<p><strong>ಪತ್ತನಂತಿಟ್ಟ:</strong> ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ದ್ವಾರಪಾಲಕ ಮೂರ್ತಿಗಳ ವೈಜ್ಞಾನಿಕ ಪರೀಕ್ಷೆಯನ್ನು ಸೋಮವಾರ ಮಧ್ಯಾಹ್ನ 1 ಗಂಟೆ ನಂತರ ದೇವ ಅನುಜ್ಞೆ (ದೈವಿಕ ಅನುಮತಿ) ವಿಧಿವಿಧಾನಗಳ ಬಳಿಕ ನಡೆಸಲಿದೆ. </p>.<p>ಡಿವೈಎಸ್ಪಿ ಎಸ್. ಶಶಿಧರನ್ ನೇತೃತ್ವದ ತಂಡವು ಬೆಟ್ಟದ ದೇವಾಲಯಕ್ಕೆ ಭಾನುವಾರ ತಲುಪಿದೆ. ಪೊಲೀಸರಲ್ಲದೆ, ರಾಸಾಯನಿಕ ವಿಶ್ಲೇಷಕರು ಸೇರಿದಂತೆ ವಿಧಿವಿಜ್ಞಾನ ತಜ್ಞರು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವೈಜ್ಞಾನಿಕ ಪರೀಕ್ಷೆ ನಡೆಸಲು ಅನುಮತಿ ಕೋರಿ ಎಸ್ಐಟಿ ನ್ಯಾಯಾಲಯದ ಮೊರೆ ಹೋಗಿತ್ತು. ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಪಕ್ಕದ ಕಂಬ ಫಲಕಗಳನ್ನು ತೂಕ ಮಾಡಲು ಎಸ್ಐಟಿಗೆ ನ್ಯಾಯಾಲಯ ನಿರ್ದೇಶಿಸಿತ್ತು. </p>.<p>ಲೋಹಲೇಪನದ ಶುದ್ಧತೆ ಮತ್ತು ಗುಣಮಟ್ಟವನ್ನು ನಿರ್ಣಯಿಸಲು ಚಿನ್ನದ ಹೊದಿಕೆಯ ಮಾದರಿಯನ್ನು ತೆಗೆದುಕೊಳ್ಳಲು, ಫಲಕಗಳ ಮೇಲ್ಮೈ ವಿಸ್ತೀರ್ಣವನ್ನು ಅಳೆಯಲು, ದ್ವಾರಪಾಲಕ ಮೂರ್ತಿಗಳ ಕವಚಗಳು ಮತ್ತು ಬಾಗಿಲಿನ ಚೌಕಟ್ಟುಗಳಲ್ಲಿನ ತಾಮ್ರದ ಮಾದರಿಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಸೂಚಿಸಿತ್ತು. ಈ ಮಾದರಿಗಳನ್ನು ವಿದ್ಯುತ್ ವಾಹಕತ್ವ, ಸೂಕ್ಷ್ಮ ರಚನೆ ಪರೀಕ್ಷೆಗಳು ಸೇರಿದಂತೆ ವೈಜ್ಞಾನಿಕ ವಿಶ್ಲೇಷಣೆಗಳಿಗೆ ಒಳಪಡಿಸಬೇಕು ಎಂದು ನ್ಯಾಯಾಲಯ ಹೇಳಿತ್ತು.</p> .Sabarimala Gold Theft Row | ಸಾಕ್ಷ್ಯ ಸಂಗ್ರಹ: ಪ್ರಮುಖ ಆರೋಪಿ ಬೆಂಗಳೂರಿಗೆ.<p>ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಮುನ್ನ ನ.15ರೊಳಗೆ ಎಸ್ಐಟಿ ಪರೀಕ್ಷೆಯನ್ನು ಪೂರ್ಣಗೊಳಿಸಲು ಉದ್ದೇಶಿಸಿತ್ತು. ಆದರೆ, ದೇವ ಅನುಜ್ಞೆ ವಿಧಿಗಳ ನಂತರವೇ ವೈಜ್ಞಾನಿಕ ಪರೀಕ್ಷೆ ನಡೆಸಬೇಕೆಂದು ತಂತ್ರಿ (ಮುಖ್ಯ ಅರ್ಚಕ) ಸೂಚಿಸಿದ್ದರು. ಅವರ ಸಲಹೆ ಮೇರೆಗೆ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಗ್ರ ಪೂಜೆ ಮತ್ತು ದೇವಸ್ಥಾನ ಮುಚ್ಚಿದ ನಂತರ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಎಸ್ಐಟಿಗೆ ನಿರ್ದೇಶನ ನೀಡಿತ್ತು.