<p><strong>ತಿರುವನಂತಪುರ:</strong> ಆರ್ಎಸ್ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.</p>.ಮಣಿಪುರ ಹೊತ್ತಿ ಉರಿದರೂ ಮೌನವಾಗಿದ್ದ ಪ್ರಧಾನಿ ಮೋದಿ: ತುಷಾರ್ ಗಾಂಧಿ ಟೀಕೆ.<p>ಬುಧವಾರ ನೈಯಾಟಿಂಕರ ಎನ್ನುವಲ್ಲಿ ತುಷಾರ್ ಗಾಂಧಿ ಭಾಗಿಯಾಗಿದ್ದ ಕಾರ್ಯಕ್ರಮ ಮುಗಿದ ಬಳಿಕ ಸಂಘಪರಿವಾರದೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನಲಾದ ವ್ಯಕ್ತಿಗಳ ಸಣ್ಣ ಗುಂಪೊಂದು ಘೋಷಣೆ ಕೂಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಘೋಷಣೆ ಕೂಗುವ ದೃಶ್ಯಗಳನ್ನು ಟಿ.ವಿ ಮಾಧ್ಯಮಗಳು ಪ್ರಸಾರ ಮಾಡಿವೆ.</p><p>ಗಾಂಧಿವಾದಿ ದಿವಂಗತ ಪಿ, ಗೋಪಿನಾಥ್ ನಾಯರ್ ಅವರ ಪುತ್ಥಳಿ ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುಷಾರ್ ಗಾಂಧಿ ನೈಯಾಂಟಿಕರಕ್ಕೆ ಬಂದಿದ್ದರು.</p>.ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಿದ ಗಾಂಧೀಜಿ ಮರಿಮೊಮ್ಮಗ ತುಷಾರ್ ಗಾಂಧಿ .<p>ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ರಾಜ್ಯದಲ್ಲಿ ಯುಡಿಎಫ್ ಹಾಗೂ ಎಲ್ಡಿಎಫ್ ಪಕ್ಷಗಳ ಸಂಘರ್ಷಕ್ಕೆ ದೀರ್ಘ ಇತಿಹಾಸ ಇದೆ. ಎರಡೂ ಪಕ್ಷಗಳು, ಕೇರಳಕ್ಕೆ ಮತ್ತೊಂದು ಅತ್ಯಂತ ಅಪಾಯಕಾರಿ ಮತ್ತು ಕಪಟ ಶತ್ರು - ಆರ್ಎಸ್ಎಸ್ ಮತ್ತು ಬಿಜೆಪಿ ಪ್ರವೇಶಿಸಿದೆ ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದ್ದರು.</p><p>‘ಬಿಜೆಪಿಯನ್ನು ನಾವು ಸೋಲಿಸಬಹುದು. ಆದರೆ ಆರ್ಎಸ್ಎಸ್ ವಿಷ. ಅದರ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಏಕೆಂದರೆ ಅದು ನಮ್ಮ ದೇಶದ ವ್ಯವಸ್ಥೆಯಲ್ಲಿ ಹರಡಿದರೆ ಎಲ್ಲವೂ ನಾಶವಾಗುತ್ತದೆ’ ಎಂದು ಹೇಳಿದ್ದರು.</p>.Quit India Day: ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ.<p>ಬ್ರಿಟಿಷರಿಗಿಂತ ಆರ್ಎಸ್ಎಸ್ ಅಪಾಯಕಾರಿ. ಅವರು ದೇಶದ ಆತ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದರ ಬಗ್ಗೆ ಎಚ್ಚರದಿಂದ ಇರಬೇಕು. ಏಕೆಂದರೆ ಆತ್ಮ ಕಳೆದುಹೋದರೆ, ಎಲ್ಲವೂ ಕಳೆದುಹೋಗುತ್ತದೆ. ವಿಭಜಕ ಶಕ್ತಿಗಳ ವಿರುದ್ಧ ನಾವು ಒಂದಾಗಿರಬೇಕು’ ಎಂದಿದ್ದರು</p><p>ಸಂಘ ಪರಿವಾರದ ಕಾರ್ತಕರ್ತರು ತುಷಾರ್ ಗಾಂಧಿ ಅವರ ಕಾರು ತಡೆದು, ಘೋಷಣೆಗ ಕೂಗಿ ಪ್ರತಿಭಟಿಸಿದರು. ಈ ಪುರಸಭೆ ವಾರ್ಡ್ ಅನ್ನು ಬಿಜೆಪಿ ಸದಸ್ಯ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಆರ್ಎಸ್ಎಸ್ ವಿರುದ್ಧದ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.</p><p>ತಮ್ಮ ಹೇಳಿಕೆ ಹಿಂಪಡೆಯಲು ನಿರಾಕರಿಸಿದ ತುಷಾರ್ ಗಾಂಧಿ, ‘ಗಾಂಧೀಜಿ ಕಿ ಜೈ’ ಎಂದು ಘೋಷಣೆ ಕೂಗಿ ಸ್ಥಳದಿಂದ ತೆರಳಿದರು.</p>.ಗಾಂಧಿ-ಅಣ್ಣಾ ಉಪವಾಸದಲ್ಲಿ ವ್ಯತ್ಯಾಸವಿದೆ: ತುಷಾರ್ ಗಾಂಧಿ.<p>ಈ ಬಗ್ಗೆ ಬಳಿಕ ಹೇಳಿಕೆ ನೀಡಿದ ಅವರು, ‘ನನ್ನ ಮೇಲೆ ದೈಹಿಕ ಹಲ್ಲೆ ನಡೆದಿಲ್ಲ. ಹೀಗಾಗಿ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಹೇಳಿದ್ದಾರೆ.</p><p>ಘಟನೆ ಸಂಬಂಧ ತುಷಾರ್ ಗಾಂಧಿ ಬೆನ್ನಿಗೆ ಕಾಂಗ್ರೆಸ್ ನಿಂತಿದ್ದು, ಸಂಘಪರಿವಾರ ಮಹಾತ್ಮ ಗಾಂಧಿಗೆ ಅವಮಾನಿಸಿದೆ ಎಂದು ಕಿಡಿಕಾರಿದೆ.</p> .ಗಾಂಧಿ ಮರಿಮೊಮ್ಮಗ ತುಷಾರ್ ವಿರುದ್ಧ ಪ್ರಕರಣ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಆರ್ಎಸ್ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.</p>.ಮಣಿಪುರ ಹೊತ್ತಿ ಉರಿದರೂ ಮೌನವಾಗಿದ್ದ ಪ್ರಧಾನಿ ಮೋದಿ: ತುಷಾರ್ ಗಾಂಧಿ ಟೀಕೆ.<p>ಬುಧವಾರ ನೈಯಾಟಿಂಕರ ಎನ್ನುವಲ್ಲಿ ತುಷಾರ್ ಗಾಂಧಿ ಭಾಗಿಯಾಗಿದ್ದ ಕಾರ್ಯಕ್ರಮ ಮುಗಿದ ಬಳಿಕ ಸಂಘಪರಿವಾರದೊಂದಿಗೆ ಸಂಬಂಧ ಹೊಂದಿದ್ದಾರೆ ಎನ್ನಲಾದ ವ್ಯಕ್ತಿಗಳ ಸಣ್ಣ ಗುಂಪೊಂದು ಘೋಷಣೆ ಕೂಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಘೋಷಣೆ ಕೂಗುವ ದೃಶ್ಯಗಳನ್ನು ಟಿ.ವಿ ಮಾಧ್ಯಮಗಳು ಪ್ರಸಾರ ಮಾಡಿವೆ.</p><p>ಗಾಂಧಿವಾದಿ ದಿವಂಗತ ಪಿ, ಗೋಪಿನಾಥ್ ನಾಯರ್ ಅವರ ಪುತ್ಥಳಿ ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುಷಾರ್ ಗಾಂಧಿ ನೈಯಾಂಟಿಕರಕ್ಕೆ ಬಂದಿದ್ದರು.</p>.ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಿದ ಗಾಂಧೀಜಿ ಮರಿಮೊಮ್ಮಗ ತುಷಾರ್ ಗಾಂಧಿ .