<p><strong>ಕೋಯಿಕ್ಕೋಡ್:</strong> ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿ ಒಂದು ಕೋಟಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ಬಿಜೆಪಿ ತಿಳಿಸಿದೆ. </p>.<p>ಶಬರಿಮಲೆಯಲ್ಲಿ ಇತ್ತೀಚೆಗೆ ನಡೆದ ಚಿನ್ನ ಕಳ್ಳತನದ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಆರೋಪಿಸಿದರು.</p>.<p>‘ಶಬರಿಮಲೆಗೆ ಹೊರ ದೇಶಗಳಿಂದಲೂ ಭಕ್ತರು ಬರುತ್ತಾರೆ. ದೇವಸ್ಥಾನದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು, ಕೇಂದ್ರವು ಈ ವಿಷಯದಲ್ಲಿ ಭಾಗಿಯಾಗಬೇಕು. ಹೀಗಾಗಿ ಒಂದು ಕೋಟಿ ಜನರ ಸಹಿ ಸಂಗ್ರಹಿಸಿ ಅದನ್ನು ಮೋದಿಯವರಿಗೆ ಕಳುಹಿಸುತ್ತೇವೆ’ ಎಂದರು. </p>.<p>ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ವಿದೇಶಿ ಜಾಲದ ಕೈವಾಡದ ಶಂಕೆ ಇರುವ ಕುರಿತು ಇತ್ತೀಚೆಗೆ ಕೇರಳ ಹೈಕೋರ್ಟ್ ಅವಲೋಕಿಸಿರುವುದು, ಈ ಪ್ರಕರಣವು ಒಬ್ಬ ವ್ಯಕ್ತಿಗೆ ಮಾತ್ರ ಸಂಬಂಧಿಸಿದ್ದಲ್ಲ ಎಂಬುದನ್ನು ತೋರಿಸುತ್ತದೆ ಎಂದರು.</p>.<p>‘ಈ ಪಿತೂರಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ. ಸರ್ಕಾರವೂ ಇದರಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಈ ಮೊದಲೂ ಬಿಜೆಪಿ ಈ ಬಗ್ಗೆ ಮಾತನಾಡಿತ್ತು. ಹೈಕೋರ್ಟ್ ಕೂಡ ಇದೇ ರೀತಿ ಕಳವಳ ವ್ಯಕ್ತಪಡಿಸಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್:</strong> ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿ ಒಂದು ಕೋಟಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ಬಿಜೆಪಿ ತಿಳಿಸಿದೆ. </p>.<p>ಶಬರಿಮಲೆಯಲ್ಲಿ ಇತ್ತೀಚೆಗೆ ನಡೆದ ಚಿನ್ನ ಕಳ್ಳತನದ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಆರೋಪಿಸಿದರು.</p>.<p>‘ಶಬರಿಮಲೆಗೆ ಹೊರ ದೇಶಗಳಿಂದಲೂ ಭಕ್ತರು ಬರುತ್ತಾರೆ. ದೇವಸ್ಥಾನದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು, ಕೇಂದ್ರವು ಈ ವಿಷಯದಲ್ಲಿ ಭಾಗಿಯಾಗಬೇಕು. ಹೀಗಾಗಿ ಒಂದು ಕೋಟಿ ಜನರ ಸಹಿ ಸಂಗ್ರಹಿಸಿ ಅದನ್ನು ಮೋದಿಯವರಿಗೆ ಕಳುಹಿಸುತ್ತೇವೆ’ ಎಂದರು. </p>.<p>ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ವಿದೇಶಿ ಜಾಲದ ಕೈವಾಡದ ಶಂಕೆ ಇರುವ ಕುರಿತು ಇತ್ತೀಚೆಗೆ ಕೇರಳ ಹೈಕೋರ್ಟ್ ಅವಲೋಕಿಸಿರುವುದು, ಈ ಪ್ರಕರಣವು ಒಬ್ಬ ವ್ಯಕ್ತಿಗೆ ಮಾತ್ರ ಸಂಬಂಧಿಸಿದ್ದಲ್ಲ ಎಂಬುದನ್ನು ತೋರಿಸುತ್ತದೆ ಎಂದರು.</p>.<p>‘ಈ ಪಿತೂರಿಯನ್ನು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ. ಸರ್ಕಾರವೂ ಇದರಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಈ ಮೊದಲೂ ಬಿಜೆಪಿ ಈ ಬಗ್ಗೆ ಮಾತನಾಡಿತ್ತು. ಹೈಕೋರ್ಟ್ ಕೂಡ ಇದೇ ರೀತಿ ಕಳವಳ ವ್ಯಕ್ತಪಡಿಸಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>