<p><strong>ಪತ್ತಂತಿಟ್ಟ (ಕೇರಳ):</strong> ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಸ್ಥಳದಲ್ಲೇ ಬುಕಿಂಗ್ ಮಾಡಲು ದಿನವೊಂದಕ್ಕೆ 5 ಸಾವಿರ ಜನರಿಗಷ್ಟೇ ಅವಕಾಶ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಗುರುವಾರ ಪ್ರಕಟಿಸಿದೆ.</p><p>ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗ ಸ್ಥಳದಲ್ಲೇ ದರ್ಶನಕ್ಕೆ ಬುಕಿಂಗ್ ಮಾಡುವ ಮಿತಿಯನ್ನು ಕಡಿತಗೊಳಿಸಲಾಗಿದೆ ಎಂದು ಟಿಡಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.</p>.ಶಬರಿಮಲೆಯಲ್ಲಿ ಜನದಟ್ಟಣೆ: 48 ಗಂಟೆಯಲ್ಲಿ 2 ಲಕ್ಷ ಭಕ್ತರ ಭೇಟಿ; ಮಹಿಳೆ ಸಾವು.<p>ನೀಲಕ್ಕಲ್ ಮತ್ತು ವಂಡಿಪೆರಿಯಾರ್ ಕೇಂದ್ರಗಳಲ್ಲಿ ಮಾತ್ರ ಸ್ಥಳದಲ್ಲೇ ಬುಕಿಂಗ್ ಲಭ್ಯವಿರುತ್ತದೆ. ಪಂಪಾ, ಎರುಮೇಲಿ ಮತ್ತು ಚೆಂಗನ್ನೂರಿನಲ್ಲಿ ಈ ಸೌಲಭ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನ. 24ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. ಸಾಧ್ಯವಾದಷ್ಟು ಭಕ್ತರು ವರ್ಚುವಲ್ ಕ್ಯೂನಲ್ಲಿ ಬುಕಿಂಗ್ ಮಾಡಿಕೊಳ್ಳಿ ಎಂದು ಟಿಡಿಬಿ ಒತ್ತಾಯಿಸಿದೆ.</p>.Sabarimala: ಬಾಗಿಲು ತೆರೆದ ಶಬರಿಮಲೆ ದೇಗುಲ.<p>ನ.17ರಂದು ದೇಗುಲದ ಬಾಗಿಲು ತೆರೆದ 48 ಗಂಟೆಯೊಳಗೆ ಸುಮಾರು ಎರಡು ಲಕ್ಷ ಯಾತ್ರಿಕರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಈ ಕುರಿತು ಕೇರಳ ಹೈಕೋರ್ಟ್ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ ಮತ್ತು ಕೆ.ವಿ ಜಯಕುಮಾರ್ ಬುಧವಾರ ದೇವಾಲಯದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.</p><p>ಮಂಡಲ– ಮಕರವಿಳಕ್ಕು ಋತುವಿನಲ್ಲಿ ಪ್ರತಿದಿನ ಒಂದು ಲಕ್ಷ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಹೀಗಿದ್ದರೂ, ಈ ಹಿಂದಿನ ಮಾರ್ಗಸೂಚಿಗಳನ್ನು ಏಕೆ ಪಾಲನೆ ಮಾಡಿಲ್ಲ. ಜನದಟ್ಟಣೆಯನ್ನು ನಿಭಾಯಿಸಲು ಏಕೆ ಮುಂಚಿತವಾಗಿ ತಯಾರಿ ನಡೆಸಿಕೊಂಡಿಲ್ಲ’ ಎಂದು ನ್ಯಾಯಾಲಯವು ಟಿಡಿಬಿ ಪ್ರಶ್ನಿಸಿತ್ತು.</p>.Sabarimala | ಶಬರಿಮಲೆ ದೇವಾಲಯದಲ್ಲಿ ಜನದಟ್ಟಣೆ: ಹೈಕೋರ್ಟ್ ತರಾಟೆ.ಶಬರಿಮಲೆ: ರಾಜ್ಯದ ಯಾತ್ರಿಗಳಿಗೆ ಭದ್ರತೆ ಕೋರಿ ಕೇರಳ ಸರ್ಕಾರಕ್ಕೆ ಪತ್ರ.ಶಬರಿಮಲೆ: ಸರತಿಯಲ್ಲಿ ಲಕ್ಷಾಂತರ ಭಕ್ತರು, ನೀರು ಸಿಗದೆ ಪರದಾಟ .ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತಂತಿಟ್ಟ (ಕೇರಳ):</strong> ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಸ್ಥಳದಲ್ಲೇ ಬುಕಿಂಗ್ ಮಾಡಲು ದಿನವೊಂದಕ್ಕೆ 5 ಸಾವಿರ ಜನರಿಗಷ್ಟೇ ಅವಕಾಶ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಗುರುವಾರ ಪ್ರಕಟಿಸಿದೆ.</p><p>ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗ ಸ್ಥಳದಲ್ಲೇ ದರ್ಶನಕ್ಕೆ ಬುಕಿಂಗ್ ಮಾಡುವ ಮಿತಿಯನ್ನು ಕಡಿತಗೊಳಿಸಲಾಗಿದೆ ಎಂದು ಟಿಡಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.</p>.ಶಬರಿಮಲೆಯಲ್ಲಿ ಜನದಟ್ಟಣೆ: 48 ಗಂಟೆಯಲ್ಲಿ 2 ಲಕ್ಷ ಭಕ್ತರ ಭೇಟಿ; ಮಹಿಳೆ ಸಾವು.<p>ನೀಲಕ್ಕಲ್ ಮತ್ತು ವಂಡಿಪೆರಿಯಾರ್ ಕೇಂದ್ರಗಳಲ್ಲಿ ಮಾತ್ರ ಸ್ಥಳದಲ್ಲೇ ಬುಕಿಂಗ್ ಲಭ್ಯವಿರುತ್ತದೆ. ಪಂಪಾ, ಎರುಮೇಲಿ ಮತ್ತು ಚೆಂಗನ್ನೂರಿನಲ್ಲಿ ಈ ಸೌಲಭ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನ. 24ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. ಸಾಧ್ಯವಾದಷ್ಟು ಭಕ್ತರು ವರ್ಚುವಲ್ ಕ್ಯೂನಲ್ಲಿ ಬುಕಿಂಗ್ ಮಾಡಿಕೊಳ್ಳಿ ಎಂದು ಟಿಡಿಬಿ ಒತ್ತಾಯಿಸಿದೆ.</p>.Sabarimala: ಬಾಗಿಲು ತೆರೆದ ಶಬರಿಮಲೆ ದೇಗುಲ.<p>ನ.17ರಂದು ದೇಗುಲದ ಬಾಗಿಲು ತೆರೆದ 48 ಗಂಟೆಯೊಳಗೆ ಸುಮಾರು ಎರಡು ಲಕ್ಷ ಯಾತ್ರಿಕರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಈ ಕುರಿತು ಕೇರಳ ಹೈಕೋರ್ಟ್ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ ಮತ್ತು ಕೆ.ವಿ ಜಯಕುಮಾರ್ ಬುಧವಾರ ದೇವಾಲಯದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.</p><p>ಮಂಡಲ– ಮಕರವಿಳಕ್ಕು ಋತುವಿನಲ್ಲಿ ಪ್ರತಿದಿನ ಒಂದು ಲಕ್ಷ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಹೀಗಿದ್ದರೂ, ಈ ಹಿಂದಿನ ಮಾರ್ಗಸೂಚಿಗಳನ್ನು ಏಕೆ ಪಾಲನೆ ಮಾಡಿಲ್ಲ. ಜನದಟ್ಟಣೆಯನ್ನು ನಿಭಾಯಿಸಲು ಏಕೆ ಮುಂಚಿತವಾಗಿ ತಯಾರಿ ನಡೆಸಿಕೊಂಡಿಲ್ಲ’ ಎಂದು ನ್ಯಾಯಾಲಯವು ಟಿಡಿಬಿ ಪ್ರಶ್ನಿಸಿತ್ತು.</p>.Sabarimala | ಶಬರಿಮಲೆ ದೇವಾಲಯದಲ್ಲಿ ಜನದಟ್ಟಣೆ: ಹೈಕೋರ್ಟ್ ತರಾಟೆ.ಶಬರಿಮಲೆ: ರಾಜ್ಯದ ಯಾತ್ರಿಗಳಿಗೆ ಭದ್ರತೆ ಕೋರಿ ಕೇರಳ ಸರ್ಕಾರಕ್ಕೆ ಪತ್ರ.ಶಬರಿಮಲೆ: ಸರತಿಯಲ್ಲಿ ಲಕ್ಷಾಂತರ ಭಕ್ತರು, ನೀರು ಸಿಗದೆ ಪರದಾಟ .ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>