<p><strong>ಜೋಧಪುರ:</strong> ಮಣಿಪುರವು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿರುವುದು ಒಳ್ಳೆಯ ಸಂಗತಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಭಾನುವಾರ ಅಭಿಪ್ರಾಯಪಟ್ಟಿದೆ.</p>.<p>ಜೋಧಪುರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಸುನಿಲ್ ಅಂಬೇಕರ್ ಅವರು, ‘ಈಶಾನ್ಯ ಭಾರತದಲ್ಲಿ ಪತ್ಯೇಕತಾವಾದಿ ಹೋರಾಟ ಮತ್ತು ಹಿಂಸಾಚಾರ ತಗ್ಗುತ್ತಿರುವುದನ್ನು ಗಮನಿಸಿದ್ದೇವೆ. ಈಗ ಅಲ್ಲಿ ಶಾಂತಿ ನೆಲಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮಾಡಿದ ಪ್ರಯತ್ನದ ಫಲವಾಗಿ ಈ ಫಲಿತಾಂಶ ಕಾಣುತ್ತಿದ್ದೇವೆ’ ಎಂದರು.</p>.<p>ಇತ್ತೀಚೆಗೆ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿತ್ತು. ಈ ಬೆಳವಣಿಗೆ ಮೇಲೆ ಆರ್ಎಸ್ಎಸ್ ನಿಗಾ ಇಟ್ಟಿತ್ತು ಮತ್ತು ಕುಕಿ–ಮೈತೇಯಿ ಸಮುದಾಯಗಳನ್ನು ಒಟ್ಟಿಗೆ ತರಲು ಸತತವಾಗಿ ಪ್ರಯತ್ನಿಸಿತ್ತು. ಸದ್ಯ ಸಮುದಾಯಗಳು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿವೆ. ಅದರಲ್ಲೂ ಕೇಂದ್ರ ಗೃಹ ಇಲಾಖೆಯು ಕುಕಿ ಸಮುದಾಯದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರದಲ್ಲಿ ಈ ಬೆಳವಣಿಗೆ ಕಾಣುತ್ತಿದ್ದೇವೆ. ಸದ್ಯ ಮೈತೇಯಿಗಳಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಮುಕ್ತಗೊಳಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಧಪುರ:</strong> ಮಣಿಪುರವು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿರುವುದು ಒಳ್ಳೆಯ ಸಂಗತಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಭಾನುವಾರ ಅಭಿಪ್ರಾಯಪಟ್ಟಿದೆ.</p>.<p>ಜೋಧಪುರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಸುನಿಲ್ ಅಂಬೇಕರ್ ಅವರು, ‘ಈಶಾನ್ಯ ಭಾರತದಲ್ಲಿ ಪತ್ಯೇಕತಾವಾದಿ ಹೋರಾಟ ಮತ್ತು ಹಿಂಸಾಚಾರ ತಗ್ಗುತ್ತಿರುವುದನ್ನು ಗಮನಿಸಿದ್ದೇವೆ. ಈಗ ಅಲ್ಲಿ ಶಾಂತಿ ನೆಲಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮಾಡಿದ ಪ್ರಯತ್ನದ ಫಲವಾಗಿ ಈ ಫಲಿತಾಂಶ ಕಾಣುತ್ತಿದ್ದೇವೆ’ ಎಂದರು.</p>.<p>ಇತ್ತೀಚೆಗೆ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿತ್ತು. ಈ ಬೆಳವಣಿಗೆ ಮೇಲೆ ಆರ್ಎಸ್ಎಸ್ ನಿಗಾ ಇಟ್ಟಿತ್ತು ಮತ್ತು ಕುಕಿ–ಮೈತೇಯಿ ಸಮುದಾಯಗಳನ್ನು ಒಟ್ಟಿಗೆ ತರಲು ಸತತವಾಗಿ ಪ್ರಯತ್ನಿಸಿತ್ತು. ಸದ್ಯ ಸಮುದಾಯಗಳು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿವೆ. ಅದರಲ್ಲೂ ಕೇಂದ್ರ ಗೃಹ ಇಲಾಖೆಯು ಕುಕಿ ಸಮುದಾಯದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರದಲ್ಲಿ ಈ ಬೆಳವಣಿಗೆ ಕಾಣುತ್ತಿದ್ದೇವೆ. ಸದ್ಯ ಮೈತೇಯಿಗಳಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಮುಕ್ತಗೊಳಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>