<p><strong>ಮುಂಬೈ</strong>: ಆಭರಣದ ಮಳಿಗೆಯೊಂದರಲ್ಲಿ ಅಪರಿಚಿತರು ಬರೋಬ್ಬರಿ ₹7 ಕೋಟಿ ಮೌಲ್ಯದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಠಾಣೆ ರೈಲು ನಿಲ್ದಾಣದ ಬಳಿ ಇರುವ ಆಭರಣದ ಮಳಿಗೆಯೊಂದರಲ್ಲಿ ಈ ಘಟನೆ ನಡೆದಿದೆ. </p><p>‘ಕಳ್ಳರು ಮಳಿಗೆಯ ಬಾಗಿಲಿನ ಬೀಗವನ್ನು ಮುರಿದು ಒಳಗೆ ಪ್ರವೇಶಿಸಿದ್ದಾರೆ. ಮಳಿಗೆಯ ಮಾಲೀಕರು ಆಭರಣಗಳನ್ನು ಸೇಫ್ ಲಾಕರ್ಗಳಲ್ಲಿ ಇಡದೇ, ಹೊರಗಡೆಯೇ ಇಟ್ಟು ಹೋಗಿದ್ದಾರೆ. ಇದರ ಲಾಭ ಪಡೆದ ಕಳ್ಳರು ಕಡಿಮೆ ಸಮಯದಲ್ಲಿ ಆಭರಣಗಳನ್ನು ದೋಚಿದ್ದಾರೆ‘ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳು ಬೆಂಗಳೂರಲ್ಲೇ ಹೆಚ್ಚು; ಮೈಸೂರಿಗೆ 2ನೇ ಸ್ಥಾನ.Oscars 2025: ಆಸ್ಕರ್ ಪ್ರಶಸ್ತಿ ರೇಸ್ನಿಂದ ಭಾರತದ 'ಲಾಪತಾ ಲೇಡೀಸ್' ಹೊರಕ್ಕೆ. <p>‘ಸುರಕ್ಷತೆಯ ಲೋಪದಿಂದಾಗಿಯೇ ದರೋಡೆಕೋರರಿಗೆ ಅನುಕೂಲವಾಯಿತು‘ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ವಿಧಿ ವಿಜ್ಞಾನ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.ಜಮ್ಮು | ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು.ಕಾಂಗ್ರೆಸ್ಗೆ ಸಂವಿಧಾನ ಒಂದು ಕುಟುಂಬದ 'ಖಾಸಗಿ ಆಸ್ತಿ': ಅಮಿತ್ ಶಾ.ಫಾರ್ಮುಲಾ ಇ ರೇಸ್ ಅವ್ಯವಹಾರ: KT ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ.ಆರ್ಥಿಕ ಮಾನದಂಡದ ಆಧಾರದಲ್ಲಿ ಮೀಸಲಾತಿ: ದೇವೇಗೌಡ ಸಲಹೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಆಭರಣದ ಮಳಿಗೆಯೊಂದರಲ್ಲಿ ಅಪರಿಚಿತರು ಬರೋಬ್ಬರಿ ₹7 ಕೋಟಿ ಮೌಲ್ಯದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಠಾಣೆ ರೈಲು ನಿಲ್ದಾಣದ ಬಳಿ ಇರುವ ಆಭರಣದ ಮಳಿಗೆಯೊಂದರಲ್ಲಿ ಈ ಘಟನೆ ನಡೆದಿದೆ. </p><p>‘ಕಳ್ಳರು ಮಳಿಗೆಯ ಬಾಗಿಲಿನ ಬೀಗವನ್ನು ಮುರಿದು ಒಳಗೆ ಪ್ರವೇಶಿಸಿದ್ದಾರೆ. ಮಳಿಗೆಯ ಮಾಲೀಕರು ಆಭರಣಗಳನ್ನು ಸೇಫ್ ಲಾಕರ್ಗಳಲ್ಲಿ ಇಡದೇ, ಹೊರಗಡೆಯೇ ಇಟ್ಟು ಹೋಗಿದ್ದಾರೆ. ಇದರ ಲಾಭ ಪಡೆದ ಕಳ್ಳರು ಕಡಿಮೆ ಸಮಯದಲ್ಲಿ ಆಭರಣಗಳನ್ನು ದೋಚಿದ್ದಾರೆ‘ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳು ಬೆಂಗಳೂರಲ್ಲೇ ಹೆಚ್ಚು; ಮೈಸೂರಿಗೆ 2ನೇ ಸ್ಥಾನ.Oscars 2025: ಆಸ್ಕರ್ ಪ್ರಶಸ್ತಿ ರೇಸ್ನಿಂದ ಭಾರತದ 'ಲಾಪತಾ ಲೇಡೀಸ್' ಹೊರಕ್ಕೆ. <p>‘ಸುರಕ್ಷತೆಯ ಲೋಪದಿಂದಾಗಿಯೇ ದರೋಡೆಕೋರರಿಗೆ ಅನುಕೂಲವಾಯಿತು‘ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ವಿಧಿ ವಿಜ್ಞಾನ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.ಜಮ್ಮು | ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು.ಕಾಂಗ್ರೆಸ್ಗೆ ಸಂವಿಧಾನ ಒಂದು ಕುಟುಂಬದ 'ಖಾಸಗಿ ಆಸ್ತಿ': ಅಮಿತ್ ಶಾ.ಫಾರ್ಮುಲಾ ಇ ರೇಸ್ ಅವ್ಯವಹಾರ: KT ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ.ಆರ್ಥಿಕ ಮಾನದಂಡದ ಆಧಾರದಲ್ಲಿ ಮೀಸಲಾತಿ: ದೇವೇಗೌಡ ಸಲಹೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>