<p><strong>ಕೊಲ್ಲಂ:</strong> ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇಗುಲದ ಶ್ರೀಕೋವಿಲ್ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. </p><p>ಆದರೂ ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ಪೋಟಿ ಅವರು ಸದ್ಯ ಜೈಲಿನಲ್ಲೇ ಕಾಲ ಕಳೆಯಬೇಕಿದೆ. </p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ,ಕರ್ನಾಟಕ, ತ.ನಾಡಿನ 21 ಸ್ಥಳಗಳಲ್ಲಿ ED ದಾಳಿ.ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ವೈಜ್ಞಾನಿಕ ವಿಶ್ಲೇಷಣೆ ವರದಿ SITಗೆ ಹಸ್ತಾಂತರ.<p>ಶ್ರೀಕೋವಿಲ್ ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳವು ಪ್ರಕರಣದಲ್ಲಿ ವಿಜಿಲೆನ್ಸ್ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ. </p><p>90 ದಿನಗಳ ಅವಧಿ ಮುಗಿದರೂ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪ ಪಟ್ಟಿ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಪೋಟಿ ಅವರು ಜಾಮೀನು ಕೋರಿದ್ದರು. </p><p>ಈವರೆಗೆ ಎರಡು ಪ್ರಕರಣಗಳಲ್ಲಿ ಪೋಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಇಬ್ಬರು ಮಾಜಿ ಅಧ್ಯಕ್ಷರು ಸೇರಿದಂತೆ 12 ಮಂದಿಯನ್ನು ಎಸ್ಐಟಿ ಬಂಧಿಸಿದೆ. </p><p>ಜಾಮೀನು ನೀಡಿರುವ ಕಾರಣ ಹಾಗೂ ಷರತ್ತುಗಳ ಕುರಿತು ವಿವರವಾದ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. </p><p>ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದ್ದರು. </p><p>ರಾಜಕೀಯವಾಗಿ ಸೂಕ್ಷ್ಮವಾದ ಈ ಪ್ರಕರಣವನ್ನು ಕೇರಳ ಹೈಕೋರ್ಟ್ನ ಮೇಲ್ವಿಚಾರಣೆಯಲ್ಲಿ ರಾಜ್ಯ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ:</strong> ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇಗುಲದ ಶ್ರೀಕೋವಿಲ್ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. </p><p>ಆದರೂ ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ಪೋಟಿ ಅವರು ಸದ್ಯ ಜೈಲಿನಲ್ಲೇ ಕಾಲ ಕಳೆಯಬೇಕಿದೆ. </p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ,ಕರ್ನಾಟಕ, ತ.ನಾಡಿನ 21 ಸ್ಥಳಗಳಲ್ಲಿ ED ದಾಳಿ.ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ವೈಜ್ಞಾನಿಕ ವಿಶ್ಲೇಷಣೆ ವರದಿ SITಗೆ ಹಸ್ತಾಂತರ.<p>ಶ್ರೀಕೋವಿಲ್ ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳವು ಪ್ರಕರಣದಲ್ಲಿ ವಿಜಿಲೆನ್ಸ್ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ. </p><p>90 ದಿನಗಳ ಅವಧಿ ಮುಗಿದರೂ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪ ಪಟ್ಟಿ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಪೋಟಿ ಅವರು ಜಾಮೀನು ಕೋರಿದ್ದರು. </p><p>ಈವರೆಗೆ ಎರಡು ಪ್ರಕರಣಗಳಲ್ಲಿ ಪೋಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಇಬ್ಬರು ಮಾಜಿ ಅಧ್ಯಕ್ಷರು ಸೇರಿದಂತೆ 12 ಮಂದಿಯನ್ನು ಎಸ್ಐಟಿ ಬಂಧಿಸಿದೆ. </p><p>ಜಾಮೀನು ನೀಡಿರುವ ಕಾರಣ ಹಾಗೂ ಷರತ್ತುಗಳ ಕುರಿತು ವಿವರವಾದ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. </p><p>ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದ್ದರು. </p><p>ರಾಜಕೀಯವಾಗಿ ಸೂಕ್ಷ್ಮವಾದ ಈ ಪ್ರಕರಣವನ್ನು ಕೇರಳ ಹೈಕೋರ್ಟ್ನ ಮೇಲ್ವಿಚಾರಣೆಯಲ್ಲಿ ರಾಜ್ಯ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>