ಟ್ ನೀಡಿರುವ ಆದೇಶ ಜಾರಿಯಲ್ಲಿದೆ. ಇದನ್ನು ಉಲ್ಲಂಘಿಸಿರುವ ಅಧಿಕಾರಿಯ ನಡೆಯನ್ನು ಹೈಕೋರ್ಟ್ನ ದೇವಸ್ವಂ ಪೀಠವು ತೀವ್ರವಾಗಿ ಖಂಡಿಸಿದೆ. </p>.<p>ನ್ಯಾಯಮೂರ್ತಿಗಳಾದ ಅನೀಲ್ ಕೆ. ನರೇಂದ್ರನ್ ಹಾಗೂ ಮುರಳೀ ಕೃಷ್ಣ ಎಸ್. ಅವರಿದ್ದ ಪೀಠವು, ‘ಘಟನೆಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಂಡಿದ್ದೀರಿ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು. </p>.<p>ಘಟನೆ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ. ಎಡಿಜಿಪಿ ಅಜಿತ್ ಅವರಿಂದ ವಿವರಣೆ ಕೇಳಲಾಗಿದೆ ಎಂದು ಸರ್ಕಾರವು ಪೀಠಕ್ಕೆ ಮಾಹಿತಿ ನೀಡಿತು. </p>.<p>‘ಅಧಿಕಾರಿಯು ಅನಾರೋಗ್ಯದಿಂದ ಬಳಲುತ್ತಿದ್ದರೆ ಆಂಬುಲೆನ್ಸ್ ಬಳಸಬೇಕಿತ್ತು’ ಎಂದಿರುವ ಪೀಠವು ನಿಯಮ ಉಲ್ಲಂಘನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>