<p><strong>ನವದೆಹಲಿ:</strong> ‘ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಆ ಕಾಯ್ದೆ ಈಗ ಅವಸಾನದ ಅಂಚಿನಲ್ಲಿದೆ’ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.</p>.<p>ಆರ್ಟಿಐ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಸೋಮವಾರವಷ್ಟೇ ಅಂಗೀಕರಿಸಲಾಗಿದೆ. ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ ಸೋನಿಯಾ, ‘ಆರ್ಟಿಐ ಕಾಯ್ದೆಯು ‘ತೊಂದರೆ ನೀಡುವಂಥದ್ದು’ ಎಂಬ ಭಾವನೆ ಸರ್ಕಾರದಲ್ಲಿ ಗಟ್ಟಿಯಾಗಿದ್ದು, ಆ ಕಾರಣಕ್ಕೆ, ಹೇಗಾದರೂ ಮಾಡಿ ಕೇಂದ್ರ ಮಾಹಿತಿ ಆಯುಕ್ತರ ಅಧಿಕಾರ ಮತ್ತು ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ’ ಎಂದಿದ್ದಾರೆ.</p>.<p>‘ಕಳೆದ ಒಂದು ದಶಕಕ್ಕೂ ಹೆಚ್ಚಿನ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ನಾಗರಿಕರು ಇದರ ಲಾಭ ಪಡೆದಿದ್ದಾರೆ. ಆಡಳಿತದ ಎಲ್ಲಾ ಹಂತಗಳಲ್ಲೂ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಹೊಸ ಸಂಸ್ಕೃತಿಯನ್ನು ತರುವಲ್ಲಿ ಸಹಾಯ ಮಾಡಿದೆ. ಆ ಮೂಲಕ ಪ್ರಜಾಪ್ರಭುತ್ವ ಇನ್ನಷ್ಟು ಗಟ್ಟಿಗೊಂಡಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>**</p>.<p><strong>ಸೋನಿಯಾ ಹೇಳಿದ್ದೇನು?</strong></p>.<p>* ಆಯುಕ್ತರ ಅಧಿಕಾರ ಕಸಿದುಕೊಳ್ಳಲು ಸರ್ಕಾರದ ಕ್ರಮ</p>.<p>* ದೇಶದ ನಾಗರಿಕರ ಶಕ್ತಿ ಕುಂದಿಸುವ ತಿದ್ದುಪಡಿ</p>.<p>* ಆರ್ಟಿಐ ನಮ್ಮ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಆ ಕಾಯ್ದೆ ಈಗ ಅವಸಾನದ ಅಂಚಿನಲ್ಲಿದೆ’ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.</p>.<p>ಆರ್ಟಿಐ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಸೋಮವಾರವಷ್ಟೇ ಅಂಗೀಕರಿಸಲಾಗಿದೆ. ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ ಸೋನಿಯಾ, ‘ಆರ್ಟಿಐ ಕಾಯ್ದೆಯು ‘ತೊಂದರೆ ನೀಡುವಂಥದ್ದು’ ಎಂಬ ಭಾವನೆ ಸರ್ಕಾರದಲ್ಲಿ ಗಟ್ಟಿಯಾಗಿದ್ದು, ಆ ಕಾರಣಕ್ಕೆ, ಹೇಗಾದರೂ ಮಾಡಿ ಕೇಂದ್ರ ಮಾಹಿತಿ ಆಯುಕ್ತರ ಅಧಿಕಾರ ಮತ್ತು ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ’ ಎಂದಿದ್ದಾರೆ.</p>.<p>‘ಕಳೆದ ಒಂದು ದಶಕಕ್ಕೂ ಹೆಚ್ಚಿನ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ನಾಗರಿಕರು ಇದರ ಲಾಭ ಪಡೆದಿದ್ದಾರೆ. ಆಡಳಿತದ ಎಲ್ಲಾ ಹಂತಗಳಲ್ಲೂ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಹೊಸ ಸಂಸ್ಕೃತಿಯನ್ನು ತರುವಲ್ಲಿ ಸಹಾಯ ಮಾಡಿದೆ. ಆ ಮೂಲಕ ಪ್ರಜಾಪ್ರಭುತ್ವ ಇನ್ನಷ್ಟು ಗಟ್ಟಿಗೊಂಡಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>**</p>.<p><strong>ಸೋನಿಯಾ ಹೇಳಿದ್ದೇನು?</strong></p>.<p>* ಆಯುಕ್ತರ ಅಧಿಕಾರ ಕಸಿದುಕೊಳ್ಳಲು ಸರ್ಕಾರದ ಕ್ರಮ</p>.<p>* ದೇಶದ ನಾಗರಿಕರ ಶಕ್ತಿ ಕುಂದಿಸುವ ತಿದ್ದುಪಡಿ</p>.<p>* ಆರ್ಟಿಐ ನಮ್ಮ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>