<p><strong>ನವದೆಹಲಿ</strong>: ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದಲೇ ದೇಶದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ, ಆರ್ಎಸ್ಎಸ್ ನಿಷೇಧಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.</p><p>ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.</p><p>ಮಹಾತ್ಮ ಗಾಂಧಿ ಅವರ ಹತ್ಯೆಯ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್ಎಸ್ಎಸ್) ಟೀಕಿಸಿದ್ದ ಪಟೇಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.</p><p>ಆರ್ಎಸ್ಎಸ್ ನಿಷೇಧ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದಿದ್ದಾರೆ.</p> .ಬ್ರಿಮ್ಸ್ ಅಕ್ರಮ; ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಈಶ್ವರ ಖಂಡ್ರೆ .ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ. <p>‘ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ. ‘ಉಕ್ಕಿನ ಮನುಷ್ಯ’ ಮತ್ತು ‘ಉಕ್ಕಿನ ಮಹಿಳೆ’ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಏಕತೆ ಕಾಪಾಡಿಕೊಳ್ಳಲು ಶ್ರಮಿಸಿದ್ದಾರೆ. ಇದು ಕಾಂಗ್ರೆಸ್ನ ಐತಿಹ್ಯ ಮತ್ತು ಕಾಣಿಕೆ’ ಎಂದು ಹೇಳಿದರು.</p><p>‘ಮಹಾತ್ಮ ಗಾಂಧಿ ಅವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಆರ್ಎಸ್ಎಸ್ ಸೃಷ್ಟಿಸಿದೆ’ ಎಂದು ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗೆ ಆಗಿನ ಗೃಹ ಸಚಿವ ಪಟೇಲ್ ಅವರು ಬರೆದ ಪತ್ರವನ್ನು ಖರ್ಗೆ ಉಲ್ಲೇಖಿಸಿದ್ದಾರೆ.</p>.ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ: ಕಾವ್ಯ ಜೊತೆ ಗಿಲ್ಲಿ ಸಖತ್ ಡ್ಯಾನ್ಸ್.ಪಥಸಂಚಲನವನ್ನು ಆರ್ಎಸ್ಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ.ತೆಲಂಗಾಣ | ಮೊಹಮ್ಮದ್ ಅಜರುದ್ದೀನ್ ಪ್ರಮಾಣ: ರೆಡ್ಡಿ ಸಂಪುಟದ ಮೊದಲ ಮುಸ್ಲಿಂ ಸಚಿವ.ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ?: ಡಿಸಿಎಂಗೆ ಆರ್.ಅಶೋಕ.ತುಳಸಿ ಹಬ್ಬದಂದು ಈ ತಪ್ಪುಗಳನ್ನು ಮಾಡಬೇಡಿ: ಇಲ್ಲಿದೆ ಮಹತ್ವದ ಮಾಹಿತಿ.ಪ್ರಧಾನ ಮಂತ್ರಿ ಕುಸುಮ್ ಯೋಜನೆ: ಸೌರ ಪಂಪ್ಸೆಟ್ ಸ್ಥಾಪನೆಗೆ ಸಿಗಲಿದೆ ಸಹಾಯಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದಲೇ ದೇಶದಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ, ಆರ್ಎಸ್ಎಸ್ ನಿಷೇಧಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.</p><p>ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.</p><p>ಮಹಾತ್ಮ ಗಾಂಧಿ ಅವರ ಹತ್ಯೆಯ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್ಎಸ್ಎಸ್) ಟೀಕಿಸಿದ್ದ ಪಟೇಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.</p><p>ಆರ್ಎಸ್ಎಸ್ ನಿಷೇಧ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ‘ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದಿದ್ದಾರೆ.</p> .ಬ್ರಿಮ್ಸ್ ಅಕ್ರಮ; ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಈಶ್ವರ ಖಂಡ್ರೆ .ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ. <p>‘ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ. ‘ಉಕ್ಕಿನ ಮನುಷ್ಯ’ ಮತ್ತು ‘ಉಕ್ಕಿನ ಮಹಿಳೆ’ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಏಕತೆ ಕಾಪಾಡಿಕೊಳ್ಳಲು ಶ್ರಮಿಸಿದ್ದಾರೆ. ಇದು ಕಾಂಗ್ರೆಸ್ನ ಐತಿಹ್ಯ ಮತ್ತು ಕಾಣಿಕೆ’ ಎಂದು ಹೇಳಿದರು.</p><p>‘ಮಹಾತ್ಮ ಗಾಂಧಿ ಅವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಆರ್ಎಸ್ಎಸ್ ಸೃಷ್ಟಿಸಿದೆ’ ಎಂದು ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗೆ ಆಗಿನ ಗೃಹ ಸಚಿವ ಪಟೇಲ್ ಅವರು ಬರೆದ ಪತ್ರವನ್ನು ಖರ್ಗೆ ಉಲ್ಲೇಖಿಸಿದ್ದಾರೆ.</p>.ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ: ಕಾವ್ಯ ಜೊತೆ ಗಿಲ್ಲಿ ಸಖತ್ ಡ್ಯಾನ್ಸ್.ಪಥಸಂಚಲನವನ್ನು ಆರ್ಎಸ್ಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ.ತೆಲಂಗಾಣ | ಮೊಹಮ್ಮದ್ ಅಜರುದ್ದೀನ್ ಪ್ರಮಾಣ: ರೆಡ್ಡಿ ಸಂಪುಟದ ಮೊದಲ ಮುಸ್ಲಿಂ ಸಚಿವ.ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ?: ಡಿಸಿಎಂಗೆ ಆರ್.ಅಶೋಕ.ತುಳಸಿ ಹಬ್ಬದಂದು ಈ ತಪ್ಪುಗಳನ್ನು ಮಾಡಬೇಡಿ: ಇಲ್ಲಿದೆ ಮಹತ್ವದ ಮಾಹಿತಿ.ಪ್ರಧಾನ ಮಂತ್ರಿ ಕುಸುಮ್ ಯೋಜನೆ: ಸೌರ ಪಂಪ್ಸೆಟ್ ಸ್ಥಾಪನೆಗೆ ಸಿಗಲಿದೆ ಸಹಾಯಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>