<p><strong>ಮುಂಬೈ</strong>: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಯಾರ ವಿರುದ್ಧವೂ ಇಲ್ಲ. ಅದು ಅಧಿಕಾರವನ್ನೂ ಬಯಸುವುದಿಲ್ಲ. ಸಮಾಜವನ್ನು ಒಗ್ಗೂಡಿಸುವುದು ಸಂಘದ ಉದ್ದೇಶವಾಗಿದೆ ಎಂದು ಅದರ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು. </p>.<p>ಆರ್ಎಸ್ಎಸ್ ಸ್ಥಾಪಕ ಕೇಶವ ಬಲಿರಾಮ ಹೆಡ್ಗೇವಾರ್ ಅವರು ಸಮಾಜದಲ್ಲಿ ಅನೇಕ ನ್ಯೂನತೆಗಳನ್ನು ಗುರುತಿಸಿದರು. ಅದರಲ್ಲಿ ಒಗ್ಗಟ್ಟಿನ ಕೊರತೆಯೂ ಇತ್ತು. ಇದುವೇ 1925ರಲ್ಲಿ ಸಂಘವು ಸ್ಥಾಪನೆಯಾಗಲು ಪ್ರಮುಖ ಕಾರಣ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದರು. </p>.<p>‘100 ವರ್ಷಗಳ ಸಂಘ ಪಯಣ: ಹೊಸ ಪರ್ವ’ ಶೀರ್ಷಿಕೆಯಡಿ 2 ದಿನಗಳ ಉಪನ್ಯಾಸ ಕಾರ್ಯಕ್ರಮವು ಶನಿವಾರ ಆರಂಭವಾಯಿತು. ಈ ವೇಳೆ ಭಾಗವತ್ ಮಾತನಾಡಿದರು. </p>.<p>‘ಸಮಾಜದ ಏಕೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಕೆಲಸವನ್ನೂ ಕೈಗೆತ್ತಿಕೊಳ್ಳುವುದಿಲ್ಲ ಎಂದು ಆರ್ಎಸ್ಎಸ್ ಬಹಳ ಹಿಂದೆಯೇ ನಿರ್ಧರಿಸಿತ್ತು. ಆ ಕಾರ್ಯವನ್ನು ಸಾಧಿಸುವುದಷ್ಟೇ ಗುರಿ. ದೇಶದಲ್ಲಿ ನಡೆಯುತ್ತಿರುವ ಸಕಾರಾತ್ಮಕ ಪ್ರಯತ್ನಗಳನ್ನು ಅದು ಬೆಂಬಲಿಸುತ್ತದೆ’ ಎಂದು ಅವರು ಹೇಳಿದರು. </p>.<p>‘ಆರ್ಎಸ್ಎಸ್ನಿಂದಾಗಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ ಎಂದು ಅನೇಕರು ನಂಬಿದ್ದಾರೆ. ವಾಸ್ತವಲದಲ್ಲಿ ಮೋದಿ ರಾಜಕೀಯ ಪಕ್ಷವೊಂದನ್ನು ಮುನ್ನಡೆಸುತ್ತಾರೆ. ರಾಜಕೀಯ ಪಕ್ಷವು ಪ್ರತ್ಯೇಕ ಘಟಕವಾಗಿದ್ದು, ಅದು ಆರ್ಎಸ್ಎಸ್ನ ಅಂಗವಲ್ಲ’ ಎಂದು ಸ್ಪಷ್ಟನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಯಾರ ವಿರುದ್ಧವೂ ಇಲ್ಲ. ಅದು ಅಧಿಕಾರವನ್ನೂ ಬಯಸುವುದಿಲ್ಲ. ಸಮಾಜವನ್ನು ಒಗ್ಗೂಡಿಸುವುದು ಸಂಘದ ಉದ್ದೇಶವಾಗಿದೆ ಎಂದು ಅದರ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು. </p>.<p>ಆರ್ಎಸ್ಎಸ್ ಸ್ಥಾಪಕ ಕೇಶವ ಬಲಿರಾಮ ಹೆಡ್ಗೇವಾರ್ ಅವರು ಸಮಾಜದಲ್ಲಿ ಅನೇಕ ನ್ಯೂನತೆಗಳನ್ನು ಗುರುತಿಸಿದರು. ಅದರಲ್ಲಿ ಒಗ್ಗಟ್ಟಿನ ಕೊರತೆಯೂ ಇತ್ತು. ಇದುವೇ 1925ರಲ್ಲಿ ಸಂಘವು ಸ್ಥಾಪನೆಯಾಗಲು ಪ್ರಮುಖ ಕಾರಣ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದರು. </p>.<p>‘100 ವರ್ಷಗಳ ಸಂಘ ಪಯಣ: ಹೊಸ ಪರ್ವ’ ಶೀರ್ಷಿಕೆಯಡಿ 2 ದಿನಗಳ ಉಪನ್ಯಾಸ ಕಾರ್ಯಕ್ರಮವು ಶನಿವಾರ ಆರಂಭವಾಯಿತು. ಈ ವೇಳೆ ಭಾಗವತ್ ಮಾತನಾಡಿದರು. </p>.<p>‘ಸಮಾಜದ ಏಕೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಕೆಲಸವನ್ನೂ ಕೈಗೆತ್ತಿಕೊಳ್ಳುವುದಿಲ್ಲ ಎಂದು ಆರ್ಎಸ್ಎಸ್ ಬಹಳ ಹಿಂದೆಯೇ ನಿರ್ಧರಿಸಿತ್ತು. ಆ ಕಾರ್ಯವನ್ನು ಸಾಧಿಸುವುದಷ್ಟೇ ಗುರಿ. ದೇಶದಲ್ಲಿ ನಡೆಯುತ್ತಿರುವ ಸಕಾರಾತ್ಮಕ ಪ್ರಯತ್ನಗಳನ್ನು ಅದು ಬೆಂಬಲಿಸುತ್ತದೆ’ ಎಂದು ಅವರು ಹೇಳಿದರು. </p>.<p>‘ಆರ್ಎಸ್ಎಸ್ನಿಂದಾಗಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ ಎಂದು ಅನೇಕರು ನಂಬಿದ್ದಾರೆ. ವಾಸ್ತವಲದಲ್ಲಿ ಮೋದಿ ರಾಜಕೀಯ ಪಕ್ಷವೊಂದನ್ನು ಮುನ್ನಡೆಸುತ್ತಾರೆ. ರಾಜಕೀಯ ಪಕ್ಷವು ಪ್ರತ್ಯೇಕ ಘಟಕವಾಗಿದ್ದು, ಅದು ಆರ್ಎಸ್ಎಸ್ನ ಅಂಗವಲ್ಲ’ ಎಂದು ಸ್ಪಷ್ಟನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>