‘ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ’ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.