<p><strong>ಮುಂಬೈ:</strong> ‘ಆರ್ಎಸ್ಎಸ್ನಿಂದಾಗಿಯೇ ಬಿಜೆಪಿಗೆ ಒಳ್ಳೆಯ ದಿನಗಳು(ಅಚ್ಛೇ ದಿನ್) ಬಂದಿವೆ. ಈ ವಿಚಾರದಲ್ಲಿ ಆರ್ಎಸ್ಎಸ್ನ ಪಾತ್ರ ಇದೆ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p>.<p>‘ಬಿಜೆಪಿಯಿಂದಾಗಿ ಆರ್ಎಸ್ಎಸ್ಗೆ ಒಳ್ಳೆಯ ದಿನಗಳು ಬಂದಿಲ್ಲ. ಸ್ವಯಂ ಸೇವಕರ ಪರಿಶ್ರಮ ಹಾಗೂ ಸೈದ್ಧಾಂತಿಕ ಬದ್ಧತೆಯಿಂದಾಗಿ ಸಂಘಕ್ಕೆ ಒಳ್ಳೆಯ ದಿನಗಳು ಬಂದಿವೆ. ನಾವು ರಾಮ ಮಂದಿರ ನಿರ್ಮಾಣಕ್ಕೆ ದೃಢಸಂಕಲ್ಪ ಮಾಡಿದ್ದೆವು. ಇದಕ್ಕೆ ಬೆಂಬಲ ನೀಡಿದವರಿಗೆ ಲಾಭವಾಗಿದೆ’ ಎಂದು ಹೇಳಿದ್ದಾರೆ.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಎರಡು ದಿನಗಳ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಈ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>‘ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ, ದೇಶದ ಭದ್ರತೆಯಲ್ಲಿ ಗಮನಾರ್ಹ ಬದಲಾವಣೆ ಸೇರಿ ಹಲವು ವಿಚಾರಗಳಲ್ಲಿ ಬಿಜೆಪಿಯ ಸಾಧನೆ ಗಮನಾರ್ಹ’ ಎಂದು ಹೇಳಿದರು.</p>.<p>‘ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಬಿಜೆಪಿ ಸೇರಿದಂತೆ ಸಂಘ ಪರಿವಾರದಡಿ ಅನೇಕ ಸಂಘಟನೆಗಳಿದ್ದು, ಎಲ್ಲವೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಈ ಸಂಘಟನೆಗಳಲ್ಲಿ ಸ್ವಯಂ ಸೇವಕರೂ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.</p>.<p>‘ಅಗತ್ಯ ಕಂಡುಬಂದಲ್ಲಿ ಈ ಸಂಘಟನೆಗಳಿಗೆ ನಾವು ಮಾರ್ಗದರ್ಶನ ನೀಡುತ್ತೇವೆ. ಕೆಲವೊಮ್ಮೆ ಎಚ್ಚರಿಕೆ ನೀಡುತ್ತೇವೆ. ಅಂತಿಮ ನಿರ್ಧಾರ ಅವುಗಳದ್ದೇ ಆಗಿರುತ್ತದೆ. ಆದರೆ, ಕೆಲವು ಸಲ ಅವರು ಮಾಡಿದ ತಪ್ಪುಗಳಿಗೆ ನಮ್ಮನ್ನು ದೂಷಿಸಲಾಗುತ್ತದೆ’ ಎಂದೂ ಹೇಳಿದರು.</p>.<div><blockquote>ನಮ್ಮದು ‘ವೋಟ್ ವಾದಿ’ ವ್ಯವಸ್ಥೆಯಾಗಿ ಪರಿವರ್ತನೆಯಾಗಿದೆ. ಹೀಗಾಗಿ ಮತದಾರರೇ ರಾಜಕೀಯ ಒತ್ತಡ ಹೇರುತ್ತಾರೆಯೇ ಹೊರತು ಆರ್ಎಸ್ಎಸ್ ಅಲ್ಲ. ಇದು ಬದಲಾಗಬೇಕು</blockquote><span class="attribution">ಮೋಹನ್ ಭಾಗವತ್ ಆರ್ಎಸ್ಎಸ್ ಮುಖ್ಯಸ್ಥ</span></div>.