ನವದೆಹಲಿ: ಗಂಗಾ ಮತ್ತು ಅದರ ಉಪ ನದಿಗಳ ಶುದ್ಧೀಕರಣಕ್ಕಾಗಿ ಕೈಗೊಂಡಿರುವ ಯೋಜನೆಗೆ ₹ 30 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದರು.
‘ಯಮುನಾ ಪರ್ ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಯೋಜನೆಯಡಿ ಗಂಗಾ ಮತ್ತು ಅದರ ಉಪ ನದಿಗಳ ವ್ಯಾಪ್ತಿಯಲ್ಲಿ ಸಾಕಷ್ಟು ಮೂಲ ಸೌಕರ್ಯಗಳು ಸೃಷ್ಟಿಯಾಗಲಿದ್ದು, ದೇಶದ ಆರ್ಥಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಲಿವೆ ಎಂದರು.