<p><strong>ಕಣ್ಣೂರು (ಕೇರಳ):</strong> 2008ರಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲಶ್ಶೇರಿಯ ನ್ಯಾಯಾಲಯವು ಗುರುವಾರ ಏಳು ಆರ್ಎಸ್ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ವಿಮಲ್ ಜೆ. ಸುಮಿತ್ ಅಲಿಯಾಸ್ ಕುಟ್ಟನ್, ಕೆ.ಕೆ ಪ್ರಜೇಶ್ ಬಾಬು, ಬಿ.ನಿಧಿನ್, ಕೆ.ಸನಲ್, ಸ್ಮಿಜೋಶ್, ಸಜೀಶ್ ಮತ್ತು ವಿ ಜಯೇಶ್ ಅವರನ್ನು ತಪ್ಪಿತಸ್ಥರು ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಘೋಷಿಸಿದ್ದಾರೆ. </p><p>ಆರೋಪಿಗಳಾದ ಸಂತೋಷ್ ಕುಮಾರ್, ಬಿ.ಶರತ್, ಇ.ಕೆ. ಸನೀಶ್ ಮತ್ತು ಕುನ್ನುಂಪ್ರತ್ ಅಜೇಶ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಆದರೆ, ಎಂಟನೇ ಆರೋಪಿ ಕೆ. ಅಜಿತ್ ವಿಚಾರಣೆಯ ವೇಳೆ ಮೃತಪಟ್ಟಿದ್ದರು.</p><p>2008ರ ಡಿಸೆಂಬರ್ 31ರಂದು ತಲಶ್ಶೇರಿಯ ಬಳಿಯ ಥಲೈನಲ್ಲಿ ಸಿಪಿಐ(ಎಂ) ಕಾರ್ಯಕರ್ತ ಲತೀಶ್ ಅವರನ್ನು ಹತ್ಯೆ ಮಾಡಲಾಗಿತ್ತು. ರಾಜಕೀಯ ದ್ವೇಷದ ಭಾಗವಾಗಿ ನಡೆದ ದಾಳಿಯಲ್ಲಿ ಲತೀಶ್ ಸ್ನೇಹಿತ ಕೂಡ ಗಾಯಗೊಂಡಿದ್ದರು.</p><p>ಆರೋಪಿಗಳ ಮೇಲೆ ಗಲಭೆ, ಕ್ರಿಮಿನಲ್ ಬೆದರಿಕೆ, ಪಿತೂರಿ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು (ಕೇರಳ):</strong> 2008ರಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲಶ್ಶೇರಿಯ ನ್ಯಾಯಾಲಯವು ಗುರುವಾರ ಏಳು ಆರ್ಎಸ್ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ವಿಮಲ್ ಜೆ. ಸುಮಿತ್ ಅಲಿಯಾಸ್ ಕುಟ್ಟನ್, ಕೆ.ಕೆ ಪ್ರಜೇಶ್ ಬಾಬು, ಬಿ.ನಿಧಿನ್, ಕೆ.ಸನಲ್, ಸ್ಮಿಜೋಶ್, ಸಜೀಶ್ ಮತ್ತು ವಿ ಜಯೇಶ್ ಅವರನ್ನು ತಪ್ಪಿತಸ್ಥರು ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಘೋಷಿಸಿದ್ದಾರೆ. </p><p>ಆರೋಪಿಗಳಾದ ಸಂತೋಷ್ ಕುಮಾರ್, ಬಿ.ಶರತ್, ಇ.ಕೆ. ಸನೀಶ್ ಮತ್ತು ಕುನ್ನುಂಪ್ರತ್ ಅಜೇಶ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಆದರೆ, ಎಂಟನೇ ಆರೋಪಿ ಕೆ. ಅಜಿತ್ ವಿಚಾರಣೆಯ ವೇಳೆ ಮೃತಪಟ್ಟಿದ್ದರು.</p><p>2008ರ ಡಿಸೆಂಬರ್ 31ರಂದು ತಲಶ್ಶೇರಿಯ ಬಳಿಯ ಥಲೈನಲ್ಲಿ ಸಿಪಿಐ(ಎಂ) ಕಾರ್ಯಕರ್ತ ಲತೀಶ್ ಅವರನ್ನು ಹತ್ಯೆ ಮಾಡಲಾಗಿತ್ತು. ರಾಜಕೀಯ ದ್ವೇಷದ ಭಾಗವಾಗಿ ನಡೆದ ದಾಳಿಯಲ್ಲಿ ಲತೀಶ್ ಸ್ನೇಹಿತ ಕೂಡ ಗಾಯಗೊಂಡಿದ್ದರು.</p><p>ಆರೋಪಿಗಳ ಮೇಲೆ ಗಲಭೆ, ಕ್ರಿಮಿನಲ್ ಬೆದರಿಕೆ, ಪಿತೂರಿ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>