</p>.Sabarimala | ಚಿನ್ನ ಕಳವು: ಕ್ರಿಮಿನಲ್ ಪ್ರಕರಣ ದಾಖಲಿಸಿ–ಕೇರಳ ಹೈಕೋರ್ಟ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ದ್ವಾರಪಾಲಕ ಮೂರ್ತಿಗಳ ವೈಜ್ಞಾನಿಕ ಪರೀಕ್ಷೆಯನ್ನು ಸೋಮವಾರ ಮಧ್ಯಾಹ್ನ 1 ಗಂಟೆ ನಂತರ ದೇವ ಅನುಜ್ಞೆ (ದೈವಿಕ ಅನುಮತಿ) ವಿಧಿವಿಧಾನಗಳ ಬಳಿಕ ನಡೆಸಲಿದೆ. </p>.<p>ಡಿವೈಎಸ್ಪಿ ಎಸ್. ಶಶಿಧರನ್ ನೇತೃತ್ವದ ತಂಡವು ಬೆಟ್ಟದ ದೇವಾಲಯಕ್ಕೆ ಭಾನುವಾರ ತಲುಪಿದೆ. ಪೊಲೀಸರಲ್ಲದೆ, ರಾಸಾಯನಿಕ ವಿಶ್ಲೇಷಕರು ಸೇರಿದಂತೆ ವಿಧಿವಿಜ್ಞಾನ ತಜ್ಞರು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವೈಜ್ಞಾನಿಕ ಪರೀಕ್ಷೆ ನಡೆಸಲು ಅನುಮತಿ ಕೋರಿ ಎಸ್ಐಟಿ ನ್ಯಾಯಾಲಯದ ಮೊರೆ ಹೋಗಿತ್ತು. ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಪಕ್ಕದ ಕಂಬ ಫಲಕಗಳನ್ನು ತೂಕ ಮಾಡಲು ಎಸ್ಐಟಿಗೆ ನ್ಯಾಯಾಲಯ ನಿರ್ದೇಶಿಸಿತ್ತು. </p>.<p>ಲೋಹಲೇಪನದ ಶುದ್ಧತೆ ಮತ್ತು ಗುಣಮಟ್ಟವನ್ನು ನಿರ್ಣಯಿಸಲು ಚಿನ್ನದ ಹೊದಿಕೆಯ ಮಾದರಿಯನ್ನು ತೆಗೆದುಕೊಳ್ಳಲು, ಫಲಕಗಳ ಮೇಲ್ಮೈ ವಿಸ್ತೀರ್ಣವನ್ನು ಅಳೆಯಲು, ದ್ವಾರಪಾಲಕ ಮೂರ್ತಿಗಳ ಕವಚಗಳು ಮತ್ತು ಬಾಗಿಲಿನ ಚೌಕಟ್ಟುಗಳಲ್ಲಿನ ತಾಮ್ರದ ಮಾದರಿಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳಿಗೆ ಸೂಚಿಸಿತ್ತು. ಈ ಮಾದರಿಗಳನ್ನು ವಿದ್ಯುತ್ ವಾಹಕತ್ವ, ಸೂಕ್ಷ್ಮ ರಚನೆ ಪರೀಕ್ಷೆಗಳು ಸೇರಿದಂತೆ ವೈಜ್ಞಾನಿಕ ವಿಶ್ಲೇಷಣೆಗಳಿಗೆ ಒಳಪಡಿಸಬೇಕು ಎಂದು ನ್ಯಾಯಾಲಯ ಹೇಳಿತ್ತು.</p> .Sabarimala Gold Theft Row | ಸಾಕ್ಷ್ಯ ಸಂಗ್ರಹ: ಪ್ರಮುಖ ಆರೋಪಿ ಬೆಂಗಳೂರಿಗೆ.<p>ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಮುನ್ನ ನ.15ರೊಳಗೆ ಎಸ್ಐಟಿ ಪರೀಕ್ಷೆಯನ್ನು ಪೂರ್ಣಗೊಳಿಸಲು ಉದ್ದೇಶಿಸಿತ್ತು. ಆದರೆ, ದೇವ ಅನುಜ್ಞೆ ವಿಧಿಗಳ ನಂತರವೇ ವೈಜ್ಞಾನಿಕ ಪರೀಕ್ಷೆ ನಡೆಸಬೇಕೆಂದು ತಂತ್ರಿ (ಮುಖ್ಯ ಅರ್ಚಕ) ಸೂಚಿಸಿದ್ದರು. ಅವರ ಸಲಹೆ ಮೇರೆಗೆ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಗ್ರ ಪೂಜೆ ಮತ್ತು ದೇವಸ್ಥಾನ ಮುಚ್ಚಿದ ನಂತರ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಎಸ್ಐಟಿಗೆ ನಿರ್ದೇಶನ ನೀಡಿತ್ತು.</p>.Sabarimala | ಚಿನ್ನ ಕಳವು: ಕ್ರಿಮಿನಲ್ ಪ್ರಕರಣ ದಾಖಲಿಸಿ–ಕೇರಳ ಹೈಕೋರ್ಟ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>