<p><strong>ನವದೆಹಲಿ:</strong> ಕೇಂದ್ರದ ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯಾ ಸಯೀದ್ ಅವರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಶಂಕಿತ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.</p>.<p>ಡಿಸೆಂಬರ್ 1989ರಲ್ಲಿ ರುಬೈಯಾ ಸಯೀದ್ ಅವರನ್ನು ಜಿಕೆಎಲ್ಎಫ್ ಉಗ್ರರು ಅಪಹರಿಸಿದ್ದರು. ಆಗ ಮುಫ್ತಿ ಮೊಹಮ್ಮದ್ ಅವರು ಗೃಹ ಸಚಿವರಾಗಿದ್ದರು. 36 ವರ್ಷಗಳ ಹಿಂದೆ ನಡೆದ ಅಪರಾಧದಲ್ಲಿ ಭಾಗಿಯಾಗಿದ್ದ, ಶ್ರೀನಗರದ ಇಶ್ಬರ್ ನಿಶಾತ್ನ ನಿವಾಸಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಅಪಹರಣವಾದ ಐದು ದಿನಗಳ ಬಳಿಕ, ಅಂದಿನ ವಿ.ಪಿ ಸಿಂಗ್ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವು ಐವರು ಭಯೋತ್ಪಾದಕರನ್ನು ಬಿಡುಗಡೆಗೊಳಿಸಿದ ನಂತರ ರುಬೈಯಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ರುಬೈಯಾ ಅವರು ತಮಿಳುನಾಡಿನಲ್ಲಿ ವಾಸಿಸುತ್ತಿದ್ದಾರೆ.</p>.<p>ಈ ಪ್ರಕರಣದ ಪ್ರಮುಖ ಆರೋಪಿ ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲ್ಲಿಕ್ನಿಗೆ ಭಯೋತ್ಪಾದನೆಗೆ ಹಣದ ನೆರವು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರಲ್ಲಿ ವಿಶೇಷ ಎನ್ಐಎ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದು, ತಿಹಾರ ಜೈಲಿನಲ್ಲಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರದ ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯಾ ಸಯೀದ್ ಅವರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಶಂಕಿತ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.</p>.<p>ಡಿಸೆಂಬರ್ 1989ರಲ್ಲಿ ರುಬೈಯಾ ಸಯೀದ್ ಅವರನ್ನು ಜಿಕೆಎಲ್ಎಫ್ ಉಗ್ರರು ಅಪಹರಿಸಿದ್ದರು. ಆಗ ಮುಫ್ತಿ ಮೊಹಮ್ಮದ್ ಅವರು ಗೃಹ ಸಚಿವರಾಗಿದ್ದರು. 36 ವರ್ಷಗಳ ಹಿಂದೆ ನಡೆದ ಅಪರಾಧದಲ್ಲಿ ಭಾಗಿಯಾಗಿದ್ದ, ಶ್ರೀನಗರದ ಇಶ್ಬರ್ ನಿಶಾತ್ನ ನಿವಾಸಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಅಪಹರಣವಾದ ಐದು ದಿನಗಳ ಬಳಿಕ, ಅಂದಿನ ವಿ.ಪಿ ಸಿಂಗ್ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವು ಐವರು ಭಯೋತ್ಪಾದಕರನ್ನು ಬಿಡುಗಡೆಗೊಳಿಸಿದ ನಂತರ ರುಬೈಯಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ರುಬೈಯಾ ಅವರು ತಮಿಳುನಾಡಿನಲ್ಲಿ ವಾಸಿಸುತ್ತಿದ್ದಾರೆ.</p>.<p>ಈ ಪ್ರಕರಣದ ಪ್ರಮುಖ ಆರೋಪಿ ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲ್ಲಿಕ್ನಿಗೆ ಭಯೋತ್ಪಾದನೆಗೆ ಹಣದ ನೆರವು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರಲ್ಲಿ ವಿಶೇಷ ಎನ್ಐಎ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದು, ತಿಹಾರ ಜೈಲಿನಲ್ಲಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>