<p><strong>ನವದೆಹಲಿ:</strong> 'ರಾಷ್ಟ್ರವೇ ಸರ್ವಸ್ವ' ಮತ್ತು 'ಜನ ಸೇವೆಯೇ ಜನಾರ್ಧನ ಸೇವೆ' ಎಂಬುದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಕಲಿಸಿಕೊಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. </p><p>ಲೆಕ್ಸ್ ಫ್ರಿಡ್ಮನ್ ಅವರ ಪಾಡ್ಕಾಸ್ಟ್ನಲ್ಲಿ ನರೇಂದ್ರ ಮೋದಿ ಈ ಕುರಿತು ಮಾತನಾಡಿದ್ದಾರೆ. </p><p>'ಆರ್ಎಸ್ಎಸ್ ಮೂಲಕ ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಕಂಡುಕೊಂಡೆ. ಅಂತಹ ಪವಿತ್ರ ಸಂಸ್ಥೆಯಿಂದ ಬದುಕಿನ ಮೌಲ್ಯಗಳನ್ನು ಕರಗತ ಮಾಡಲು ಸಾಧ್ಯವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ. </p><p>ಈ ಸಂದರ್ಭದಲ್ಲಿ ತಮ್ಮ ಬಾಲ್ಯದ ದಿನಗಳನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. 'ನನ್ನ ಬಾಲ್ಯವನ್ನು ಕಡುಬಡತನದಲ್ಲಿ ಕಳೆದಿದ್ದೇನೆ. ಆದರೆ ಎಂದಿಗೂ ಅದರ ಭಾಸವಾಗಿರಲಿಲ್ಲ' ಎಂದು ಹೇಳಿದ್ದಾರೆ. </p><p>'ತಂದೆಯ ಚಹಾ ಅಂಗಡಿಯಲ್ಲಿ ಕುಳಿತಿದ್ದಾಗ ಅಲ್ಲಿಗೆ ಬರುತ್ತಿದ್ದ ಜನರಿಂದ ನಾನು ಬಹಳಷ್ಟು ವಿಚಾರಗಳನ್ನು ಕಲಿತಿದ್ದೇನೆ. ಈ ಕಲಿಕೆಗಳನ್ನು ನನ್ನ ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ' ಎಂದು ಹೇಳಿದ್ದಾರೆ. </p><p>ಮಾತು ಮುಂದುವರಿಸಿದ ಅವರು 'ವಿಮರ್ಶೆಗಳನ್ನು ನಾನು ಸ್ವಾಗತಿಸುತ್ತೇನೆ. ಅದು ಪ್ರಜಾಪ್ರಭುತ್ವದ ಆತ್ಮ ಎಂದು ಬಲವಾಗಿ ನಂಬಿದ್ದೇನೆ' ಎಂದು ಹೇಳಿದ್ದಾರೆ. </p>.ಪಾಕ್ನೊಂದಿಗೆ ಶಾಂತಿ ಬೆಳೆಸುವ ಪ್ರಯತ್ನವು ಶತ್ರುತ್ವ, ದ್ರೋಹ ಎದುರಿಸಿತು: ಮೋದಿ.ಪ್ರಧಾನಿ ಮೋದಿ ಅದನ್ನು ನೋಡಬಾರದು ಎಂದು ಬಯಸಿದ್ದೆ: ಟ್ರಂಪ್ ಹೀಗೆ ಹೇಳಿದ್ದೇಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ರಾಷ್ಟ್ರವೇ ಸರ್ವಸ್ವ' ಮತ್ತು 'ಜನ ಸೇವೆಯೇ ಜನಾರ್ಧನ ಸೇವೆ' ಎಂಬುದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಕಲಿಸಿಕೊಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. </p><p>ಲೆಕ್ಸ್ ಫ್ರಿಡ್ಮನ್ ಅವರ ಪಾಡ್ಕಾಸ್ಟ್ನಲ್ಲಿ ನರೇಂದ್ರ ಮೋದಿ ಈ ಕುರಿತು ಮಾತನಾಡಿದ್ದಾರೆ. </p><p>'ಆರ್ಎಸ್ಎಸ್ ಮೂಲಕ ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಕಂಡುಕೊಂಡೆ. ಅಂತಹ ಪವಿತ್ರ ಸಂಸ್ಥೆಯಿಂದ ಬದುಕಿನ ಮೌಲ್ಯಗಳನ್ನು ಕರಗತ ಮಾಡಲು ಸಾಧ್ಯವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ. </p><p>ಈ ಸಂದರ್ಭದಲ್ಲಿ ತಮ್ಮ ಬಾಲ್ಯದ ದಿನಗಳನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. 'ನನ್ನ ಬಾಲ್ಯವನ್ನು ಕಡುಬಡತನದಲ್ಲಿ ಕಳೆದಿದ್ದೇನೆ. ಆದರೆ ಎಂದಿಗೂ ಅದರ ಭಾಸವಾಗಿರಲಿಲ್ಲ' ಎಂದು ಹೇಳಿದ್ದಾರೆ. </p><p>'ತಂದೆಯ ಚಹಾ ಅಂಗಡಿಯಲ್ಲಿ ಕುಳಿತಿದ್ದಾಗ ಅಲ್ಲಿಗೆ ಬರುತ್ತಿದ್ದ ಜನರಿಂದ ನಾನು ಬಹಳಷ್ಟು ವಿಚಾರಗಳನ್ನು ಕಲಿತಿದ್ದೇನೆ. ಈ ಕಲಿಕೆಗಳನ್ನು ನನ್ನ ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ' ಎಂದು ಹೇಳಿದ್ದಾರೆ. </p><p>ಮಾತು ಮುಂದುವರಿಸಿದ ಅವರು 'ವಿಮರ್ಶೆಗಳನ್ನು ನಾನು ಸ್ವಾಗತಿಸುತ್ತೇನೆ. ಅದು ಪ್ರಜಾಪ್ರಭುತ್ವದ ಆತ್ಮ ಎಂದು ಬಲವಾಗಿ ನಂಬಿದ್ದೇನೆ' ಎಂದು ಹೇಳಿದ್ದಾರೆ. </p>.ಪಾಕ್ನೊಂದಿಗೆ ಶಾಂತಿ ಬೆಳೆಸುವ ಪ್ರಯತ್ನವು ಶತ್ರುತ್ವ, ದ್ರೋಹ ಎದುರಿಸಿತು: ಮೋದಿ.ಪ್ರಧಾನಿ ಮೋದಿ ಅದನ್ನು ನೋಡಬಾರದು ಎಂದು ಬಯಸಿದ್ದೆ: ಟ್ರಂಪ್ ಹೀಗೆ ಹೇಳಿದ್ದೇಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>