<p><strong>ಮುಂಬೈ:</strong> ವಿಶ್ವವಿದ್ಯಾಲಯದ ಅನುದಾನ ಆಯೋಗದ(ಯುಜಿಸಿ) ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ ಆರ್ಎಸ್ಎಸ್ ಹಿರಿಯ ನಾಯಕರೊಬ್ಬರು, ‘ಸಮಾಜದಲ್ಲಿ ಏಕತೆ ಇರಬೇಕೆಂದು ಸಂಘ ಬಯಸುತ್ತದೆ. ಅದನ್ನು ಕಾಪಾಡಲು ಸಂಘ ಸದಾ ಬದ್ಧವಾಗಿಯೇ ಹೆಜ್ಜೆ ಇಡುತ್ತದೆ’ ಎಂದು ಹೇಳಿದರು.</p>.<p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗೆ ಸಮಿತಿಯನ್ನು ರಚಿಸುವಂತೆ ಯುಜಿಸಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮಗಳು ಸಮಾಜದ ವಿಭಜನೆಗೆ ಕಾರಣವಾಗಬಹುದು ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್ಎಸ್ ಪಾತ್ರದ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್ಎಸ್ಎಸ್ನ ಅಖಿಲ ಭಾರತೀಯ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್ ಅಂಬೇಕರ್, ‘ದೇಶದ ಸಾರ್ವಭೌಮತೆ ಮತ್ತು ಏಕತೆಗಾಗಿ ಆರ್ಎಸ್ಎಸ್ ಎನು ಮಾಡಿದೆ ಎಂಬುವುದನ್ನು ನೂರು ವರ್ಷ ಪೂರೈಸಿದ ಬಳಿಕವೂ ವಿವರಿಸುವ ಅಗತ್ಯವಿಲ್ಲ ಎಂದರು.</p>.<p>‘ಸಂಘ ದೇಶಕ್ಕಾಗಿ ಏನು ಮಾಡಿದೆಯೋ, ಅದೇ ಉದ್ದೇಶಕ್ಕಾಗಿಯೇ ಸ್ಥಾಪನೆಯಾಗಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿಶ್ವವಿದ್ಯಾಲಯದ ಅನುದಾನ ಆಯೋಗದ(ಯುಜಿಸಿ) ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ ಆರ್ಎಸ್ಎಸ್ ಹಿರಿಯ ನಾಯಕರೊಬ್ಬರು, ‘ಸಮಾಜದಲ್ಲಿ ಏಕತೆ ಇರಬೇಕೆಂದು ಸಂಘ ಬಯಸುತ್ತದೆ. ಅದನ್ನು ಕಾಪಾಡಲು ಸಂಘ ಸದಾ ಬದ್ಧವಾಗಿಯೇ ಹೆಜ್ಜೆ ಇಡುತ್ತದೆ’ ಎಂದು ಹೇಳಿದರು.</p>.<p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗೆ ಸಮಿತಿಯನ್ನು ರಚಿಸುವಂತೆ ಯುಜಿಸಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮಗಳು ಸಮಾಜದ ವಿಭಜನೆಗೆ ಕಾರಣವಾಗಬಹುದು ಎಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್ಎಸ್ ಪಾತ್ರದ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್ಎಸ್ಎಸ್ನ ಅಖಿಲ ಭಾರತೀಯ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್ ಅಂಬೇಕರ್, ‘ದೇಶದ ಸಾರ್ವಭೌಮತೆ ಮತ್ತು ಏಕತೆಗಾಗಿ ಆರ್ಎಸ್ಎಸ್ ಎನು ಮಾಡಿದೆ ಎಂಬುವುದನ್ನು ನೂರು ವರ್ಷ ಪೂರೈಸಿದ ಬಳಿಕವೂ ವಿವರಿಸುವ ಅಗತ್ಯವಿಲ್ಲ ಎಂದರು.</p>.<p>‘ಸಂಘ ದೇಶಕ್ಕಾಗಿ ಏನು ಮಾಡಿದೆಯೋ, ಅದೇ ಉದ್ದೇಶಕ್ಕಾಗಿಯೇ ಸ್ಥಾಪನೆಯಾಗಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>