<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಸನಿಹ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್ ಹಾರಾಟ ನಡೆಸಿದ್ದರಿಂದ ಪಂಪಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದೆ. ವಾತಾವರಣ ಪೂರಕವಾದ ನಂತರ ಕೊಚ್ಚಿಯಲ್ಲಿನ ನೆಲೆಗೆ ಮರಳಿದೆ ಎಂದು ಐಸಿಜಿ ತಿಳಿಸಿದೆ.</p>.<p>ಬೆಟ್ಟದ ದೇಗುಲದ ಮೇಲ್ಭಾಗಕ್ಕೆ ತೀರಾ ಸಮೀಪದಲ್ಲಿ ಹೆಲಿಕಾಪ್ಟರ್ ಗುರುವಾರ ಹಾರಾಟ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.</p>.<p>ಪ್ರತಿ ವರ್ಷವೂ ಅಸಂಖ್ಯಾತ ಭಕ್ತರು ಭೇಟಿ ನೀಡುವ ಬೆಟ್ಟದ ದೇಗುಲದ ಸೂಕ್ಷ್ಮ ಭದ್ರತಾ ಸ್ವರೂಪವನ್ನು ಪರಿಗಣಿಸಿದ ಶಬರಿಮಲೆ ವಿಶೇಷ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ಇದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಎಫ್ಐಆರ್ನಲ್ಲಿ ಯಾರನ್ನೂ ಆರೋಪಿಗಳೆಂದು ಉಲ್ಲೇಖಿಸಿಲ್ಲ. ಸಿಜಿ 821 ಹೆಲಿಕಾಪ್ಟರ್ ಶಬರಿಮಲೆ ಸನ್ನಿಧಿಗೆ ಕಡಿಮೆ ಅಂತರದಲ್ಲಿ ನಾಲ್ಕು ಬಾರಿ ಹಾರಾಟ ನಡೆಸಿತು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಸನಿಹ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್ ಹಾರಾಟ ನಡೆಸಿದ್ದರಿಂದ ಪಂಪಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದೆ. ವಾತಾವರಣ ಪೂರಕವಾದ ನಂತರ ಕೊಚ್ಚಿಯಲ್ಲಿನ ನೆಲೆಗೆ ಮರಳಿದೆ ಎಂದು ಐಸಿಜಿ ತಿಳಿಸಿದೆ.</p>.<p>ಬೆಟ್ಟದ ದೇಗುಲದ ಮೇಲ್ಭಾಗಕ್ಕೆ ತೀರಾ ಸಮೀಪದಲ್ಲಿ ಹೆಲಿಕಾಪ್ಟರ್ ಗುರುವಾರ ಹಾರಾಟ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.</p>.<p>ಪ್ರತಿ ವರ್ಷವೂ ಅಸಂಖ್ಯಾತ ಭಕ್ತರು ಭೇಟಿ ನೀಡುವ ಬೆಟ್ಟದ ದೇಗುಲದ ಸೂಕ್ಷ್ಮ ಭದ್ರತಾ ಸ್ವರೂಪವನ್ನು ಪರಿಗಣಿಸಿದ ಶಬರಿಮಲೆ ವಿಶೇಷ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ಇದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಎಫ್ಐಆರ್ನಲ್ಲಿ ಯಾರನ್ನೂ ಆರೋಪಿಗಳೆಂದು ಉಲ್ಲೇಖಿಸಿಲ್ಲ. ಸಿಜಿ 821 ಹೆಲಿಕಾಪ್ಟರ್ ಶಬರಿಮಲೆ ಸನ್ನಿಧಿಗೆ ಕಡಿಮೆ ಅಂತರದಲ್ಲಿ ನಾಲ್ಕು ಬಾರಿ ಹಾರಾಟ ನಡೆಸಿತು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>