ಬಡತನವೂ ನಮ್ಮ ಎದುರು ರಾಕ್ಷಸನಂತೆ ಸವಾಲೊಡ್ಡಿದೆ.ದೇಶದಲ್ಲಿ 20 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ಹೇಳಲು ನಾವು ದುಃಖಪಡಬೇಕು. 23 ಕೋಟಿ ಜನರು ದಿನಕ್ಕೆ ₹375ಕ್ಕಿಂತ ಕಡಿಮೆ ಸಂಪಾದಿಸುತ್ತಿದ್ದಾರೆ. ರಾಕ್ಷಸನಂತೆ ಬೃಹದಾಕಾರದಲ್ಲಿ ಬೆಳೆದಿರುವ ಬಡತನದ ಸಂಪೂರ್ಣ ನಿರ್ಮೂಲನೆ ಮುಖ್ಯ.ಈ ಸವಾಲುಗಳನ್ನು ಎದುರಿಸಲು ಕಳೆದ ಕೆಲವು ವರ್ಷಗಳಿಂದ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ್, ಎಫ್ಪಿಒ, ಜನ್ಧನ್,ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ಕ್ರಾಂತಿಗೆ ಸಂಬಂಧಿಸಿದ ಯೋಜನೆಗಳು ಉತ್ತಮ ಪ್ರಯತ್ನಗಳು ಎಂದು ಅವರು ಶ್ಲಾಘಿಸಿದರು.