<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಟಸ್ಥ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿದ್ದಾರೆ.</p><p>ಕೇರಳಕ್ಕೆ ಭೇಟಿ ನೀಡಿರುವ ಅಮಿತ್ ಶಾ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾಯಿತರಾದ ಬಿಜೆಪಿ ಪ್ರತಿನಿಧಿಗಳನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು. ಈ ವೇಳೆ ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ 'ಮಿಷನ್ 2026' ಕಾರ್ಯಕ್ರಮವನ್ನು ಉದ್ಘಾಟಿಸಿದರು. </p>.ಚಿನ್ನ ನಾಪತ್ತೆ ಪ್ರಕರಣ: ಶಬರಿಮಲೆ ಮುಖ್ಯ ಅರ್ಚಕರ ಬಂಧಿಸಿದ ಎಸ್ಐಟಿ.ಶಬರಿಮಲೆ ಏರ್ಪೋರ್ಟ್: ಭೂಸ್ವಾಧೀನ ಪ್ರಕ್ರಿಯೆಗೆ ಕೇರಳ ಹೈಕೋರ್ಟ್ ತಡೆ.<p>'ಶಬರಿಮಲೆಯ ಸಂಪತ್ತನ್ನು ರಕ್ಷಿಸಲು ವಿಫಲರಾದವರಿಂದ ಜನರ ನಂಬಿಕೆಯನ್ನು ಉಳಿಸಲು ಸಾಧ್ಯವಿಲ್ಲ. ಕೇರಳದಲ್ಲಿ ಭಕ್ತರ ನಂಬಿಕೆಯನ್ನು ಬಿಜೆಪಿಯಿಂದ ಮಾತ್ರ ರಕ್ಷಿಸಲು ಸಾಧ್ಯ' ಎಂದು ಹೇಳಿದ್ದಾರೆ. </p><p>'ಶಬರಿಮಲೆ ಪ್ರಕರಣದಲ್ಲಿ ಎಫ್ಐಆರ್ ಗಮನಿಸಿದ್ದೇನೆ. ಆರೋಪಿಗಳ ರಕ್ಷಣೆಗಾಗಿಯೇ ಅದನ್ನು ರೂಪಿಸಲಾಗಿದೆ. ಎಲ್ಡಿಎಫ್ನ ಇಬ್ಬರು ವ್ಯಕ್ತಿಗಳು ಇರುವಾಗ ನಿಷ್ಪಕ್ಷಪಾತ ತನಿಖೆ ನಿರೀಕ್ಷಿಸಲು ಹೇಗೆ ಸಾಧ್ಯ? ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿರುವ ಬಗ್ಗೆಯೂ ಸಾಕ್ಷ್ಯಗಳಿವೆ. ಅದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ' ಎಂದಿದ್ದಾರೆ. </p><p>'ಶಬರಿಮಲೆ ಪ್ರಕರಣ ತನಿಖೆಯನ್ನು ತಟಸ್ಥ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ನಾನು ಸಿಎಂ ಪಿಣರಾಯಿ ಅವರನ್ನು ಒತ್ತಾಯಿಸುತ್ತೇನೆ. ಬಿಜೆಪಿಯಿಂದ ಪ್ರತಿಭಟನೆ ಮುಂದುವರಿಯಲಿದ್ದು, ಮನೆ ಮನೆಗೆ ಜಾಗೃತಿ ಅಭಿಯಾನ ಕೈಗೊಳ್ಳಲಿದ್ದೇವೆ' ಎಂದಿದ್ದಾರೆ. </p><p>'ಜಗತ್ತಿನಾದ್ಯಂತ ಕಮ್ಯುನಿಸಂ ಅಂತ್ಯ ಕಂಡಿದ್ದು, ಭಾರತದಲ್ಲಿ ಕಾಂಗ್ರೆಸ್ನ ಅವನತಿಯಾಗಿದೆ. ಕೇರಳದಲ್ಲಿ ಅಭಿವೃದ್ಧಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಮ್ಮ ಹಾದಿ ಸುಲಭವಲ್ಲ. ಸವಾಲಿನಿಂದ ಕೂಡಿದೆ. ಕೇರಳದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ನಮ್ಮ ಗುರಿಯಾಗಿದೆ' ಎಂದು ಹೇಳಿದ್ದಾರೆ. </p>
