‘ಟಿಎಂಸಿ ನಾಯಕರು ದೊಡ್ಡ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರೆ, ಪಕ್ಷದೊಳಗೆ ಪ್ರತ್ಯೇಕ ಬಣ ಸೃಷ್ಟಿಯಾಗಬಹುದು ಎಂದು ಆರ್ಎಸ್ಎಸ್ ಆತಂಕ ವ್ಯಕ್ತಪಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಂದೊಮ್ಮೆ ಬಿಜೆಪಿ ಸೋತರೆ ಇವರೆಲ್ಲಾ ಪಕ್ಷವನ್ನು ನಡು ನೀರಿನಲ್ಲಿ ಬಿಟ್ಟು ಮತ್ತೆ ಟಿಎಂಸಿಯತ್ತ ಮುಖಮಾಡಬಹುದು ಎಂಬ ಅಳುಕು ಆರ್ಎಸ್ಎಸ್ಗೆ ಇದೆ’ ಎಂದು ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿಯ ಮೂಲಗಳು ತಿಳಿಸಿವೆ.