<h2>ಸಂವಾದದ ಪ್ರಮುಖ ಅಂಶಗಳು</h2><ul><li><p>ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ಹೆಚ್ಚು ಮಾಹಿತಿ ಇಲ್ಲ. ಆದರೆ ಜಾಗತಿಕ ಮಟ್ಟದಲ್ಲಿ ಭಾರತ ಏಕಾಂಗಿಯಾಗಿ ಇರಲು ಸಾಧ್ಯವಿಲ್ಲ. </p></li><li><p>ಕಮ್ಯುನಿಸ್ಟರು ಅಪೇಕ್ಷೆಪಟ್ಟಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಆರ್ಎಸ್ಎಸ್ ಸಿದ್ಧವಿದೆ (100 ವರ್ಷ ಕಳೆದರೂ ಕಮ್ಯುನಿಸ್ಟರು ಭದ್ರವಾದ ನೆಲೆ ಕಂಡುಕೊಂಡಿಲ್ಲವೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ) </p></li></ul>.<p><strong>‘ಅಧ್ಯಾತ್ಮವಿಲ್ಲದ ಧರ್ಮ ಆಕ್ರಮಣಕಾರಿ ಆಗುತ್ತದೆ’</strong></p><p>‘ಇಸ್ಲಾಂ ಅನ್ನು ಶಾಂತಿ ಬೋಧಿಸುವ ಧರ್ಮ ಎನ್ನಲಾಗುತ್ತಿದೆ. ಆದರೆ, ಶಾಂತಿ ಕಂಡುಬರುತ್ತಿಲ್ಲ. ಆಧ್ಯಾತ್ಮಿಕತೆ ಇಲ್ಲದ ಧರ್ಮವು ಆಕ್ರಮಣಕಾರಿಯಾಗುತ್ತದೆ ಹಾಗೂ ಪ್ರಾಬಲ್ಯ ಸಾಧಿಸಲು ಮುಂದಾಗುತ್ತದೆ’ ಎಂದು ಮೋಹನ್ ಭಾಗವತ್ ಹೇಳಿದರು.</p><p>‘ಕ್ರೈಸ್ತ ಹಾಗೂ ಇಸ್ಲಾಂ ಧರ್ಮಗಳು ಕ್ರಮವಾಗಿ ಏಸು ಕ್ರಿಸ್ತ ಮತ್ತು ಪ್ರವಾದಿ ಮೊಹಮ್ಮದ್ ಅವರು ಬೋಧಿಸಿರುವಂತೆ ಈಗ ಇಲ್ಲ. ನೈಜ ಇಸ್ಲಾಂ ಮತ್ತು ಕ್ರೈಸ್ತ ಧರ್ಮ ಪಾಲನೆ ಅಗತ್ಯ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಸಾಕಷ್ಟು ವಿರೋಧದ ನಡುವೆಯೂ ಸಂಘದ ಸ್ವಯಂ ಸೇವಕರು ಮುಸ್ಲಿಂ ಸಮುದಾಯ ದೊಂದಿಗೆ ಕೆಲಸ ಮಾಡುತ್ತಿದ್ದಾರಲ್ಲ’ ಎಂಬ ಮತ್ತೊಂದು ಪ್ರಶ್ನೆಗೆ,‘ಎರಡೂ ಕಡೆಯವರು ವಿರೋಧ ಮಾಡುತ್ತಲೇ ಇದ್ದರೆ ಕೇವಲ ಸಂಘರ್ಷವೇ ಇರುತ್ತದೆ. ನಾವು ಏನನ್ನೂ ಸಾಧಿಸಲು ಸಾಧ್ಯ ಇಲ್ಲ’ ಎಂದು ಅವರು ಪ್ರತಿಕ್ರಿಯಸಿದರು.</p><p>‘ದೇಶದ ಮುಸ್ಲಿಮರು ಹಾಗೂ ಕ್ರೈಸ್ತರೊಂದಿಗೆ ಸ್ನೇಹ, ಮಾತುಕತೆ ಹಾಗೂ ನಂಬಿಕೆಯ ಅಗತ್ಯವಿದೆ. ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದು ಇಲ್ಲ. ನಾವೆಲ್ಲಾ ಒಂದೇ ಸಮಾಜ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಆರ್ಎಸ್ಎಸ್ನಿಂದಾಗಿಯೇ ಬಿಜೆಪಿಗೆ ಒಳ್ಳೆಯ ದಿನಗಳು(ಅಚ್ಛೇ ದಿನ್) ಬಂದಿವೆ. ಈ ವಿಚಾರದಲ್ಲಿ ಆರ್ಎಸ್ಎಸ್ನ ಪಾತ್ರ ಇದೆ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p>.<p>‘ಬಿಜೆಪಿಯಿಂದಾಗಿ ಆರ್ಎಸ್ಎಸ್ಗೆ ಒಳ್ಳೆಯ ದಿನಗಳು ಬಂದಿಲ್ಲ. ಸ್ವಯಂ ಸೇವಕರ ಪರಿಶ್ರಮ ಹಾಗೂ ಸೈದ್ಧಾಂತಿಕ ಬದ್ಧತೆಯಿಂದಾಗಿ ಸಂಘಕ್ಕೆ ಒಳ್ಳೆಯ ದಿನಗಳು ಬಂದಿವೆ. ನಾವು ರಾಮ ಮಂದಿರ ನಿರ್ಮಾಣಕ್ಕೆ ದೃಢಸಂಕಲ್ಪ ಮಾಡಿದ್ದೆವು. ಇದಕ್ಕೆ ಬೆಂಬಲ ನೀಡಿದವರಿಗೆ ಲಾಭವಾಗಿದೆ’ ಎಂದು ಹೇಳಿದ್ದಾರೆ.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಎರಡು ದಿನಗಳ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಈ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>‘ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ, ದೇಶದ ಭದ್ರತೆಯಲ್ಲಿ ಗಮನಾರ್ಹ ಬದಲಾವಣೆ ಸೇರಿ ಹಲವು ವಿಚಾರಗಳಲ್ಲಿ ಬಿಜೆಪಿಯ ಸಾಧನೆ ಗಮನಾರ್ಹ’ ಎಂದು ಹೇಳಿದರು.</p>.<p>‘ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಬಿಜೆಪಿ ಸೇರಿದಂತೆ ಸಂಘ ಪರಿವಾರದಡಿ ಅನೇಕ ಸಂಘಟನೆಗಳಿದ್ದು, ಎಲ್ಲವೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಈ ಸಂಘಟನೆಗಳಲ್ಲಿ ಸ್ವಯಂ ಸೇವಕರೂ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.</p>.<p>‘ಅಗತ್ಯ ಕಂಡುಬಂದಲ್ಲಿ ಈ ಸಂಘಟನೆಗಳಿಗೆ ನಾವು ಮಾರ್ಗದರ್ಶನ ನೀಡುತ್ತೇವೆ. ಕೆಲವೊಮ್ಮೆ ಎಚ್ಚರಿಕೆ ನೀಡುತ್ತೇವೆ. ಅಂತಿಮ ನಿರ್ಧಾರ ಅವುಗಳದ್ದೇ ಆಗಿರುತ್ತದೆ. ಆದರೆ, ಕೆಲವು ಸಲ ಅವರು ಮಾಡಿದ ತಪ್ಪುಗಳಿಗೆ ನಮ್ಮನ್ನು ದೂಷಿಸಲಾಗುತ್ತದೆ’ ಎಂದೂ ಹೇಳಿದರು.</p>.<div><blockquote>ನಮ್ಮದು ‘ವೋಟ್ ವಾದಿ’ ವ್ಯವಸ್ಥೆಯಾಗಿ ಪರಿವರ್ತನೆಯಾಗಿದೆ. ಹೀಗಾಗಿ ಮತದಾರರೇ ರಾಜಕೀಯ ಒತ್ತಡ ಹೇರುತ್ತಾರೆಯೇ ಹೊರತು ಆರ್ಎಸ್ಎಸ್ ಅಲ್ಲ. ಇದು ಬದಲಾಗಬೇಕು</blockquote><span class="attribution">ಮೋಹನ್ ಭಾಗವತ್ ಆರ್ಎಸ್ಎಸ್ ಮುಖ್ಯಸ್ಥ</span></div>.