<p><strong>ನವದೆಹಲಿ</strong>: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ ನಡೆದ ₹14 ಕೋಟಿ ಹಗರಣವನ್ನು ಉಲ್ಲೇಖಿಸಿ, ವೃತ್ತಿಪರ ಸಂಸ್ಥೆಗಳಲ್ಲಿ ಆರ್ಎಸ್ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.</p><p>ಹಗರಣದ ಕುರಿತ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮಾತನಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘2014ರಿಂದ ವೃತ್ತಿಪರ ಸಂಸ್ಥೆಗಳಲ್ಲಿ ಆರ್ಎಸ್ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ. ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ(ಐಸಿಎಚ್ಆರ್) ಅದಕ್ಕೊಂದು ಉದಾಹರಣೆ’ ಎಂದಿದ್ದಾರೆ.</p><p>‘ಐಸಿಎಚ್ಆರ್ ನಡೆದ ಅಕ್ರಮಗಳ ಬಗ್ಗೆ ಕೇಂದ್ರ ಜಾಗೃತ ದಳ(ಸಿವಿಸಿ) ತನಿಖೆ ನಡೆಸುತ್ತಿದ್ದು, ಆರ್ಎಸ್ಎಸ್ನ ‘ಅಖಿಲ ಭಾರತೀಯ ಇತಿಹಾಸ್ ಸಂಕಲನ್ ಯೋಜನೆ’(ಎಬಿಐಎಸ್ವೈ) ಸದಸ್ಯರ ಮೇಲೆ ದೋಷಾರೋಪಣೆ ಮಾಡಿದೆ. ಇದು ಬರೋಬ್ಬರಿ ₹14 ಕೋಟಿ ಹಗರಣ. ಐಸಿಎಚ್ಆರ್ಗೆ ಇದು ದೊಡ್ಡ ಮೊತ್ತವಾಗಿದೆ’ ಎಂದು ಹೇಳಿದ್ದಾರೆ.</p><p>‘ಐಸಿಎಚ್ಆರ್ ಒಂದೇ ಅಲ್ಲ, ಉನ್ನತ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳನ್ನು ಆರ್ಎಸ್ಎಸ್ ಬೆಂಬಲಿಗರು ನಾಶಪಡಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿಪಡುವಂತದ್ದು ಏನಿಲ್ಲ’ ಎಂದು ಹೇಳಿದ್ದಾರೆ.</p><p>ಐಸಿಎಚ್ಆರ್ನಲ್ಲಿ ನಡೆದ ₹14 ಕೋಟಿ ಹಗರಣವನ್ನು ಸಿವಿಸಿ ತನಿಖೆ ನಡೆಸುತ್ತಿದ್ದು, ಎಬಿಐಎಸ್ವೈನ ಕೆಲವು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ ನಡೆದ ₹14 ಕೋಟಿ ಹಗರಣವನ್ನು ಉಲ್ಲೇಖಿಸಿ, ವೃತ್ತಿಪರ ಸಂಸ್ಥೆಗಳಲ್ಲಿ ಆರ್ಎಸ್ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.</p><p>ಹಗರಣದ ಕುರಿತ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮಾತನಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘2014ರಿಂದ ವೃತ್ತಿಪರ ಸಂಸ್ಥೆಗಳಲ್ಲಿ ಆರ್ಎಸ್ಎಸ್ ವ್ಯವಸ್ಥಿತವಾಗಿ ನುಸುಳುತ್ತಿದೆ. ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ(ಐಸಿಎಚ್ಆರ್) ಅದಕ್ಕೊಂದು ಉದಾಹರಣೆ’ ಎಂದಿದ್ದಾರೆ.</p><p>‘ಐಸಿಎಚ್ಆರ್ ನಡೆದ ಅಕ್ರಮಗಳ ಬಗ್ಗೆ ಕೇಂದ್ರ ಜಾಗೃತ ದಳ(ಸಿವಿಸಿ) ತನಿಖೆ ನಡೆಸುತ್ತಿದ್ದು, ಆರ್ಎಸ್ಎಸ್ನ ‘ಅಖಿಲ ಭಾರತೀಯ ಇತಿಹಾಸ್ ಸಂಕಲನ್ ಯೋಜನೆ’(ಎಬಿಐಎಸ್ವೈ) ಸದಸ್ಯರ ಮೇಲೆ ದೋಷಾರೋಪಣೆ ಮಾಡಿದೆ. ಇದು ಬರೋಬ್ಬರಿ ₹14 ಕೋಟಿ ಹಗರಣ. ಐಸಿಎಚ್ಆರ್ಗೆ ಇದು ದೊಡ್ಡ ಮೊತ್ತವಾಗಿದೆ’ ಎಂದು ಹೇಳಿದ್ದಾರೆ.</p><p>‘ಐಸಿಎಚ್ಆರ್ ಒಂದೇ ಅಲ್ಲ, ಉನ್ನತ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳನ್ನು ಆರ್ಎಸ್ಎಸ್ ಬೆಂಬಲಿಗರು ನಾಶಪಡಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿಪಡುವಂತದ್ದು ಏನಿಲ್ಲ’ ಎಂದು ಹೇಳಿದ್ದಾರೆ.</p><p>ಐಸಿಎಚ್ಆರ್ನಲ್ಲಿ ನಡೆದ ₹14 ಕೋಟಿ ಹಗರಣವನ್ನು ಸಿವಿಸಿ ತನಿಖೆ ನಡೆಸುತ್ತಿದ್ದು, ಎಬಿಐಎಸ್ವೈನ ಕೆಲವು ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>