ನವದೆಹಲಿ:ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ)ಮುಖ್ಯಸ್ಥ ಓಂ ಪ್ರಕಾಶ್ ರಾಜಭರ್ ಅವರು, ಮೊಹಮ್ಮದ್ ಅಲಿ ಜಿನ್ನಾ ಭಾರತದ ಮೊದಲ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಬುಧವಾರ ಹೇಳಿದ್ದರು. ಅದೇ ಮಾತನ್ನು ಪುನರುಚ್ಚರಿಸಿರುವ ಅವರು, ದೇಶ ವಿಭಜನೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಕಾರಣ ಎಂದು ಆರೋಪಿಸಿದ್ದಾರೆ.