<p><strong>ಮುಂಬೈ:</strong> ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವುದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸ್ವಾಗತಿಸಿದ್ದು, ‘ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಎಲ್ಲರನ್ನೂ ಒಳಗೊಳ್ಳುತ್ತದೆ’ ಎಂದು ಹೇಳಿದೆ.</p>.<p>ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಅಮೃತ ಕಾಲದ ಜತೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಸೂದೆ ಅಂಗೀಕಾರವಾಗಿರುವುದನ್ನು ಸ್ವಾಗತಿಸಿ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂಕ್ಷಿಪ್ತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. </p>.<p>‘ಮಹಿಳಾ ಸಬಲೀಕರಣ ಮತ್ತು ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ 2023’ ಅನ್ನು ಅಂಗೀಕರಿಸುವ ಮೂಲಕ ಭಾರತದ ಸಂಸತ್ತು ಹೊಸ ಇತಿಹಾಸ ಸೃಷ್ಟಿಸಿದೆ. ಮಹತ್ವದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ಅಲ್ಲದೆ, ಹೆಚ್ಚು ಒಳಗೊಳ್ಳುವಂತೆ ಮಾಡುತ್ತದೆ’ ಎಂದು ಈ ಇಬ್ಬರೂ ನಾಯಕರು ಜಂಟಿ ಹೇಳಿಯಲ್ಲಿ ತಿಳಿಸಿದ್ದಾರೆ.</p>.<p>‘ಆರ್ಎಸ್ಎಸ್ ಇದನ್ನು ಸ್ವಾಗತಾರ್ಹ ಮತ್ತು ಶ್ಲಾಘನೀಯ ಹೆಜ್ಜೆ ಎಂದೇ ಪರಿಗಣಿಸುತ್ತದೆ. ಮಹಿಳೆಯರ ಸಹಭಾಗಿತ್ವವು ದೇಶದ ಅಭಿವೃದ್ಧಿಗೆ ಹೊಸ ಆಯಾಮಗಳನ್ನು ನೀಡುವ ವಿಶ್ವಾಸ ನಮಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವುದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸ್ವಾಗತಿಸಿದ್ದು, ‘ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಎಲ್ಲರನ್ನೂ ಒಳಗೊಳ್ಳುತ್ತದೆ’ ಎಂದು ಹೇಳಿದೆ.</p>.<p>ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಅಮೃತ ಕಾಲದ ಜತೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಸೂದೆ ಅಂಗೀಕಾರವಾಗಿರುವುದನ್ನು ಸ್ವಾಗತಿಸಿ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂಕ್ಷಿಪ್ತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. </p>.<p>‘ಮಹಿಳಾ ಸಬಲೀಕರಣ ಮತ್ತು ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ 2023’ ಅನ್ನು ಅಂಗೀಕರಿಸುವ ಮೂಲಕ ಭಾರತದ ಸಂಸತ್ತು ಹೊಸ ಇತಿಹಾಸ ಸೃಷ್ಟಿಸಿದೆ. ಮಹತ್ವದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ಅಲ್ಲದೆ, ಹೆಚ್ಚು ಒಳಗೊಳ್ಳುವಂತೆ ಮಾಡುತ್ತದೆ’ ಎಂದು ಈ ಇಬ್ಬರೂ ನಾಯಕರು ಜಂಟಿ ಹೇಳಿಯಲ್ಲಿ ತಿಳಿಸಿದ್ದಾರೆ.</p>.<p>‘ಆರ್ಎಸ್ಎಸ್ ಇದನ್ನು ಸ್ವಾಗತಾರ್ಹ ಮತ್ತು ಶ್ಲಾಘನೀಯ ಹೆಜ್ಜೆ ಎಂದೇ ಪರಿಗಣಿಸುತ್ತದೆ. ಮಹಿಳೆಯರ ಸಹಭಾಗಿತ್ವವು ದೇಶದ ಅಭಿವೃದ್ಧಿಗೆ ಹೊಸ ಆಯಾಮಗಳನ್ನು ನೀಡುವ ವಿಶ್ವಾಸ ನಮಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>