<p><strong>ಇಂಫಾಲ್</strong>: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಭಾಗವತ್ ಅವರು ಮೂರು ದಿನಗಳ ಭೇಟಿ ವೇಳೆ ನಾಗರಿಕರು, ಉದ್ಯಮಿಗಳು ಹಾಗೂ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಆರ್ಎಸ್ಎಸ್ ರಾಜ್ಯ ಕಾರ್ಯದರ್ಶಿ ತರುಣ್ ಕುಮಾರ್ ಶರ್ಮಾ ಹೇಳಿದ್ದಾರೆ.</p><p>'ನಮ್ಮ ಸರಸಂಘಚಾಲಕರು ಆರ್ಎಸ್ಎಸ್ನ ಶತಮಾನೋತ್ಸವ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಗುವಾಹಟಿಯಿಂದ ನವೆಂಬರ್ 20ರಂದು ಬರಲಿರುವ ಅವರು, ನವೆಂಬರ್ 22ಕ್ಕೆ ವಾಪಸ್ ಆಗಲಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.</p><p>ಎರಡು ವರ್ಷಗಳ ಹಿಂದೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭಾಗವತ್ ಅವರು ಮಣಿಪುರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಅವರು 2022ರಲ್ಲಿ ಕೊನೆಯದಾಗಿ ಇಲ್ಲಿಗೆ ಬಂದಿದ್ದರು ಎಂದು ಆರ್ಎಸ್ಎಸ್ನ ಮತ್ತೊಬ್ಬರು ಹೇಳಿದ್ದಾರೆ.</p><p>ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ 260 ಮಂದಿ ಮೃತಪಟ್ಟು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.</p><p>ಮುಖ್ಯಮಂತ್ರಿಯಾಗಿದ್ದ ಎನ್. ಬಿರೇನ್ ಸಿಂಗ್ ಅವರು ಇದೇ ವರ್ಷ ಫೆಬ್ರುವರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಭಾಗವತ್ ಅವರು ಮೂರು ದಿನಗಳ ಭೇಟಿ ವೇಳೆ ನಾಗರಿಕರು, ಉದ್ಯಮಿಗಳು ಹಾಗೂ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಆರ್ಎಸ್ಎಸ್ ರಾಜ್ಯ ಕಾರ್ಯದರ್ಶಿ ತರುಣ್ ಕುಮಾರ್ ಶರ್ಮಾ ಹೇಳಿದ್ದಾರೆ.</p><p>'ನಮ್ಮ ಸರಸಂಘಚಾಲಕರು ಆರ್ಎಸ್ಎಸ್ನ ಶತಮಾನೋತ್ಸವ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಗುವಾಹಟಿಯಿಂದ ನವೆಂಬರ್ 20ರಂದು ಬರಲಿರುವ ಅವರು, ನವೆಂಬರ್ 22ಕ್ಕೆ ವಾಪಸ್ ಆಗಲಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.</p><p>ಎರಡು ವರ್ಷಗಳ ಹಿಂದೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭಾಗವತ್ ಅವರು ಮಣಿಪುರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಅವರು 2022ರಲ್ಲಿ ಕೊನೆಯದಾಗಿ ಇಲ್ಲಿಗೆ ಬಂದಿದ್ದರು ಎಂದು ಆರ್ಎಸ್ಎಸ್ನ ಮತ್ತೊಬ್ಬರು ಹೇಳಿದ್ದಾರೆ.</p><p>ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ 260 ಮಂದಿ ಮೃತಪಟ್ಟು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.</p><p>ಮುಖ್ಯಮಂತ್ರಿಯಾಗಿದ್ದ ಎನ್. ಬಿರೇನ್ ಸಿಂಗ್ ಅವರು ಇದೇ ವರ್ಷ ಫೆಬ್ರುವರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>