<p><strong>ಮುಂಬೈ:</strong> ‘ಹಿಂದೂ’ ಎಂಬ ಪದವು ನಾಮಪದವಲ್ಲ, ಅದು ವಿಶೇಷಣ. ಭಾರತದಲ್ಲಿ ವಾಸಿಸುವವರೆಲ್ಲರೂ ಹಿಂದೂಗಳೇ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.</p><p>ಆರ್ಎಸ್ಎಸ್ನ ಶತಮಾನೋತ್ಸವ ಅಂಗವಾಗಿ ಶನಿವಾರ ಇಲ್ಲಿ ಆಯೋಜಿಸಿದ್ದ ‘ಸಂಘದ 100 ವರ್ಷಗಳ ಪಯಣ ಮತ್ತು ಹೊಸ ದಿಗಂತಗಳು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>‘ಧರ್ಮನಿರಪೇಕ್ಷತೆ’ ಎಂಬುದು ತಪ್ಪು ಪದ. ‘ಪಂಥನಿರಪೇಕ್ಷತೆ’ ಎಂಬುದು ಸರಿಯಾದ ಪದ ಎಂದು ಅವರು ಗಮನ ಸೆಳೆದಿದ್ದಾರೆ.</p><p>‘ಆರ್ಎಸ್ಎಸ್ ಬೇರೆ ಯಾವುದೇ ಸಂಘಟನೆಯೊಂದಿಗೆ ಸ್ಪರ್ಧೆಯೊಡ್ಡಲು ಹೊರಹೊಮ್ಮಿಲ್ಲ. ಯಾವುದೇ ಸಂಘಟನೆಗೆ ಪ್ರತಿಕ್ರಿಯೆಯಾಗಿ ಅಥವಾ ವಿರೋಧವಾಗಿಯೂ ಹೊರಹೊಮ್ಮಿಲ್ಲ. ಸಂಘ (ಆರ್ಎಸ್ಎಸ್) ಜನಪ್ರಿಯತೆ, ಅಧಿಕಾರವನ್ನು ಬಯಸುವುದಿಲ್ಲ. ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಒಳ್ಳೆಯ ಕೆಲಸಗಳನ್ನು ಸರಿಯಾಗಿಯೇ ಮಾಡಬೇಕು ಎಂಬುದು ಸಂಘದ ಉದ್ದೇಶ’ ಎಂದಿದ್ದಾರೆ.</p><p>ಇಡೀ ಸಮಾಜವನ್ನು ಸಂಘಟಿಸುವುದನ್ನು ಹೊರತುಪಡಿಸಿ, ಬೇರೆ ಯಾವುದೇ ಕೆಲಸವಿಲ್ಲ ಎಂದು ಸಂಘವು ಆರಂಭದಿಂದಲೇ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>‘ಸಂಘದ ಸ್ವಯಂಸೇವಕರು ಸರ್ಕಾರದಿಂದ ಯಾವುದೇ ಹಣವನ್ನು ಪಡೆಯದೆ 1.3 ಲಕ್ಷಕ್ಕೂ ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸಮಾಜದ ಸಹಕಾರದೊಂದಿಗೆ ತಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p><p>ಆರ್ಥಿಕತೆ, ನ್ಯಾಯಾಂಗ, ಆಡಳಿತ, ಕಲೆ, ಕ್ರೀಡೆ, ಧರ್ಮ, ರಾಜಕೀಯ, ಕಾರ್ಪೊರೇಟ್ ವಲಯ, ಸಿನಿಮಾ ಮತ್ತು ಇತರ ಕ್ಷೇತ್ರಗಳ ಗಣ್ಯರು ಸೇರಿದಂತೆ ಆಹ್ವಾನಿತರನ್ನು ಒಟ್ಟು 10 ವರ್ಗಗಳಾಗಿ ವರ್ಗೀಕರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ನಿರ್ಮಾಪಕ ಸುಭಾಷ್ ಘಾಯ್, ನಟಿ ಹಾಗೂ ಬಿಜೆಪಿ ಸಂಸದೆ ಹೇಮಾ ಮಾಲಿನಿ, ಗಾಯಕಿ ಅನುರಾಧಾ ಪೌಡ್ವಾಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಹಿಂದೂ’ ಎಂಬ ಪದವು ನಾಮಪದವಲ್ಲ, ಅದು ವಿಶೇಷಣ. ಭಾರತದಲ್ಲಿ ವಾಸಿಸುವವರೆಲ್ಲರೂ ಹಿಂದೂಗಳೇ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.