<p><strong>ಹೈದರಾಬಾದ್: </strong>ತೆಲಂಗಾಣದ ಎರಡು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ಇದೇ 14ರಂದು ನಡೆಯಲಿರುವ ಚುನಾವಣೆಯ ಪ್ರಚಾರ ದಿನ ಕಳೆದಂತೆ ಬಿರುಸಿನಿಂದ ಸಾಗಿದ್ದು, ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಪುತ್ರಿಎಸ್. ವಾಣಿ ದೇವಿ ಅವರು ಟಿಆರ್ಎಸ್ ಅಭ್ಯರ್ಥಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.</p>.<p>ಖಮ್ಮಮ್- ನಲಗೊಂಡ-ವಾರಂಗಲ್ ಮತ್ತು ಹೈದರಾಬಾದ್-ರಂಗರೆಡ್ಡಿ-ಮೆಹಬೂಬ್ನಗರ – ಈ ಎರಡು ಪದವೀಧರರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.</p>.<p>ಕಳೆದ ವರ್ಷ ಡುಬ್ಬಾಕ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ್ತು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉಂಟಾದ ಅನಿರೀಕ್ಷಿತ ಹಿನ್ನಡೆಯಿಂದ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಟಿಆರ್ಎಸ್ ಪಕ್ಷ, ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಎರಡೂ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಕಸರತ್ತು ನಡೆಸುತ್ತಿದೆ.</p>.<p>ಶಿಕ್ಷಣ ತಜ್ಞೆ ಎಸ್. ವಾಣಿ ದೇವಿ ಅವರನ್ನು ಹೈದರಾಬಾದ್–ರಂಗಾರೆಡ್ಡಿ–ಮಹಬೂಬ್ನಗರ ಕ್ಷೇತ್ರದಿಂದ ಟಿಆರ್ಎಸ್ ಕಣಕ್ಕಿಳಿಸುತ್ತಿದೆ. ಸದ್ಯ ಆ ಕ್ಷೇತ್ರದಲ್ಲಿ ಇವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಹಾಲಿ ಎಂಎಲ್ಸಿ ಎನ್. ರಾಮಚಂದ್ರರಾವ್ ಕಣದಲ್ಲಿದ್ದಾರೆ.</p>.<p>ವಾಣಿ ದೇವಿ ಅವರು, ಉಪನ್ಯಾಸಕರಾಗಿದ್ದು, ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ರಾಮಚಂದ್ರ ರಾವ್ ಅವರು ಹಿರಿಯ ವಕೀಲರು.</p>.<p>ಖಮ್ಮಮ್- ನಲಗೊಂಡ-ವಾರಂಗಲ್ ಕ್ಷೇತ್ರದಲ್ಲಿ ಹಾಲಿ ಶಾಸಕ ಪಲ್ಲ ರಾಜೇಶ್ವರ ರೆಡ್ಡಿ ಅವರು ಟಿಆರ್ಎಸ್ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ರಾಮುಲು ನಾಯ್ಕ್ ಮತ್ತು ಬಿಜೆಪಿಯಿಂದ ಜಿ.ಪ್ರೇಮೆಂದರ್ ರೆಡ್ಡಿ ಕಣದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ತೆಲಂಗಾಣದ ಎರಡು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ಇದೇ 14ರಂದು ನಡೆಯಲಿರುವ ಚುನಾವಣೆಯ ಪ್ರಚಾರ ದಿನ ಕಳೆದಂತೆ ಬಿರುಸಿನಿಂದ ಸಾಗಿದ್ದು, ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಪುತ್ರಿಎಸ್. ವಾಣಿ ದೇವಿ ಅವರು ಟಿಆರ್ಎಸ್ ಅಭ್ಯರ್ಥಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.</p>.<p>ಖಮ್ಮಮ್- ನಲಗೊಂಡ-ವಾರಂಗಲ್ ಮತ್ತು ಹೈದರಾಬಾದ್-ರಂಗರೆಡ್ಡಿ-ಮೆಹಬೂಬ್ನಗರ – ಈ ಎರಡು ಪದವೀಧರರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.</p>.<p>ಕಳೆದ ವರ್ಷ ಡುಬ್ಬಾಕ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ್ತು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉಂಟಾದ ಅನಿರೀಕ್ಷಿತ ಹಿನ್ನಡೆಯಿಂದ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಟಿಆರ್ಎಸ್ ಪಕ್ಷ, ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಎರಡೂ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಕಸರತ್ತು ನಡೆಸುತ್ತಿದೆ.</p>.<p>ಶಿಕ್ಷಣ ತಜ್ಞೆ ಎಸ್. ವಾಣಿ ದೇವಿ ಅವರನ್ನು ಹೈದರಾಬಾದ್–ರಂಗಾರೆಡ್ಡಿ–ಮಹಬೂಬ್ನಗರ ಕ್ಷೇತ್ರದಿಂದ ಟಿಆರ್ಎಸ್ ಕಣಕ್ಕಿಳಿಸುತ್ತಿದೆ. ಸದ್ಯ ಆ ಕ್ಷೇತ್ರದಲ್ಲಿ ಇವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಹಾಲಿ ಎಂಎಲ್ಸಿ ಎನ್. ರಾಮಚಂದ್ರರಾವ್ ಕಣದಲ್ಲಿದ್ದಾರೆ.</p>.<p>ವಾಣಿ ದೇವಿ ಅವರು, ಉಪನ್ಯಾಸಕರಾಗಿದ್ದು, ಹಲವು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ರಾಮಚಂದ್ರ ರಾವ್ ಅವರು ಹಿರಿಯ ವಕೀಲರು.</p>.<p>ಖಮ್ಮಮ್- ನಲಗೊಂಡ-ವಾರಂಗಲ್ ಕ್ಷೇತ್ರದಲ್ಲಿ ಹಾಲಿ ಶಾಸಕ ಪಲ್ಲ ರಾಜೇಶ್ವರ ರೆಡ್ಡಿ ಅವರು ಟಿಆರ್ಎಸ್ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ರಾಮುಲು ನಾಯ್ಕ್ ಮತ್ತು ಬಿಜೆಪಿಯಿಂದ ಜಿ.ಪ್ರೇಮೆಂದರ್ ರೆಡ್ಡಿ ಕಣದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>