<p><strong>ಮುಂಬೈ:</strong> ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಡ್ರೈ ಕ್ಲೀನಿಂಗ್ ಅಂಗಡಿಯೊಂದರಲ್ಲಿ ಬ್ಯಾಂಕ್ಗೆ ಸೇರಿದ ₹5 ಕೋಟಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಕೆಲವು ವ್ಯಕ್ತಿಗಳು ಎಕ್ಸಿಸ್ ಬ್ಯಾಂಕ್ನ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ನೀವು ನಮಗೆ ₹5 ಕೋಟಿ ನಗದು ನೀಡಿದರೆ, ₹6 ಕೋಟಿ ವಾಪಸ್ ನೀಡುವುದಾಗಿ ಆಮಿಷವೊಡ್ಡಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ನೂರುಲ್ ಹಸನ್ ‘ಪಿಟಿಐ’ಗೆ ತಿಳಿಸಿದ್ದಾರೆ.</p><p>‘ಖಚಿತ ಮಾಹಿತಿ ಆಧರಿಸಿ ಅಪರಾಧ ವಿಭಾಗ ಮತ್ತು ಭಯೋತ್ಪಾದನಾ ನಿಗ್ರಹ ದಳದ ತಂಡಗಳು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಇಂದು ಬೆಳಿಗ್ಗೆ ತುಮ್ಸಾರ್ ಪ್ರದೇಶದ ಇಂದಿರಾ ನಗರದಲ್ಲಿರುವ ಡ್ರೈ ಕ್ಲೀನಿಂಗ್ ಅಂಗಡಿಯ ಮೇಲೆ ದಾಳಿ ನಡೆಸಿದ್ದು, ಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ₹5 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ’ ಎಂದು ನೂರುಲ್ ಹಸನ್ ಮಾಹಿತಿ ನೀಡಿದ್ದಾರೆ. </p><p>ಹಣ ವಶಪಡಿಸಿಕೊಂಡಿರುವ ಬಗ್ಗೆ ಎಕ್ಸಿಸ್ ಬ್ಯಾಂಕ್ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಜತೆಗೆ, ಬ್ಯಾಂಕ್ ಮ್ಯಾನೇಜರ್ ಸೇರಿ ಇತರ ಎಂಟು ಮಂದಿಯನ್ನು ಬಂಧಿಸಿ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಡ್ರೈ ಕ್ಲೀನಿಂಗ್ ಅಂಗಡಿಯೊಂದರಲ್ಲಿ ಬ್ಯಾಂಕ್ಗೆ ಸೇರಿದ ₹5 ಕೋಟಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಕೆಲವು ವ್ಯಕ್ತಿಗಳು ಎಕ್ಸಿಸ್ ಬ್ಯಾಂಕ್ನ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ನೀವು ನಮಗೆ ₹5 ಕೋಟಿ ನಗದು ನೀಡಿದರೆ, ₹6 ಕೋಟಿ ವಾಪಸ್ ನೀಡುವುದಾಗಿ ಆಮಿಷವೊಡ್ಡಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ನೂರುಲ್ ಹಸನ್ ‘ಪಿಟಿಐ’ಗೆ ತಿಳಿಸಿದ್ದಾರೆ.</p><p>‘ಖಚಿತ ಮಾಹಿತಿ ಆಧರಿಸಿ ಅಪರಾಧ ವಿಭಾಗ ಮತ್ತು ಭಯೋತ್ಪಾದನಾ ನಿಗ್ರಹ ದಳದ ತಂಡಗಳು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಇಂದು ಬೆಳಿಗ್ಗೆ ತುಮ್ಸಾರ್ ಪ್ರದೇಶದ ಇಂದಿರಾ ನಗರದಲ್ಲಿರುವ ಡ್ರೈ ಕ್ಲೀನಿಂಗ್ ಅಂಗಡಿಯ ಮೇಲೆ ದಾಳಿ ನಡೆಸಿದ್ದು, ಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ₹5 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ’ ಎಂದು ನೂರುಲ್ ಹಸನ್ ಮಾಹಿತಿ ನೀಡಿದ್ದಾರೆ. </p><p>ಹಣ ವಶಪಡಿಸಿಕೊಂಡಿರುವ ಬಗ್ಗೆ ಎಕ್ಸಿಸ್ ಬ್ಯಾಂಕ್ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಜತೆಗೆ, ಬ್ಯಾಂಕ್ ಮ್ಯಾನೇಜರ್ ಸೇರಿ ಇತರ ಎಂಟು ಮಂದಿಯನ್ನು ಬಂಧಿಸಿ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>