<h2>ಸಂವಾದದ ಪ್ರಮುಖ ಅಂಶಗಳು</h2><ul><li><p>ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ಹೆಚ್ಚು ಮಾಹಿತಿ ಇಲ್ಲ. ಆದರೆ ಜಾಗತಿಕ ಮಟ್ಟದಲ್ಲಿ ಭಾರತ ಏಕಾಂಗಿಯಾಗಿ ಇರಲು ಸಾಧ್ಯವಿಲ್ಲ. </p></li><li><p>ಕಮ್ಯುನಿಸ್ಟರು ಅಪೇಕ್ಷೆಪಟ್ಟಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಆರ್ಎಸ್ಎಸ್ ಸಿದ್ಧವಿದೆ (100 ವರ್ಷ ಕಳೆದರೂ ಕಮ್ಯುನಿಸ್ಟರು ಭದ್ರವಾದ ನೆಲೆ ಕಂಡುಕೊಂಡಿಲ್ಲವೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ) </p></li></ul>.<p><strong>‘ಅಧ್ಯಾತ್ಮವಿಲ್ಲದ ಧರ್ಮ ಆಕ್ರಮಣಕಾರಿ ಆಗುತ್ತದೆ’</strong></p><p>‘ಇಸ್ಲಾಂ ಅನ್ನು ಶಾಂತಿ ಬೋಧಿಸುವ ಧರ್ಮ ಎನ್ನಲಾಗುತ್ತಿದೆ. ಆದರೆ, ಶಾಂತಿ ಕಂಡುಬರುತ್ತಿಲ್ಲ. ಆಧ್ಯಾತ್ಮಿಕತೆ ಇಲ್ಲದ ಧರ್ಮವು ಆಕ್ರಮಣಕಾರಿಯಾಗುತ್ತದೆ ಹಾಗೂ ಪ್ರಾಬಲ್ಯ ಸಾಧಿಸಲು ಮುಂದಾಗುತ್ತದೆ’ ಎಂದು ಮೋಹನ್ ಭಾಗವತ್ ಹೇಳಿದರು.</p><p>‘ಕ್ರೈಸ್ತ ಹಾಗೂ ಇಸ್ಲಾಂ ಧರ್ಮಗಳು ಕ್ರಮವಾಗಿ ಏಸು ಕ್ರಿಸ್ತ ಮತ್ತು ಪ್ರವಾದಿ ಮೊಹಮ್ಮದ್ ಅವರು ಬೋಧಿಸಿರುವಂತೆ ಈಗ ಇಲ್ಲ. ನೈಜ ಇಸ್ಲಾಂ ಮತ್ತು ಕ್ರೈಸ್ತ ಧರ್ಮ ಪಾಲನೆ ಅಗತ್ಯ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಸಾಕಷ್ಟು ವಿರೋಧದ ನಡುವೆಯೂ ಸಂಘದ ಸ್ವಯಂ ಸೇವಕರು ಮುಸ್ಲಿಂ ಸಮುದಾಯ ದೊಂದಿಗೆ ಕೆಲಸ ಮಾಡುತ್ತಿದ್ದಾರಲ್ಲ’ ಎಂಬ ಮತ್ತೊಂದು ಪ್ರಶ್ನೆಗೆ,‘ಎರಡೂ ಕಡೆಯವರು ವಿರೋಧ ಮಾಡುತ್ತಲೇ ಇದ್ದರೆ ಕೇವಲ ಸಂಘರ್ಷವೇ ಇರುತ್ತದೆ. ನಾವು ಏನನ್ನೂ ಸಾಧಿಸಲು ಸಾಧ್ಯ ಇಲ್ಲ’ ಎಂದು ಅವರು ಪ್ರತಿಕ್ರಿಯಸಿದರು.</p><p>‘ದೇಶದ ಮುಸ್ಲಿಮರು ಹಾಗೂ ಕ್ರೈಸ್ತರೊಂದಿಗೆ ಸ್ನೇಹ, ಮಾತುಕತೆ ಹಾಗೂ ನಂಬಿಕೆಯ ಅಗತ್ಯವಿದೆ. ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದು ಇಲ್ಲ. ನಾವೆಲ್ಲಾ ಒಂದೇ ಸಮಾಜ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>