</p><p>ಆರ್ಎಸ್ಎಸ್ನ ಶತಮಾನೋತ್ಸವ ಅಂಗವಾಗಿ ಶನಿವಾರ ಇಲ್ಲಿ ಆಯೋಜಿಸಿದ್ದ ‘ಸಂಘದ 100 ವರ್ಷಗಳ ಪಯಣ ಮತ್ತು ಹೊಸ ದಿಗಂತಗಳು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>‘ಧರ್ಮನಿರಪೇಕ್ಷತೆ’ ಎಂಬುದು ತಪ್ಪು ಪದ. ‘ಪಂಥನಿರಪೇಕ್ಷತೆ’ ಎಂಬುದು ಸರಿಯಾದ ಪದ ಎಂದು ಅವರು ಗಮನ ಸೆಳೆದಿದ್ದಾರೆ.</p><p>‘ಆರ್ಎಸ್ಎಸ್ ಬೇರೆ ಯಾವುದೇ ಸಂಘಟನೆಯೊಂದಿಗೆ ಸ್ಪರ್ಧೆಯೊಡ್ಡಲು ಹೊರಹೊಮ್ಮಿಲ್ಲ. ಯಾವುದೇ ಸಂಘಟನೆಗೆ ಪ್ರತಿಕ್ರಿಯೆಯಾಗಿ ಅಥವಾ ವಿರೋಧವಾಗಿಯೂ ಹೊರಹೊಮ್ಮಿಲ್ಲ. ಸಂಘ (ಆರ್ಎಸ್ಎಸ್) ಜನಪ್ರಿಯತೆ, ಅಧಿಕಾರವನ್ನು ಬಯಸುವುದಿಲ್ಲ. ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಒಳ್ಳೆಯ ಕೆಲಸಗಳನ್ನು ಸರಿಯಾಗಿಯೇ ಮಾಡಬೇಕು ಎಂಬುದು ಸಂಘದ ಉದ್ದೇಶ’ ಎಂದಿದ್ದಾರೆ.</p><p>ಇಡೀ ಸಮಾಜವನ್ನು ಸಂಘಟಿಸುವುದನ್ನು ಹೊರತುಪಡಿಸಿ, ಬೇರೆ ಯಾವುದೇ ಕೆಲಸವಿಲ್ಲ ಎಂದು ಸಂಘವು ಆರಂಭದಿಂದಲೇ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>‘ಸಂಘದ ಸ್ವಯಂಸೇವಕರು ಸರ್ಕಾರದಿಂದ ಯಾವುದೇ ಹಣವನ್ನು ಪಡೆಯದೆ 1.3 ಲಕ್ಷಕ್ಕೂ ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸಮಾಜದ ಸಹಕಾರದೊಂದಿಗೆ ತಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p><p>ಆರ್ಥಿಕತೆ, ನ್ಯಾಯಾಂಗ, ಆಡಳಿತ, ಕಲೆ, ಕ್ರೀಡೆ, ಧರ್ಮ, ರಾಜಕೀಯ, ಕಾರ್ಪೊರೇಟ್ ವಲಯ, ಸಿನಿಮಾ ಮತ್ತು ಇತರ ಕ್ಷೇತ್ರಗಳ ಗಣ್ಯರು ಸೇರಿದಂತೆ ಆಹ್ವಾನಿತರನ್ನು ಒಟ್ಟು 10 ವರ್ಗಗಳಾಗಿ ವರ್ಗೀಕರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ನಿರ್ಮಾಪಕ ಸುಭಾಷ್ ಘಾಯ್, ನಟಿ ಹಾಗೂ ಬಿಜೆಪಿ ಸಂಸದೆ ಹೇಮಾ ಮಾಲಿನಿ, ಗಾಯಕಿ ಅನುರಾಧಾ ಪೌಡ್ವಾಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>