<p>ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ರಾಜ್ಯದಲ್ಲಿ ಯುಡಿಎಫ್ ಹಾಗೂ ಎಲ್ಡಿಎಫ್ ಪಕ್ಷಗಳ ಸಂಘರ್ಷಕ್ಕೆ ದೀರ್ಘ ಇತಿಹಾಸ ಇದೆ. ಎರಡೂ ಪಕ್ಷಗಳು, ಕೇರಳಕ್ಕೆ ಮತ್ತೊಂದು ಅತ್ಯಂತ ಅಪಾಯಕಾರಿ ಮತ್ತು ಕಪಟ ಶತ್ರು - ಆರ್ಎಸ್ಎಸ್ ಮತ್ತು ಬಿಜೆಪಿ ಪ್ರವೇಶಿಸಿದೆ ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದ್ದರು.</p><p>‘ಬಿಜೆಪಿಯನ್ನು ನಾವು ಸೋಲಿಸಬಹುದು. ಆದರೆ ಆರ್ಎಸ್ಎಸ್ ವಿಷ. ಅದರ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಏಕೆಂದರೆ ಅದು ನಮ್ಮ ದೇಶದ ವ್ಯವಸ್ಥೆಯಲ್ಲಿ ಹರಡಿದರೆ ಎಲ್ಲವೂ ನಾಶವಾಗುತ್ತದೆ’ ಎಂದು ಹೇಳಿದ್ದರು.</p>.Quit India Day: ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ, ಬಿಡುಗಡೆ.<p>ಬ್ರಿಟಿಷರಿಗಿಂತ ಆರ್ಎಸ್ಎಸ್ ಅಪಾಯಕಾರಿ. ಅವರು ದೇಶದ ಆತ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದರ ಬಗ್ಗೆ ಎಚ್ಚರದಿಂದ ಇರಬೇಕು. ಏಕೆಂದರೆ ಆತ್ಮ ಕಳೆದುಹೋದರೆ, ಎಲ್ಲವೂ ಕಳೆದುಹೋಗುತ್ತದೆ. ವಿಭಜಕ ಶಕ್ತಿಗಳ ವಿರುದ್ಧ ನಾವು ಒಂದಾಗಿರಬೇಕು’ ಎಂದಿದ್ದರು</p><p>ಸಂಘ ಪರಿವಾರದ ಕಾರ್ತಕರ್ತರು ತುಷಾರ್ ಗಾಂಧಿ ಅವರ ಕಾರು ತಡೆದು, ಘೋಷಣೆಗ ಕೂಗಿ ಪ್ರತಿಭಟಿಸಿದರು. ಈ ಪುರಸಭೆ ವಾರ್ಡ್ ಅನ್ನು ಬಿಜೆಪಿ ಸದಸ್ಯ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಆರ್ಎಸ್ಎಸ್ ವಿರುದ್ಧದ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.</p><p>ತಮ್ಮ ಹೇಳಿಕೆ ಹಿಂಪಡೆಯಲು ನಿರಾಕರಿಸಿದ ತುಷಾರ್ ಗಾಂಧಿ, ‘ಗಾಂಧೀಜಿ ಕಿ ಜೈ’ ಎಂದು ಘೋಷಣೆ ಕೂಗಿ ಸ್ಥಳದಿಂದ ತೆರಳಿದರು.</p>.ಗಾಂಧಿ-ಅಣ್ಣಾ ಉಪವಾಸದಲ್ಲಿ ವ್ಯತ್ಯಾಸವಿದೆ: ತುಷಾರ್ ಗಾಂಧಿ.<p>ಈ ಬಗ್ಗೆ ಬಳಿಕ ಹೇಳಿಕೆ ನೀಡಿದ ಅವರು, ‘ನನ್ನ ಮೇಲೆ ದೈಹಿಕ ಹಲ್ಲೆ ನಡೆದಿಲ್ಲ. ಹೀಗಾಗಿ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಹೇಳಿದ್ದಾರೆ.</p><p>ಘಟನೆ ಸಂಬಂಧ ತುಷಾರ್ ಗಾಂಧಿ ಬೆನ್ನಿಗೆ ಕಾಂಗ್ರೆಸ್ ನಿಂತಿದ್ದು, ಸಂಘಪರಿವಾರ ಮಹಾತ್ಮ ಗಾಂಧಿಗೆ ಅವಮಾನಿಸಿದೆ ಎಂದು ಕಿಡಿಕಾರಿದೆ.</p> .ಗಾಂಧಿ ಮರಿಮೊಮ್ಮಗ ತುಷಾರ್ ವಿರುದ್ಧ ಪ್ರಕರಣ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>