<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಟಸ್ಥ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿದ್ದಾರೆ.</p><p>ಕೇರಳಕ್ಕೆ ಭೇಟಿ ನೀಡಿರುವ ಅಮಿತ್ ಶಾ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾಯಿತರಾದ ಬಿಜೆಪಿ ಪ್ರತಿನಿಧಿಗಳನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು. ಈ ವೇಳೆ ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ 'ಮಿಷನ್ 2026' ಕಾರ್ಯಕ್ರಮವನ್ನು ಉದ್ಘಾಟಿಸಿದರು. </p>.ಚಿನ್ನ ನಾಪತ್ತೆ ಪ್ರಕರಣ: ಶಬರಿಮಲೆ ಮುಖ್ಯ ಅರ್ಚಕರ ಬಂಧಿಸಿದ ಎಸ್ಐಟಿ.ಶಬರಿಮಲೆ ಏರ್ಪೋರ್ಟ್: ಭೂಸ್ವಾಧೀನ ಪ್ರಕ್ರಿಯೆಗೆ ಕೇರಳ ಹೈಕೋರ್ಟ್ ತಡೆ.<p>'ಶಬರಿಮಲೆಯ ಸಂಪತ್ತನ್ನು ರಕ್ಷಿಸಲು ವಿಫಲರಾದವರಿಂದ ಜನರ ನಂಬಿಕೆಯನ್ನು ಉಳಿಸಲು ಸಾಧ್ಯವಿಲ್ಲ. ಕೇರಳದಲ್ಲಿ ಭಕ್ತರ ನಂಬಿಕೆಯನ್ನು ಬಿಜೆಪಿಯಿಂದ ಮಾತ್ರ ರಕ್ಷಿಸಲು ಸಾಧ್ಯ' ಎಂದು ಹೇಳಿದ್ದಾರೆ. </p><p>'ಶಬರಿಮಲೆ ಪ್ರಕರಣದಲ್ಲಿ ಎಫ್ಐಆರ್ ಗಮನಿಸಿದ್ದೇನೆ. ಆರೋಪಿಗಳ ರಕ್ಷಣೆಗಾಗಿಯೇ ಅದನ್ನು ರೂಪಿಸಲಾಗಿದೆ. ಎಲ್ಡಿಎಫ್ನ ಇಬ್ಬರು ವ್ಯಕ್ತಿಗಳು ಇರುವಾಗ ನಿಷ್ಪಕ್ಷಪಾತ ತನಿಖೆ ನಿರೀಕ್ಷಿಸಲು ಹೇಗೆ ಸಾಧ್ಯ? ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿರುವ ಬಗ್ಗೆಯೂ ಸಾಕ್ಷ್ಯಗಳಿವೆ. ಅದನ್ನು ತಳ್ಳಿ ಹಾಕಲು ಸಾಧ್ಯವಿಲ್ಲ' ಎಂದಿದ್ದಾರೆ. </p><p>'ಶಬರಿಮಲೆ ಪ್ರಕರಣ ತನಿಖೆಯನ್ನು ತಟಸ್ಥ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ನಾನು ಸಿಎಂ ಪಿಣರಾಯಿ ಅವರನ್ನು ಒತ್ತಾಯಿಸುತ್ತೇನೆ. ಬಿಜೆಪಿಯಿಂದ ಪ್ರತಿಭಟನೆ ಮುಂದುವರಿಯಲಿದ್ದು, ಮನೆ ಮನೆಗೆ ಜಾಗೃತಿ ಅಭಿಯಾನ ಕೈಗೊಳ್ಳಲಿದ್ದೇವೆ' ಎಂದಿದ್ದಾರೆ. </p><p>'ಜಗತ್ತಿನಾದ್ಯಂತ ಕಮ್ಯುನಿಸಂ ಅಂತ್ಯ ಕಂಡಿದ್ದು, ಭಾರತದಲ್ಲಿ ಕಾಂಗ್ರೆಸ್ನ ಅವನತಿಯಾಗಿದೆ. ಕೇರಳದಲ್ಲಿ ಅಭಿವೃದ್ಧಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಮ್ಮ ಹಾದಿ ಸುಲಭವಲ್ಲ. ಸವಾಲಿನಿಂದ ಕೂಡಿದೆ. ಕೇರಳದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ನಮ್ಮ ಗುರಿಯಾಗಿದೆ' ಎಂದು ಹೇಳಿದ್ದಾರೆ. </p>