<p><strong>ಅಹಮದಾಬಾದ್</strong>: ಅಧಿಕ ಬಡ್ಡಿ ಆಮಿಷವೊಡ್ಡಿ ಭಾರಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ ಹಗರಣ ಗುಜರಾತ್ನ ಸಬರ್ಕಾಂತಾ ಜಿಲ್ಲೆಯಲ್ಲಿ ಸಿಐಡಿ ಪೊಲೀಸರು ಪತ್ತೆ ಮಾಡಿದ್ದಾರೆ. ವಹಿವಾಟಿನ ಮೊತ್ತ ₹6000 ಕೋಟಿಗೂ ಅಧಿಕ ಎಂಬ ಅಂದಾಜಿದೆ.</p>.<p>ಹಗರಣದ ಸೂತ್ರಧಾರಿ ಎಂದು ಶಂಕಿಸಲಾದ, ಬಿಜೆಪಿ ಸದಸ್ಯನೊಬ್ಬ ಸದ್ಯ ತಲೆಮರೆಸಿಕೊಂಡಿದ್ದಾನೆ. ಕನಿಷ್ಠ ಏಳು ಜಿಲ್ಲೆಗಳಲ್ಲಿ ಈ ಹಗರಣ ವ್ಯಾಪಿಸಿದೆ. ಅಧಿಕ ಬಡ್ಡಿಯನ್ನು ನೀಡುವ ಆಮಿಷವೊಡ್ಡಿ ಹೂಡಿಕೆ ಆಕರ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಅನಾಮಧೇಯ ದೂರು ಆಧರಿಸಿ ಸಿಐಡಿ ತಂಡವು ಸಬರ್ಕಾಂತಾ ಮತ್ತು ಇತರ ಆರು ಜಿಲ್ಲೆಗಳಲ್ಲಿ ಬಿಝಡ್ ಇಂಟರ್ನ್ಯಾಷನಲ್ ಬ್ರೋಕಿಂಗ್ ಪ್ರೈವೇಟ್ ಲಿಮಿಟೆಡ್ನ ಕಚೇರಿಗಳ ಮೇಲೆ ದಾಳಿ ನಡೆಸಿತು. </p>.<p>ಎರಡು ಬ್ಯಾಂಕ್ಗಳಲ್ಲಿ ₹175 ಕೋಟಿ ವರೆಗೆ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಸಂಸ್ಥೆಯ ಸಿಇಒ ಭೂಪೇಂದ್ರ ಸಿನ್ಹಾ ಪರ್ಬತ್ ಸಿನ್ಹಾ ಝಲಾ ಮತ್ತು ಇತರ ಏಜೆಂಟರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಝಲಾ ಅವರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆಗೆ ರಾಜ್ಯ ಬಿಜೆಪಿ ವಕ್ತಾರರು ಲಭ್ಯರಾಗಲಿಲ್ಲ. ಝಲಾ ಅವರು ಲೋಕಸಭೆ ಚುನಾವಣೆಯಲ್ಲಿ ಸಬರಕಾಂತಾ ಜಿಲ್ಲೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಳಿಕ ವಾಪಸು ಪಡೆದಿದ್ದರು. ಈತ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಅಧಿಕ ಬಡ್ಡಿ ಆಮಿಷವೊಡ್ಡಿ ಭಾರಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ ಹಗರಣ ಗುಜರಾತ್ನ ಸಬರ್ಕಾಂತಾ ಜಿಲ್ಲೆಯಲ್ಲಿ ಸಿಐಡಿ ಪೊಲೀಸರು ಪತ್ತೆ ಮಾಡಿದ್ದಾರೆ. ವಹಿವಾಟಿನ ಮೊತ್ತ ₹6000 ಕೋಟಿಗೂ ಅಧಿಕ ಎಂಬ ಅಂದಾಜಿದೆ.</p>.<p>ಹಗರಣದ ಸೂತ್ರಧಾರಿ ಎಂದು ಶಂಕಿಸಲಾದ, ಬಿಜೆಪಿ ಸದಸ್ಯನೊಬ್ಬ ಸದ್ಯ ತಲೆಮರೆಸಿಕೊಂಡಿದ್ದಾನೆ. ಕನಿಷ್ಠ ಏಳು ಜಿಲ್ಲೆಗಳಲ್ಲಿ ಈ ಹಗರಣ ವ್ಯಾಪಿಸಿದೆ. ಅಧಿಕ ಬಡ್ಡಿಯನ್ನು ನೀಡುವ ಆಮಿಷವೊಡ್ಡಿ ಹೂಡಿಕೆ ಆಕರ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಅನಾಮಧೇಯ ದೂರು ಆಧರಿಸಿ ಸಿಐಡಿ ತಂಡವು ಸಬರ್ಕಾಂತಾ ಮತ್ತು ಇತರ ಆರು ಜಿಲ್ಲೆಗಳಲ್ಲಿ ಬಿಝಡ್ ಇಂಟರ್ನ್ಯಾಷನಲ್ ಬ್ರೋಕಿಂಗ್ ಪ್ರೈವೇಟ್ ಲಿಮಿಟೆಡ್ನ ಕಚೇರಿಗಳ ಮೇಲೆ ದಾಳಿ ನಡೆಸಿತು. </p>.<p>ಎರಡು ಬ್ಯಾಂಕ್ಗಳಲ್ಲಿ ₹175 ಕೋಟಿ ವರೆಗೆ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಸಂಸ್ಥೆಯ ಸಿಇಒ ಭೂಪೇಂದ್ರ ಸಿನ್ಹಾ ಪರ್ಬತ್ ಸಿನ್ಹಾ ಝಲಾ ಮತ್ತು ಇತರ ಏಜೆಂಟರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಝಲಾ ಅವರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆಗೆ ರಾಜ್ಯ ಬಿಜೆಪಿ ವಕ್ತಾರರು ಲಭ್ಯರಾಗಲಿಲ್ಲ. ಝಲಾ ಅವರು ಲೋಕಸಭೆ ಚುನಾವಣೆಯಲ್ಲಿ ಸಬರಕಾಂತಾ ಜಿಲ್ಲೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಳಿಕ ವಾಪಸು ಪಡೆದಿದ್ದರು. ಈತ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>