<p><strong>ನವದೆಹಲಿ:</strong> ಕಳೆದ 75 ವರ್ಷಗಳಲ್ಲಿ ದೇಶವು ಎಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಿತ್ತೋ ಅಷ್ಟು ಆಗಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p>.<p>ನವದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು ಶಕ್ತಿ, ಸಾಮರ್ಥ್ಯ ಹೊಂದಿದ್ದರೂ ಕೆಲಸಕ್ಕೂ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಹೇಳಿದ್ದಾರೆ.</p>.<p>‘ನಾವು ಮುಂದೆ ಸಾಗಬೇಕಿದ್ದರೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಿದೆ. ಆದರೆ ನಾವು ಹಾಗೆ ಮಾಡಿರಲಿಲ್ಲ. ಆದ್ದರಿಂದ ಇನ್ನೂ ಮುಂದುವರಿಯುವುದು ಸಾಧ್ಯವಾಗಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rss-plans-massive-expansion-in-west-bengal-to-add-700-more-shakhas-by-2024-884545.html" itemprop="url">ಪಶ್ಚಿಮ ಬಂಗಾಳದಲ್ಲಿ ಇನ್ನೂ 700 ಶಾಖೆಗಳನ್ನು ಆರಂಭಿಸಲು ಆರ್ಎಸ್ಎಸ್ ಗುರಿ: ವರದಿ </a></p>.<p>ವಿಶ್ವದ ಇತರ ಯಾವುದೇ ದೇಶಗಳಿಗಿಂತಲೂ ಹೆಚ್ಚು ಉನ್ನತ ಮತ್ತು ಶ್ರೇಷ್ಠ ವ್ಯಕ್ತಿಗಳನ್ನು ಭಾರತವು ರೂಪಿಸಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಎಲ್ಲರೂ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾರೆ. ಆದರೆ, ನಾವು ರಾಮನಂತೆ ಕಾರ್ಯನಿರ್ವಹಿಸಬೇಕಿದೆ. ನಮಗೆ ಭರತನಂತೆ ಪ್ರೀತಿಸುವ, ಕಾಳಜಿ ವಹಿಸುವ ಸಹೋದರ ಬೇಕು. ಆದರೆ ನಾವು ಅದೇ ಹಾದಿಯನ್ನು ಅನುಸರಿಸುವುದಿಲ್ಲ ಎಂದು ಭಾಗವತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ 75 ವರ್ಷಗಳಲ್ಲಿ ದೇಶವು ಎಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಿತ್ತೋ ಅಷ್ಟು ಆಗಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p>.<p>ನವದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು ಶಕ್ತಿ, ಸಾಮರ್ಥ್ಯ ಹೊಂದಿದ್ದರೂ ಕೆಲಸಕ್ಕೂ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಹೇಳಿದ್ದಾರೆ.</p>.<p>‘ನಾವು ಮುಂದೆ ಸಾಗಬೇಕಿದ್ದರೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಿದೆ. ಆದರೆ ನಾವು ಹಾಗೆ ಮಾಡಿರಲಿಲ್ಲ. ಆದ್ದರಿಂದ ಇನ್ನೂ ಮುಂದುವರಿಯುವುದು ಸಾಧ್ಯವಾಗಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rss-plans-massive-expansion-in-west-bengal-to-add-700-more-shakhas-by-2024-884545.html" itemprop="url">ಪಶ್ಚಿಮ ಬಂಗಾಳದಲ್ಲಿ ಇನ್ನೂ 700 ಶಾಖೆಗಳನ್ನು ಆರಂಭಿಸಲು ಆರ್ಎಸ್ಎಸ್ ಗುರಿ: ವರದಿ </a></p>.<p>ವಿಶ್ವದ ಇತರ ಯಾವುದೇ ದೇಶಗಳಿಗಿಂತಲೂ ಹೆಚ್ಚು ಉನ್ನತ ಮತ್ತು ಶ್ರೇಷ್ಠ ವ್ಯಕ್ತಿಗಳನ್ನು ಭಾರತವು ರೂಪಿಸಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಎಲ್ಲರೂ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾರೆ. ಆದರೆ, ನಾವು ರಾಮನಂತೆ ಕಾರ್ಯನಿರ್ವಹಿಸಬೇಕಿದೆ. ನಮಗೆ ಭರತನಂತೆ ಪ್ರೀತಿಸುವ, ಕಾಳಜಿ ವಹಿಸುವ ಸಹೋದರ ಬೇಕು. ಆದರೆ ನಾವು ಅದೇ ಹಾದಿಯನ್ನು ಅನುಸರಿಸುವುದಿಲ್ಲ ಎಂದು ಭಾಗವತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>