<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಸಮಗ್ರ ತನಿಖೆ ಎಂದ ಮೋದಿ.<p>ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರೊಂದಿಗೆ ಎಷ್ಟು ಬಾರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ, ಅವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯಾ ಎನ್ನುವುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.</p><p>2019ರಲ್ಲಿ ಉನ್ನಿಕೃಷ್ಣನ್ ಪೋಟಿ ಚೆನ್ನೈನಲ್ಲಿ ಸಂಘಟಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗಿಯಾದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಎಸ್ಐಟಿ ಅವರನ್ನು ವಿಚಾರಣೆಗೊಳಪಡಿಸಿದೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಮುರಾರಿ ಬಾಬುಗೆ ಜಾಮೀನು.<p>ಪ್ರಕರಣ ಸಂಬಂಧ ಟ್ರಾವಂಕೂರ್ ದೇವಸ್ವಂ ಬೋರ್ಡ್ನ (ಟಿಡಿಬಿ) ಮಾಜಿ ಅಧಿಕಾರಿಗಳಾದ ಬಿ. ಮುರಳಿ ಬಾಬು ಹಾಗೂ ಎಸ್. ಶ್ರೀಕುಮಾರ್ ಎಸ್ಐಟಿ ಬಂಧಿಸಿತ್ತು. ಇತ್ತೀಚೆಗಷ್ಟೇ ಅವರು ಜಾಮೀನು ಪಡೆದುಕೊಂಡಿದ್ದರು.</p><p>ನಿಗದಿತ 90 ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರು ವಿಫಲರಾಗಿದ್ದರಿಂದ ಜಾಮೀನು ಲಭಿಸಿತ್ತು.</p>.ಕೇರಳಕ್ಕೆ ಶಬರಿಮಲೆ ‘ಗ್ಯಾರಂಟಿ’,ತಮಿಳುನಾಡಲ್ಲಿ ದೀಪಸ್ತಂಭ:ಮೋದಿ ಚುನಾವಣೆ ಸಿದ್ಧತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಸಮಗ್ರ ತನಿಖೆ ಎಂದ ಮೋದಿ.<p>ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರೊಂದಿಗೆ ಎಷ್ಟು ಬಾರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ, ಅವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯಾ ಎನ್ನುವುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.</p><p>2019ರಲ್ಲಿ ಉನ್ನಿಕೃಷ್ಣನ್ ಪೋಟಿ ಚೆನ್ನೈನಲ್ಲಿ ಸಂಘಟಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗಿಯಾದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಎಸ್ಐಟಿ ಅವರನ್ನು ವಿಚಾರಣೆಗೊಳಪಡಿಸಿದೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಮುರಾರಿ ಬಾಬುಗೆ ಜಾಮೀನು.<p>ಪ್ರಕರಣ ಸಂಬಂಧ ಟ್ರಾವಂಕೂರ್ ದೇವಸ್ವಂ ಬೋರ್ಡ್ನ (ಟಿಡಿಬಿ) ಮಾಜಿ ಅಧಿಕಾರಿಗಳಾದ ಬಿ. ಮುರಳಿ ಬಾಬು ಹಾಗೂ ಎಸ್. ಶ್ರೀಕುಮಾರ್ ಎಸ್ಐಟಿ ಬಂಧಿಸಿತ್ತು. ಇತ್ತೀಚೆಗಷ್ಟೇ ಅವರು ಜಾಮೀನು ಪಡೆದುಕೊಂಡಿದ್ದರು.</p><p>ನಿಗದಿತ 90 ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರು ವಿಫಲರಾಗಿದ್ದರಿಂದ ಜಾಮೀನು ಲಭಿಸಿತ್ತು.</p>.ಕೇರಳಕ್ಕೆ ಶಬರಿಮಲೆ ‘ಗ್ಯಾರಂಟಿ’,ತಮಿಳುನಾಡಲ್ಲಿ ದೀಪಸ್ತಂಭ:ಮೋದಿ ಚುನಾವಣೆ ಸಿದ್ಧತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>