ಬಿಜೆಪಿಯಿಂದ ಎಂಟನೇ ಅಭ್ಯರ್ಥಿ ಅಖಾಡಕ್ಕೆ
ಉತ್ತರ ಪ್ರದೇಶದಿಂದ ರಾಜ್ಯಸಭೆಯ 10 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯು ರಂಗೇರಿದೆ. ಈಗಾಗಲೇ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಜೆಪಿಯು ಎಂಟನೇ ಅಭ್ಯರ್ಥಿಯನ್ನಾಗಿ ಸಮಾಜವಾದಿ ಪಕ್ಷದ ಮಾಜಿ ಮುಖಂಡನನ್ನು ಗುರುವಾರ ಅಖಾಡಕ್ಕಿಳಿಸಿದೆ. ಸಮಾಜವಾದಿ ಪಕ್ಷ ಮೂವರನ್ನು ತನ್ನ ಅಭ್ಯರ್ಥಿಗಳನ್ನಾಗಿ ಸ್ಪರ್ಧೆಗಿಳಿಸಿದೆ. ಸಮಾಜವಾದಿ ಪಕ್ಷದ ಮಾಜಿ ಮುಖಂಡ 2019ರಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಸಂಜಯ್ ಸೇಠ್ ಬಿಜೆಪಿಯ 8ನೇ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದು ಒಂದು ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ.