<p><strong>ನವದೆಹಲಿ:</strong> ಕೇರಳ ವಿಧಾನಸಭೆಯಲ್ಲಿ 2015ರ ಮಾರ್ಚ್ 13ರಂದು ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಎಲ್ಡಿಎಫ್ ಶಾಸಕರ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠವು ಕೇರಳ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದೆ.</p>.<p>‘ಸಾರ್ವಜನಿಕ ಆಸ್ತಿಯನ್ನು ನಾಶಗೊಳಿಸುವುದನ್ನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸರಿಸಮಾನವಾಗಿದೆ ಎಂದು ಹೋಲಿಸುವುದು ಅಥವಾ ವಿರೋಧ ಪಕ್ಷಗಳ ಸದಸ್ಯರಿಗೆ ಶಾಸನಬದ್ಧವಾಗಿ ದೊರೆತಿರುವ ಪ್ರತಿಭಟನೆಯ ರೂಪ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಪೀಠವು ಹೇಳಿದೆ.</p>.<p>‘ಶಾಸಕರಿಗೆ ಇರುವ ವಿಶೇಷ ಹಕ್ಕುಗಳ ಮೂಲಕ ಸಾಮಾನ್ಯ ಕಾನೂನುಗಳಿಂದ ವಿನಾಯಿತಿ ಪಡೆಯುವ ಮಾರ್ಗ ಅನುಸರಿಸಬಾರದು’ ಎಂದು ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ಶಾಸಕರ ಅಭಿವ್ಯಕ್ತಿ ಸ್ವಾತಂತ್ರ್ಯವು ಮತ್ತು ವಿಶೇಷ ಹಕ್ಕುಗಳು ಕ್ರಿಮಿನಲ್ ಕಾನೂನಿನ ವಿರುದ್ಧ ರಕ್ಷಣೆ ಒದಗಿಸುವುದಿಲ್ಲ. ಸಾರ್ವಜನಿಕ ಆಸ್ತಿ ನಾಶಗೊಳಿಸುವುದನ್ನು ಸದನದ ಸದಸ್ಯರ ಅಗತ್ಯ ಕಾರ್ಯನಿರ್ವಹಣೆಗೆ ಸರಿಸಮಾನವಾಗಿದೆ ಎಂಬುದಾಗಿ ಪರಿಗಣಿಸಬಾರದು’ ಎಂದು ತಿಳಿಸಿದೆ.</p>.<p>2015ರ ಮಾರ್ಚ್ 13ರಂದು ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿತ್ತು. ವಿರೋಧ ಪಕ್ಷದಲ್ಲಿದ್ದ ಎಲ್ಡಿಎಫ್ ಶಾಸಕರು ಅಂದಿನ ಹಣಕಾಸು ಸಚಿವ ಕೆ.ಎಂ. ಮಣಿ ಅವರು ರಾಜ್ಯ ಬಜೆಟ್ ಮಂಡಿಸುವುದನ್ನು ತಡೆಯಲು ಯತ್ನಿಸಿದ್ದರು. ಮಣಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದವು.</p>.<p>ಸದನದಲ್ಲಿ ಅಧಿಕಾರಿಗಳ ಮೇಜಿನ ಮೇಲಿದ್ದ ಕಂಪ್ಯೂಟರ್, ಕೀಬೋರ್ಡ್ಗಳು ಮತ್ತು ಮೈಕ್ಗಳನ್ನು ಎಲ್ಡಿಎಫ್ ಸದಸ್ಯರು ಹಾನಿಗೊಳಿಸಿದ್ದರು.</p>.<p>ಈ ಪ್ರಕರಣದ ಬಗ್ಗೆ ಮಾರ್ಚ್ 12ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಘಟನೆಯು ವಿಧಾನಸಭೆಯ ಅಧಿವೇಶನದಲ್ಲಿ ನಡೆದಿತ್ತು. ಹೀಗಾಗಿ, ಸ್ಪೀಕರ್ ಅವರ ಪೂರ್ವಾನುಮತಿ ಇಲ್ಲದೆಯೇ ಪ್ರಕರಣವನ್ನು ದಾಖಲಿಸಲು ಅವಕಾಶ ಇಲ್ಲ ಎಂದು ಕೇರಳ ಸರ್ಕಾರ ಪ್ರತಿಪಾದಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳ ವಿಧಾನಸಭೆಯಲ್ಲಿ 2015ರ ಮಾರ್ಚ್ 13ರಂದು ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಎಲ್ಡಿಎಫ್ ಶಾಸಕರ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.</p>.<p>ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರನ್ನೊಳಗೊಂಡ ಪೀಠವು ಕೇರಳ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದೆ.</p>.<p>‘ಸಾರ್ವಜನಿಕ ಆಸ್ತಿಯನ್ನು ನಾಶಗೊಳಿಸುವುದನ್ನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸರಿಸಮಾನವಾಗಿದೆ ಎಂದು ಹೋಲಿಸುವುದು ಅಥವಾ ವಿರೋಧ ಪಕ್ಷಗಳ ಸದಸ್ಯರಿಗೆ ಶಾಸನಬದ್ಧವಾಗಿ ದೊರೆತಿರುವ ಪ್ರತಿಭಟನೆಯ ರೂಪ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಪೀಠವು ಹೇಳಿದೆ.</p>.<p>‘ಶಾಸಕರಿಗೆ ಇರುವ ವಿಶೇಷ ಹಕ್ಕುಗಳ ಮೂಲಕ ಸಾಮಾನ್ಯ ಕಾನೂನುಗಳಿಂದ ವಿನಾಯಿತಿ ಪಡೆಯುವ ಮಾರ್ಗ ಅನುಸರಿಸಬಾರದು’ ಎಂದು ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ಶಾಸಕರ ಅಭಿವ್ಯಕ್ತಿ ಸ್ವಾತಂತ್ರ್ಯವು ಮತ್ತು ವಿಶೇಷ ಹಕ್ಕುಗಳು ಕ್ರಿಮಿನಲ್ ಕಾನೂನಿನ ವಿರುದ್ಧ ರಕ್ಷಣೆ ಒದಗಿಸುವುದಿಲ್ಲ. ಸಾರ್ವಜನಿಕ ಆಸ್ತಿ ನಾಶಗೊಳಿಸುವುದನ್ನು ಸದನದ ಸದಸ್ಯರ ಅಗತ್ಯ ಕಾರ್ಯನಿರ್ವಹಣೆಗೆ ಸರಿಸಮಾನವಾಗಿದೆ ಎಂಬುದಾಗಿ ಪರಿಗಣಿಸಬಾರದು’ ಎಂದು ತಿಳಿಸಿದೆ.</p>.<p>2015ರ ಮಾರ್ಚ್ 13ರಂದು ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿತ್ತು. ವಿರೋಧ ಪಕ್ಷದಲ್ಲಿದ್ದ ಎಲ್ಡಿಎಫ್ ಶಾಸಕರು ಅಂದಿನ ಹಣಕಾಸು ಸಚಿವ ಕೆ.ಎಂ. ಮಣಿ ಅವರು ರಾಜ್ಯ ಬಜೆಟ್ ಮಂಡಿಸುವುದನ್ನು ತಡೆಯಲು ಯತ್ನಿಸಿದ್ದರು. ಮಣಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದವು.</p>.<p>ಸದನದಲ್ಲಿ ಅಧಿಕಾರಿಗಳ ಮೇಜಿನ ಮೇಲಿದ್ದ ಕಂಪ್ಯೂಟರ್, ಕೀಬೋರ್ಡ್ಗಳು ಮತ್ತು ಮೈಕ್ಗಳನ್ನು ಎಲ್ಡಿಎಫ್ ಸದಸ್ಯರು ಹಾನಿಗೊಳಿಸಿದ್ದರು.</p>.<p>ಈ ಪ್ರಕರಣದ ಬಗ್ಗೆ ಮಾರ್ಚ್ 12ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಘಟನೆಯು ವಿಧಾನಸಭೆಯ ಅಧಿವೇಶನದಲ್ಲಿ ನಡೆದಿತ್ತು. ಹೀಗಾಗಿ, ಸ್ಪೀಕರ್ ಅವರ ಪೂರ್ವಾನುಮತಿ ಇಲ್ಲದೆಯೇ ಪ್ರಕರಣವನ್ನು ದಾಖಲಿಸಲು ಅವಕಾಶ ಇಲ್ಲ ಎಂದು ಕೇರಳ ಸರ್ಕಾರ ಪ್ರತಿಪಾದಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>